Monday, February 2, 2026
Monday, February 2, 2026

Shimoga District Chamber of Commerce and Industry ಸೇವಾ ಮನೋಭಾವ ವೃದ್ಧಿಸಲು ಎನ್‌ಎಸ್‌ಎಸ್ ಸಹಕಾರಿ

Date:

Shimoga District Chamber of Commerce and Industry ಯುವ ವಿದ್ಯಾರ್ಥಿಗಳಲ್ಲಿ ರಾಷ್ಟ್ರೀಯತೆ ಹಾಗೂ ಸೇವಾ ಮನೋಭಾವ ವೃದ್ಧಿಸುವಲ್ಲಿ ಎನ್‌ಎಸ್‌ಎಸ್ ಸಹಕಾರಿಯಾಗುತ್ತದೆ ಎಂದು ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಸಹ ಕಾರ್ಯದರ್ಶಿ ಜಿ.ವಿಜಯ್‌ಕುಮಾರ್ ಹೇಳಿದರು.
ಶಿವಮೊಗ್ಗ ನಗರದ ಆಚಾರ್ಯ ತುಳಸಿ ರಾಷ್ಟ್ರೀಯ ವಾಣಿಜ್ಯ ಕಾಲೇಜಿನಲ್ಲಿ ಆಯೋಜಿಸಿದ್ದ ಎನ್‌ಎಸ್‌ಎಸ್ ಗೀತ ಗಾಯನ ಸ್ಪರ್ಧೆ ಉದ್ಘಾಟಿಸಿ ಮಾತನಾಡಿ, ಪಲಾಪೇಕ್ಷೆ ಬಯಸದೇ ನಿರಂತರ ಸೇವೆ ಮಾಡುತ್ತಿರುವ ಎನ್‌ಎಸ್‌ಎಸ್ ಘಟಕಗಳು ಸದೃಢ ದೇಶ ನಿರ್ಮಾಣ ಮಾಡುವಲ್ಲಿ ಮಹತ್ತರ ಪಾತ್ರ ವಹಿಸುತ್ತವೆ ಎಂದು ತಿಳಿಸಿದರು.
ಸೇವಾ ಮನೋಭಾವ ವೃದ್ಧಿಸುವ ಗೀತ ಗಾಯನದಿಂದ ಮಕ್ಕಳ ಮನಸ್ಸು ಒಳ್ಳೆಯ ಚಿಂತನೆಗಳನ್ನು ಬೆಳೆಸಿಕೊಳ್ಳುತ್ತದೆ. ಮಕ್ಕಳಲ್ಲಿರುವ ದುರ್ಗುಣ ದುಮ್ಮಾನಗಳು ಕಡಿಮೆಯಾಗುತ್ತವೆ. ಜಾತಿ ಮತ ಭೇದವಿಲ್ಲದೆ ಗ್ರಾಮಗಳಲ್ಲಿ ಆರೋಗ್ಯದ ಬಗ್ಗೆ ಜಾಗೃತಿ ಮೂಡಿಸುತ್ತಾ ಸ್ವಚ್ಛತೆ ಹಾಗೂ ಪರಿಸರದ ಬಗ್ಗೆ ಕಾಳಜಿ ವಹಿಸಿ ಮಾಡುತ್ತಿರುವ ಎನ್‌ಎಸ್‌ಎಸ್ ಘಟಕಗಳು ಸಮಾಜದ ಆಸ್ತಿಯಾಗಿವೆ ಎಂದರು.
ಇದೇ ಸಂದರ್ಭದಲ್ಲಿ ರಾಷ್ಟ್ರೀಯ ಕಾನೂನು ಕಾಲೇಜಿನ ಸಹಪಾಧ್ಯಾಪಕ ಡಾ. ಬಿ.ಸಿ.ಬಸಪ್ಪ ಅವರು ಮುಖ್ಯ ಅತಿಥಿಗಳಾಗಿ ಆಗಮಿಸಿ ಮಾತನಾಡಿ, ರಾಷ್ಟ್ರದ ಆಸ್ತಿ ನಿರ್ಮಾಣ ಹಾಗೂ ರಾಷ್ಟ್ರದ ಪ್ರೇಮ, ಸಹೋದರತ್ವ, ಏಕತೆ ಹಳ್ಳಿಗಳ ಬೆಳವಣಿಗೆಗೆ ಎನ್‌ಎಸ್‌ಎಸ್ ಅತ್ಯಂತ ಪರಿಣಾಮಕಾರಿಯಾಗಿ ಕೆಲಸ ಮಾಡುತ್ತಿದೆ. ಡಾ. ದಿಲ್ ಶಾ ಅವರು ರಚನೆ ಮಾಡಿದ ಎನ್‌ಎಸ್‌ಎಸ್ ಗೀತೆ ಸದಾ ಹಚ್ಚಹಸಿರಾಗಿದೆ. ಇಂತಹ ಗೀತೆಗಳನ್ನು ಹಾಡುವುದರಿಂದ ಮಕ್ಕಳಲ್ಲಿ ಚೈತನ್ಯ ಮೂಡುತ್ತದೆ ಎಂದು ಹೇಳಿದರು.
ಸ್ಪರ್ಧೆಗಳಲ್ಲಿ ಸೋಲು ಗೆಲುವು ಮುಖ್ಯವಲ್ಲ ಭಾಗವಹಿಸುವಿಕೆ ಮುಖ್ಯ. ಎಲ್ಲಾ ಗೀತೆಗಳಿಗಿಂತ ಎನ್ ಎಸ್ ಎಸ್ ಗೀತೆ ತುಂಬಾ ವಿಭಿನ್ನವಾಗಿದೆ. ಪ್ರತಿಯೊಂದು ಸಾಲು ಸಾಲಿನಲ್ಲಿ ಸೇವಾ ಮನೋಭಾವನೆ ಬಿತ್ತುವ ಕಾರ್ಯವಾಗಿದೆ. ಅದರಿಂದ ವಿದ್ಯಾರ್ಥಿಗಳು ಏಕಾಗ್ರತೆಯಿಂದ ಮನತುಂಬಿ ಹಾಡಬೇಕು ಎಂದು ತಿಳಿಸಿದರು.
ಸಾಂಸ್ಕೃತಿಕ ವಿಭಾಗದ ಸಂಚಾಲಕ ಪ್ರೊ. ಕೆ ಎಂ ನಾಗರಾಜ್ ಅವರು ಪ್ರಸ್ತಾವಿಕವಾಗಿ ಮಾತನಾಡಿ, ಗೀತ ಗಾಯನ ಮಕ್ಕಳಲ್ಲಿ ಸಂಸ್ಕೃತಿ ಸಂಸ್ಕಾರವನ್ನು ಮೂಡಿಸುತ್ತದೆ. ಆದರಿಂದ ಸರಿಯಾಗಿ ಅಭ್ಯಾಸ ಮಾಡಿ ಸ್ಪರ್ಧೆಯಲ್ಲಿ ಪಾಲ್ಗೊಳ್ಳಬೇಕು ಎಂದು ನುಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಟಿಎನ್‌ಸಿಸಿ ಪ್ರಾಚಾರ್ಯೆ ಪ್ರೊ. ಮಮತಾ ಪಿ.ಆರ್. ವಹಿಸಿ ಮಾತನಾಡಿ, ಈಗಾಗಲೇ ರಾಷ್ಟ್ರೀಯ ಸೇವಾ ಯೋಜನೆಯಲ್ಲಿ ಅತ್ಯಂತ ಶ್ರೇಷ್ಠ ಪ್ರಶಸ್ತಿಗಳನ್ನು ನಮ್ಮ ಕಾಲೇಜು ಪಡೆದುಕೊಂಡಿದೆ. ಶಿವಮೊಗ್ಗ ಜಿಲ್ಲೆಯಲ್ಲಿ ಅತ್ಯುತ್ತಮ ಕಾಲೇಜು ಎಂದು ಹೆಸರುವಾಸಿ ಬೆಳೆಸಿದೆ ವಿದ್ಯಾರ್ಥಿಗ ಸಮಗ್ರ ಅಭಿವೃದ್ಧಿಗೆ ಎನ್‌ಎಸ್‌ಎಸ್ ಸಹಕಾರಿಯಾಗಿದೆ ಎಂದು ನುಡಿದರು.
Shimoga District Chamber of Commerce and Industry ಸಮಾರಂಭದಲ್ಲಿ ಪ್ರೊಫೆಸರ್ ಜಗದೀಶ್ ಪ್ರೊಫೆಸರ್ ಮಂಜುನಾಥ್ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...