Wednesday, May 13, 2026
Wednesday, May 13, 2026

Ramakrishna Vivekananda Ashram ಧರ್ಮ ಗ್ರಂಥಗಳ ಅಧ್ಯಯನವೂ ಇಂದಿನ ಜಂಜಡದ ಬದುಕಿನಲ್ಲಿ ಅತ್ಯುತ್ತಮ ಮಾರ್ಗ- ಶ್ರೀ ಶ್ರೀ ವೀರೇಶಾನಂದ ಸರಸ್ವತಿ ಸ್ವಾಮೀಜಿ

Date:

Ramakrishna Vivekananda Ashram ರಾಮಕೃಷ್ಣ ವಿವೇಕಾನಂದ ಆಶ್ರಮದ,ತುಮಕೂರು ಶಾಖೆಯ ಅಧ್ಯಕ್ಷರಾದ ಶ್ರೀ ಶ್ರೀ ವೀರೇಶಾನಂದ ಸರಸ್ವತಿ ಸ್ವಾಮೀಜಿಯವರು ಸತ್ಸಂಗಗಳೂ ಧರ್ಮ ಗ್ರಂಥಗಳ ಅಧ್ಯಯನವೂ ಇಂದಿನ ಜಂಜಡದ ಬದುಕಿನಲ್ಲಿ ಒತ್ತಡವನ್ನು ಹತ್ತಿಕ್ಕಲು ಅತ್ಯುತ್ತಮ ಮಾರ್ಗಗಳೆಂದು ವಿವರಿಸಿದರು.

ಪೂಜ್ಯರು ನಿನ್ನೆ IMA ಸಭಾಂಗಣದಲ್ಲಿ ನಡೆದ ಸಮಾರಂಭದಲ್ಲಿ ಈ ವರ್ಷದ ಚಟುವಟಿಕೆಗಳನ್ನು ಉದ್ಘಾಟಿಸಿ ಮಾತನಾಡುತ್ತಾ ಹೋರಾಟವಿಲ್ಲದ ಬದುಕು ಕೆಚ್ಚಿನ ಕಿಚ್ಚು ಹಚ್ಚಲಾರದು; ಆರಾಮ ವಲಯದಿಂದ ಹೊರಬಂದು ಸೃಜನಶೀಲತೆಯನ್ನೂ ಸ್ವಾಭಾವಿಕತೆಯನ್ನೂ ಮೈಗೂಡಿಸಿಕೊಳ್ಳಲು ಕರೆ ನೀಡಿದರು.

ಧೃತಿಗೆಡದೆ ಮುನ್ನುಗ್ಗಲು ಸಮಾಜದಲ್ಲಿ ಯಾವುದೇ ಕಾರ್ಯಕ್ಕೂ ಮೊದಲು ಅಪಹಾಸ್ಯ ಕೊಂಕು, ಆನಂತರ ವಿರೋಧ, ಕಟ್ಟೆ
ಕಡೆಯಲ್ಲಿಯೇ ಸ್ವೀಕಾರವನ್ನು ನಾವು ನಿರೀಕ್ಷಿಸಬೇಕಾಗುತ್ತದೆ ಎಂದರು.

ಕಿಕ್ಕಿರಿದು ನೆರೆದಿದ್ದ ಸಭಾಂಗಣದಲ್ಲಿ ,ತಮಗೆ ನೀಡಿದ ಗೌರವಾರ್ಪಣೆ ಸ್ವೀಕರಿಸಿದ ಪೂಜ್ಯರು, ಹಿರಿಯ ತಲೆಮಾರಿನ ವೈದ್ಯರನ್ನು ಕಂಡು ಹರ್ಷ ವ್ಯಕ್ತಪಡಿಸುತ್ತಾ, ಇದೇ ಸನಾತನ ಧರ್ಮದ ದ್ಯೋ
ತಕವೆಂದರು.

Ramakrishna Vivekananda Ashram ಸಮಾರಂಭದ ಅಧ್ಯಕ್ಷತೆ ವಹಿಸಿದ ನೂತನ ಐಎಂಎ ಅಧ್ಯಕ್ಷ ಡಾ. ಸಿ ರಮೇಶ್ ಸ್ವಾಗತ ಕೋರಿದರು. ಉಪಾಧ್ಯಕ್ಷರಾದ ಡಾ. ಕೆ. ಆರ್. ರವೀಶ್ ರವರು I.M.A. ನಡೆದು ಬಂದ ಹಾದಿಯನ್ನು ಪ್ರಸ್ತುತಪಡಿಸಿದರು. ವೇದಿಕೆಯ ಮೇಲೆ ಪೂರ್ವಾಧ್ಯಕ್ಷ ಡಾ. ಅರುಣ್ ,ಹಾಲಿ ಕಾರ್ಯದರ್ಶಿ ಡಾ. ಅರವಿಂದ್, ಖಜಾಂಚಿ ಡಾ. ಶಶಿಧರ್ ಉಪಸ್ಥಿತರಿದ್ದರು. ಡಾ. ಅರವಿಂದ್ ವಂದನಾರ್ಪಣೆ ಮಾಡಿದರು. ಸಮಾರಂಭದ ನಿರ್ವಹಣೆಯನ್ನು ಡಾ. ವಿನಯ ಶ್ರೀನಿವಾಸ್ ಮತ್ತು ಡಾ. ಹಂಸವೇಣಿ ವಹಿಸಿದ್ದರು .

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Kuvempu University ಕುವೆಂಪು ವಿವಿಯಲ್ಲಿ ನಾಳೆಯಿಂದ ‘ಮಾನವ-ವನ್ಯಜೀವಿ ಸಂಘರ್ಷ’ ಕುರಿತು ರಾಷ್ಟ್ರೀಯ ಸಮ್ಮೇಳನ

Kuvempu University ಕುವೆಂಪು ವಿಶ್ವವಿದ್ಯಾಲಯದ ವನ್ಯಜೀವಿ ಮತ್ತು ನಿರ್ವಹಣಾ ಸ್ನಾತಕೋತ್ತರ ಅಧ್ಯಯನ...

Karnataka Sanga ಕರ್ನಾಟಕ ಸಂಘದಲ್ಲಿ ಇಬ್ಬರು ಹಿರಿಯ ಮಹನೀಯರಿಗೆ ಜೀವಮಾನ ಸಾಧನೆ ಪ್ರಶಸ್ತಿ ಪ್ರದಾನ

Karnataka Sanga ಶಿವಮೊಗ್ಗ ಕರ್ನಾಟಕ ಸಂಘದಲ್ಲಿ ದಿನಾಂಕ 15 ಮೇ 2026ರ...

ಬೆಂಗಳೂರು ಉಪನಗರ ರೈಲು ಯೋಜನೆ: 𝟭𝟱𝟯 𝗠𝗲𝘁𝗿𝗼 𝗖𝗼𝗮𝗰𝗵 ಗಳ ಖರೀದಿಗೆ 𝗜𝗖𝗙 ಜೊತೆ ಒಪ್ಪಂದ, ₹𝟭,𝟱𝟭𝟯.𝟳𝟱 ಕೋಟಿ ಮೊತ್ತದ ಕಾರ್ಯಾದೇಶ

ಬೆಂಗಳೂರು ನಗರದ ಸಂಚಾರ ದಟ್ಟಣೆಗೆ ಮುಕ್ತಿ ನೀಡಲಿರುವ ಬಹುನಿರೀಕ್ಷಿತ ಬೆಂಗಳೂರು ಉಪನಗರ...