Thursday, June 18, 2026
Thursday, June 18, 2026

Siddaramaiah ಸಾಧಿಸಿದ್ದು ಹಲವು.ಸಾಗಬೇಕಾದ ಹಾದಿ ಬಹುದೂರ ಇದೆ-ಸಿದ್ಧರಾಮಯ್ಯ

Date:

Siddaramaiah ಶಿಕ್ಷಣ ಪೂರ್ತಿಗೊಳಿಸಿದ ಪದವೀಧರ ಯುವಜನರಿಗೆ ಉದ್ಯೋಗ ಹುಡುಕಿಕೊಳ್ಳಲು ಅಗತ್ಯ ಸಮಯ ದೊರಕಬೇಕು ಮತ್ತು ಈ ಅವಧಿಯಲ್ಲಿ ಅವರು ಹತಾಶೆ, ಒತ್ತಡಗಳಿಗೆ ಒಳಗಾಗದೆ ತಮ್ಮಿಷ್ಟದ ಉದ್ಯೋಗವನ್ನು ಆಯ್ಕೆ ಮಾಡಿಕೊಳ್ಳಲು ಸಾಕಷ್ಟು ಅವಕಾಶ ಸಿಗಬೇಕು. ಇದು ಸಾಧ್ಯವಾಗಬೇಕಾದರೆ ನಿರುದ್ಯೋಗದಿಂದ ಎದುರಾಗುವ ಆರ್ಥಿಕ ಸಮಸ್ಯೆಗಳು ಅವರನ್ನು ಬಾಧಿಸದಂತೆ ತಡೆಯಬೇಕು. ಈ ಕಾರಣಕ್ಕಾಗಿ ನಾವು ಪದವೀಧರ ಮತ್ತು ಡಿಪ್ಲೊಮಾ ಪದವೀಧರ ನಿರುದ್ಯೋಗಿಗಳಿಗೆ ಮಾಸಿಕ ನಿರುದ್ಯೋಗ ಭತ್ಯೆ ಒದಗಿಸುವ ಯುವನಿಧಿ ಯೋಜನೆಗೆ ಸರ್ಕಾರ ಜಾರಿಗೆ ಬಂದ ನಂತರದ ಮೊದಲ ಸಂಪುಟ ಸಭೆಯಲ್ಲಿಯೇ ಆಡಳಿತಾತ್ಮಕ ಅನುಮೋದನೆ ನೀಡಿದ್ದೇವೆ ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ.

ಈ ಯೋಜನೆ ಜನವರಿಯಿಂದ ಜಾರಿಗೆ ಬರಲಿದ್ದು, ಸುಮಾರು ನಾಲ್ಕೂವರೆ ಲಕ್ಷ ಯುವಜನತೆಗೆ ನೆರವಾಗಲಿದೆ ಎಂದು ಅಂದಾಜಿಸಲಾಗಿದೆ.
ಕಳೆದ 6 ತಿಂಗಳ ಅವಧಿಯಲ್ಲಿ ನಾಡಿನ ಜನತೆಗೆ ನೀಡಿದ್ದ ಎಲ್ಲಾ ಭರವಸೆಗಳನ್ನು ಈಡೇರಿಸುವ ಪ್ರಾಮಾಣಿಕ ಪ್ರಯತ್ನ ಮಾಡಿದ್ದೇವೆ.
ಗ್ಯಾರಂಟಿ ಯೋಜನೆಗಳು ಸೇರಿದಂತೆ ಎಲ್ಲ ಅಭಿವೃದ್ಧಿ ಕಾರ್ಯಕ್ರಮಗಳ ಜಾರಿ ಮತ್ತು ಸಮಾಜದ ಶಾಂತಿ-ಸಾಮರಸ್ಯದ ರಕ್ಷಣೆ ನಮ್ಮ ಸರ್ಕಾರದ ಪ್ರಮುಖ ಉದ್ದೇಶ ಎಂದು ತಿಳಿಸಿದ್ದಾರೆ.

Siddaramaiah ಸಾಧಿಸಿದ್ದು ಹಲವು, ಸಾಗಬೇಕಾದ ಹಾದಿ ಬಹುದೂರ ಇದೆ.
ಕರ್ನಾಟಕ ಅಭಿವೃದ್ಧಿ ಮಾದರಿಯ ಈ ಪಯಣದಲ್ಲಿ ಜೊತೆಯಾಗಿ ಸಾಗೋಣ,
ನಾಡನ್ನು ಸರ್ವಜನಾಂಗದ ಶಾಂತಿಯ ತೋಟವಾಗಿಸೋಣ.
ಎಂದು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ನಿರ್ಲಕ್ಷ್ಯ ಮಾಡದ ನಿಶ್ಶಬ್ದ ಕಾಯಿಲೆ, ಕಿಡ್ನಿ ಕ್ಯಾನ್ಸರ್- ಡಾ.ಯು‌.ಎಸ್.ಕಾರ್ತಿಕ್

Klive Special Article ಕಿಡ್ನಿ ಕ್ಯಾನ್ಸರ್ : ನೀವು ನಿರ್ಲಕ್ಷಿಸಬಾರದ ನಿಶ್ಯಬ್ದ...

K.S. Eshwarappa ಮನಸ್ಸು ಬಿಜೆಪಿ: ದೇಹ ಮಾತ್ರ ಹೊರಗೆ : ಕೆ.ಎಸ್.ಈಶ್ವರಪ್ಪ

K.S. Eshwarappa ಪಕ್ಷದ ಬೆಳವಣಿಗೆ ಮತ್ತು ಶುದ್ಧೀಕರಣಕ್ಕೆ ಆಗ್ರಹಿಸಿ ಬಿಜೆಪಿಯಿಂದ ಹೊರ...

ಸಮಾನತೆ, ಸ್ವಾವಲಂಬನೆ ಸಾಧಿಸುವಲ್ಲಿ ಸಹಕಾರ ಸಂಘಗಳ ಪಾತ್ರ ಅಪಾರ : ಶ್ರೀರಂಭಾಪುರಿಶ್ರೀ

ಸಮಾನತೆ, ಸ್ವಾವಲಂಬನೆ ಸಾಧನೆಯಲ್ಲಿ ಸಹಕಾರ ಸಂಘಗಳ ಪಾತ್ರ ಮಹತ್ವವಾದದು. ಅಭಿವೃದ್ಧಿಯನ್ನು ಸಾಧಿಸಲು...