Monday, February 2, 2026
Monday, February 2, 2026

Karnataka Rajyotsava ಕನ್ನಡದ ಕಂಪು ಹಬ್ಬಿಸುವವರು ಆಟೋ ಚಾಲಕರು – ರಾಜೇಗೌಡ

Date:

Karnataka Rajyotsava ದೈನಂದಿನ ಎಲ್ಲಾ ಗ್ರಾಹಕರೊಂದಿಗೆ ನಿರರ್ಗಳವಾಗಿ ಮಾತನಾಡುವ ಮೂಲಕ ಕನ್ನಡ ಭಾಷೆಯ ಸವಿಯನ್ನು ಎಲ್ಲೆಡೆ ಪಸರಿಸುವ ಮಹತ್ತರ ಕಾರ್ಯವನ್ನು ಆಟೋ ಚಾಲಕರು ಜವಾ ಬ್ದಾರಿಯುತವಾಗಿ ಮಾಡುತ್ತಿದ್ದಾರೆ ಎಂದು ಕನ್ನಡಸೇನೆ ಜಿಲ್ಲಾಧ್ಯಕ್ಷ ಪಿ.ಸಿ.ರಾಜೇಗೌಡ ಹೇಳಿದರು.

ಚಿಕ್ಕಮಗಳೂರು ನಗರದ ಕೆಂಪನಹಳ್ಳಿ ಸಮೀಪ ಆಟೋ ಚಾಲಕರು, ಮಾಲೀಕರ ಸಂಘ ಹಾಗೂ ಕನ್ನಡಸೇನೆ ವತಿಯಿಂದ ಬುಧವಾರ ಏರ್ಪಡಿಸಿದ್ದ 68ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ಬುಧವಾರ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು.

ಕನ್ನಡಭಾಷೆಯ ಬಗ್ಗೆ ವಿಶೇಷ ಅಭಿಮಾನ ಹೊಂದಿರುವ ಆಟೋ ಚಾಲಕರು ಎಂತಹ ಪ್ರವಾಸಿಗರು ಜಿಲ್ಲೆಗಾ ಮಿಸಿದರೂ ಕೂಡಾ ಮೊದಲು ಕನ್ನಡದಲ್ಲೇ ಉತ್ತರಿಸುವ ಮೂಲಕ ಭಾಷೆಗೆ ಒತ್ತು ನೀಡಿದ್ದಾರೆ. ಅದಲ್ಲದೇ ನಾಡಿನ ಜಲ, ಭಾಷೆ, ಘನತೆಗೆ ಧಕ್ಕೆಯುಂಟಾದ ಸಂದರ್ಭದಲ್ಲಿ ಮೊದಲ ಸಾಲಿನಲ್ಲಿ ನಿಂತು ಹೋರಾಟಕ್ಕೆ ಮುಂದಾಗಲಿ ದ್ದಾರೆ ಎಂದು ಹೇಳಿದರು.

ನಗರದ ಹಲವಾರು ಆಟೋ ವೃತ್ತಗಳಲ್ಲಿ ಚಾಲಕರು ಮತ್ತು ಮಾಲೀಕರು ಕನ್ನಡ ರಾಜ್ಯೋತ್ಸವನ್ನು ಈ ಬಾರಿ ಅತ್ಯಂತ ವಿಜಂಭ್ರಮಣೆಯಿ0ದ ಆಚರಿಸಿದ್ದಾರೆ. ಜೊತೆಗೆ ಮಾನವೀತೆಯ ದೃಷ್ಟಿಯಿಂದ ಸಾರ್ವಜನಿಕ ಅನ್ನಸಂ ತರ್ಪಣೆ ಸೇರಿದಂತೆ ಇನ್ನಿತರ ಸಾಮಾಜಿಕ ಕಾರ್ಯಗಳಿಗೂ ಕೈಜೋಡಿಸುತ್ತಿದ್ದಾರೆ ಎಂದು ತಿಳಿಸಿದರು.

ಕೆಂಪನಹಳ್ಳಿ ಆಟೋ ಚಾಲಕರ ಸಂಘದ ಅಧ್ಯಕ್ಷ ಪುನೀತ್ ಮಾತನಾಡಿ ಕಳೆದ ಎರಡು ವರ್ಷಗಳಿಂದ ಅತ್ಯಂತ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಿಸುವ ಮೂಲಕ ಭಾಷೆಯ ಬೆಳವಣಿಗೆಗೆ ಸಹಕರಿಸಲಾಗು ತ್ತಿದೆ ಎಂದ ಅವರು ಮುಂದಿನ ದಿನಗಳಲ್ಲಿ ಇನ್ನಷ್ಟು ದೊಡ್ಡಮಟ್ಟಿನಲ್ಲಿ ರಾಜ್ಯೋತ್ಸವ ಆಚರಿಸಿ ಸಾಮಾಜಿಕ ಕಾರ್ಯ ಕೈಗೊಳ್ಳಲಾಗುವುದು ಎಂದರು.
ಆಟೋ ಚಾಲಕರು ಪ್ರತಿನಿತ್ಯದ ಬಾಡಿಗೆ ವಿಚಾರದಲ್ಲಿ ಹಲವಾರು ತೊಂದರೆಗಳಿದ್ದರೂ ಸಹ ರಾಜ್ಯೋತ್ಸವ ಸಂದರ್ಭದಲ್ಲಿ ಯಾವುದಕ್ಕೂ ಅಂಜದೇ ಎಲ್ಲರ ಸಹಕಾರ ಪಡೆದುಕೊಂಡು ಪ್ರತಿವರ್ಷವು ಸಡಗರದಿಂದ ರಾಜ್ಯೋ ತ್ಸವ ಕನ್ನಡಹಬ್ಬವನ್ನು ಆಚರಿಸಿಕೊಂಡು ಬರಲಾಗುತ್ತಿದೆ ಎಂದರು.

Karnataka Rajyotsava ಈ ಸಂದರ್ಭದಲ್ಲಿ ಕನ್ನಡಸೇನೆ ಆಟೋ ಘಟಕದ ಅಧ್ಯಕ್ಷ ಜಯಪ್ರಕಾಶ್, ಮುಖಂಡರಾದ ನವೀನ್‌ಕು ಮಾರ್, ಯೋಗೀಶ್, ನಿಲೇಶ್, ಗ್ರಾಮದ ಹಿರಿಯ ಮುಖಂಡರಾದ ನೀಲಕಂಠ, ಉದಯಮೂರ್ತಿ, ಶಿಕ್ಷಕ ಶಿವಪ್ಪ, ಆಟೋ ಚಾಲಕರಾದ ಕುಮಾರ್, ಚಂದ್ರು, ಪ್ರವೀಣ್, ಗಣೇಶ್, ಸುನೀಲ್, ಹರೀಶ್, ಮನು ಮತ್ತಿತರರು ಹಾಜರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...