Wednesday, December 17, 2025
Wednesday, December 17, 2025

Grant Registration ಸಹಾಯ ಧನ ನೋಂದಣಿಗೆ ಅರ್ಜಿ ಆಹ್ವಾನ

Date:

Grant Registration 2023-24ನೇ ಸಾಲಿನ ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ಹನಿ ನೀರಾವರಿ ಕಾರ್ಯಕ್ರಮ, ಎಸ್‍ಎಂಎಎಂ ಯೋಜನೆಯಡಿ ತೋಟಗಾರಿಕೆಯಲ್ಲಿ ಯಾಂತ್ರೀಕರಣ ಕಾರ್ಯಕ್ರಮಗಳಡಿ ಸಹಾಯಧನ ನೊಂದಣಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.
ಅರ್ಹ ಆಸಕ್ತ ರೈತರು ನ.16 ರಿಂದ 24ನೇ ತಾರೀಖಿನೊಳಗೆ ಅರ್ಜಿ ಸಲ್ಲಿಸಿ ನೋಂದಣಿ ಮಾಡಿಕೊಳ್ಳಬಹುದಾಗಿರುತ್ತದೆ. ಹನಿ ನೀರಾವರಿ ಕಾರ್ಯಕ್ರಮದಡಿ 5 ಹೆಕ್ಟೇರ್‍ವರೆಗೆ ಸಹಾಯಧನ ನೀಡಲು ಅವಕಾಶವಿರುತ್ತದೆ. ತೋಟಗಾರಿಕೆಯಲ್ಲಿ ಯಾಂತ್ರೀಕರಣ ಕಾರ್ಯಕ್ರಮದಡಿ ಪ್ರಥಮ ಆದ್ಯತೆಯಲ್ಲಿ ಅಡಿಕೆ ದೋಟಿಯನ್ನು ಪರಿಗಣಿಸಲಾಗುವುದು. ತೀರ್ಥಹಳ್ಳಿ ತಾಲ್ಲೂಕಿಗೆ ಲಭ್ಯವಾಗುವ ಅನುದಾನ, ಮೀಸಲಾತಿ ನಿಯಮಾವಳಿ ಮತ್ತು ಯೋಜನೆಯ ಮಾರ್ಗಸೂಚಿಯನ್ವಯ ಜೇಷ್ಠತೆ ಅರ್ಜಿಗಳನ್ನು ಕಾರ್ಯಾದೇಶ ನೀಡುವ ಮುಂದಿನ ಕ್ರಮಗಳಿಗಾಗಿ ಪರಿಗಣಿಸಲಾಗುವುದು.
ಹೆಚ್ಚಿನ ಮಾಹಿತಿಗಾಗಿ ಕುಶಾವತಿಯಲ್ಲಿನ ತೋಟಗಾರಿಕೆ ಇಲಾಖಾ ಕಚೇರಿಯನ್ನು ಸಂಪರ್ಕಿಸಬಹುದು ಅಥವಾ ಹೋಬಳಿವಾರು Grant Registration ಸಹಾಯಕ ತೋಟಗಾರಿಕೆ ಅಧಿಕಾರಿಗಳನ್ನು ಸಂಪರ್ಕಿಬಹುದೆಂದು ತೀರ್ಥಹಳ್ಳಿ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Women and Child Development Department ಡಿಸೆಂಬರ್ 20. ಶಿವಮೊಗ್ಗದಲ್ಲಿ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ

Women and Child Development Department ಶಿವಮೊಗ್ಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್,...

Madhu Bangappa ಯಾವುದೇ ಶಾಲೆ ಆದರೂ ಕನ್ನಡ ಕಲಿಸಬೇಕು ಅಂತ ಮುಚ್ಚಳಿಕೆ ಬರೆಸಿಕೊಳ್ಳುತ್ತೇವೆ- ಮಧು ಬಂಗಾರಪ್ಪ

Madhu Bangappa ರಾಜ್ಯದ ಎಲ್ಲಾ ಮಾದರಿ ಬೋರ್ಡ್‌ಗಳು ಕಡ್ಡಾಯವಾಗಿ ಕನ್ನಡ...