Monday, December 15, 2025
Monday, December 15, 2025

Shivamogga City Corporation ಕೊನೆಯ ಸಭೆಯಲ್ಲಿ ತುಂಗಾ ಶುದ್ಧೀಕರಣದ ಬಗ್ಗೆ ಒಕ್ಕೊರಲ ತೀರ್ಮಾನಕ್ಕೆ ಬಂದ ಶಿವಮೊಗ್ಗ ಮಹಾನಗರ ಪಾಲಿಕೆ

Date:

Shivamogga City Corporation ಗಂಗ ಸ್ನಾನ ತುಂಗಪಾನ ಎಂಬ ನಾಲ್ನುಡಿ ಈಗ ಅಪವಾದವಾಗಿದೆ. ತುಂಗೆಯ ನೀರು ಈಗ ಕುಡಿಯಲು ಯೋಗ್ಯವಾಗಿಲ್ಲ. ನೀರು ಕುಡಿದವರು ಅನಾರೋಗ್ಯಕ್ಕೆ ತುತ್ತಾಗುತ್ತಿದ್ದಾರೆ. ಇದನ್ನು ಗಂಭೀರವಾಗಿ ಪರಿಗಣಿಸಿ ಎಂದು ಮಹಾನಗರ ಪಾಲಿಕೆಯಲ್ಲಿ ನಡೆದ ಕೊನೆಯ ವಿಶೇಷ ಸಭೆಯಲ್ಲಿ ಸದಸ್ಯರು ಪಕ್ಷಭೇದ ಮರೆತು ಆಗ್ರಹಿಸಿದ್ದಾರೆ.

ತುಂಗಾ ನದಿಯನ್ನು ಉಳಿಸುವುದು ಮಹಾನಗರ ಪಾಲಿಕೆಯ ಕರ್ತವ್ಯ. ಆದ್ದರಿಂದ ಶಿವಮೊಗ್ಗ ನಗರದ ಮಲಿನ ನೀರು, ನದಿಯ ಬದಲಿಗೆ ಒಳಚರಂಡಿ ಮುಖಾಂತರವೇ ಹರಿಸಬೇಕು ಎಂಬ ನಿರ್ಣಯ ಮಾಡೋಣ ಎಂದು ಮಹಾನಗರ ಪಾಲಿಕೆಯ ಸದಸ್ಯರಾದ ರಮೇಶ್ ಹೆಗ್ಡೆ ಅವರು ಹೇಳಿದ್ದಾರೆ. ಅದಕ್ಕೆ ಸದಸ್ಯರು ಒಪ್ಪಿದ್ದಾರೆ.

ಪಂಪ್ ಹೌಸ್ ಗೆ ನೇರವಾಗಿ ಕಲುಷಿತ ನೀರು ಬರುತ್ತಿದೆ ಎಂದು ಶಂಕರ್ ಗನ್ನಿಯವರು ಪ್ರಸ್ತಾಪಿಸಿದಾಗ ಅವರ ಮಾತಿಗೆ ಉಪಮೇಯರ್ ಲಕ್ಷ್ಮಿ ಶಂಕರ್ ನಾಯಕ್ ಅವರು ಧ್ವನಿ ಗೂಡಿ ಸಿದ್ದಾರೆ.

ಶಿವಮೊಗ್ಗ ನಗರದಲ್ಲಿ ನಿತ್ಯ ಮೂವತ್ತೇಳು ಎಂಎಲ್‌ಡಿ ಕೊಳಚೆ ನೀರು ಉತ್ಪತ್ತಿಯಾಗುತ್ತದೆ. ಅದರಲ್ಲಿ ಕೇವಲ 11 ಎಂಎಲ್‌ಡಿ ನೀರು ಮಾತ್ರ ಶುದ್ಧೀಕರಣ ಘಟಕಕ್ಕೆ ಹೋಗುತ್ತಿದೆ. ಉಳಿದ ನೀರು ಎಲ್ಲಿಗೆ ಹೋಗುತ್ತಿದೆ ಎಂಬುದು ಪ್ರಶ್ನೆಯಾಗಿದೆ. ಅದನ್ನ ಎಸ್‌ಟಿಪಿ ಘಟಕಕ್ಕೆ ಶುದ್ಧೀಕರಣಕ್ಕೆ ಕಳುಹಿಸುವುದು ನಮ್ಮ ಮುಂದಿನ ಸವಾಲು ಎಂದು ಮಹಾನಗರ ಪಾಲಿಕೆಯ ಆಯುಕ್ತರಾದ ಮಾಯಣ್ಣ ಗೌಡ ಅವರು ಹೇಳಿದ್ದಾರೆ.

Shivamogga City Corporation ತ್ಯಾಜ್ಯ ನೀರು, ಮಳೆ ನೀರು, ಹಾಗೂ ಮಳೆಯ ಕೊಳಚೆ ನೀರು ಎಲ್ಲದಕ್ಕೂ ಬೇರೆ ಬೇರೆ ಸಂಪರ್ಕ ವ್ಯವಸ್ಥೆ ಇದ್ದು, ಯುಜಿಡಿಗೆ ಬಿಡಲಾಗುತ್ತಿದೆ. ಇನ್ನೂ ಶೇ. 30ರಷ್ಟು ಜನ ಯುಜಿಡಿ ಸಂಪರ್ಕ ಹೊಂದಿಲ್ಲ. ಒಳಚರಂಡಿ ವಿಭಾಗವು ಐದು ಹಂತದಲ್ಲಿ ಮಲಿನ ನೀರನ್ನು ಬೇರ್ಪಡಿಸಿ ಶುದ್ಧೀಕರಣ ಗೊಳಿಸಿ ನಂತರ ತುಂಗೆಗೆ ಬಿಡುವ ಕಾರ್ಯ ಮಾಡಬೇಕಿದೆ ಎಂದು ಹೇಳಿದ್ದಾರೆ.

ಮಹಾನಗರ ಪಾಲಿಕೆಯ ಮೇಯರ್ ಶಿವಕುಮಾರ್, ಉಪಮೇಯರ್ ಲಕ್ಷ್ಮೀ ಶಂಕರ್ ಹಾಜರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...