Thursday, December 18, 2025
Thursday, December 18, 2025

D. K. Shivakumar ಮೂಕ ಪ್ರಾಣಿಗಳಿಗಾಗಿ ಆಸ್ಪತ್ರೆ ನಿರ್ಮಿಸಿದ ಹಿರಿಯ ನಟಿ ಲೀಲಾವತಿ ಅವರ ಕಳಕಳಿ ಶ್ಲಾಘನೀಯ- ಡಿ.ಕೆ.ಶಿವಕುಮಾರ್

Date:

D. K. Shivakumar ರಾಜ್ಯದ ಉಪಮುಖ್ಯಮಂತ್ರಿಗಳಾದ ಡಿಕೆ ಶಿವಕುಮಾರ್ ಅವರು ನೆಲಮಂಗಲದ ಸೋಲದೇವನಹಳ್ಳಿಯಲ್ಲಿ ನೂತನವಾಗಿ ನಿರ್ಮಾಣವಾಗಿರುವ ಶ್ರೀಮತಿ ಎಂ.ಲೀಲಾವತಿ ಪಶು ವೈದ್ಯಕೀಯ ಆಸ್ಪತ್ರೆಯನ್ನು ಇಂದು ಉದ್ಘಾಟಿಸಿ, ಮಾತನಾಡಿದರು.

ಹಿರಿಯ ನಟಿ ಶ್ರೀಮತಿ ಲೀಲಾವತಿ ಹಾಗೂ ಅವರ ಮಗ ವಿನೋದ್ ರಾಜ್’ರವರು ನನ್ನ ನಿವಾಸಕ್ಕೆ ಬಂದು ತಾವು ಕಟ್ಟಿರುವ ಪಶು ವೈದ್ಯಕೀಯ ಆಸ್ಪತ್ರೆಯನ್ನು ಉದ್ಘಾಟಿಸಬೇಕೆಂದು ಕೇಳಿಕೊಂಡಿದ್ದರು. ಅದರಂತೆ ನನ್ನ ಸರ್ಕಾರಿ ಕೆಲಸಗಳ ನಡುವೆ ಬಿಡುವು ಮಾಡಿಕೊಂಡು ಇಂದು ಈ ಆಸ್ಪತ್ರೆಯನ್ನು ಉದ್ಘಾಟಿಸಿದ್ದೇನೆ. ಪಶು ವೈದ್ಯಕೀಯ ಆಸ್ಪತ್ರೆಯನ್ನು ನಿರ್ಮಾಣ ಮಾಡುವ ಮೂಲಕ ಇಂದು ಲೀಲಾವತಿಯವರು ಹಾಗೂ ವಿನೋದ್ ರಾಜ್’ರವರು ಸಮಾಜಕ್ಕೆ ಒಂದು ದೊಡ್ಡ ಸಂದೇಶವನ್ನು ನೀಡಿದ್ದಾರೆ ಎಂದು ಹೇಳಿದರು.

D. K. Shivakumar ಶ್ರೀಮಂತರು ಹಲವಾರು ರೀತಿಯಲ್ಲಿ ದಾನ, ಧರ್ಮ ಮಾಡಿರುವುದನ್ನು ನಾವು ನೋಡಿದ್ದೇವೆ. ಆದರೆ ಲೀಲಾವತಿಯವರು ಮೂಕ ಪ್ರಾಣಿಗಳಿಗಾಗಿ ಆಸ್ಪತ್ರೆಯೊಂದನ್ನು ನಿರ್ಮಿಸಿ ತೋರಿದ ಸಾಮಾಜಿಕ ಕಳಕಳಿ ಇದೆಲ್ಲವನ್ನು ಮೀರಿದ್ದು. 60 ವರ್ಷಗಳ ಕಾಲ ಕಲಾ ಸೇವೆ ಮಾಡಿರುವ ಲೀಲಾವತಿಯವರು, ಇಂದು ಸಾಮಾಜಿಕ ಸೇವೆಯ ಮೂಲಕ ಎಲ್ಲರಿಗೂ ಮಾದರಿಯಾಗಿದ್ದಾರೆ. ಪಶುಗಳ ಚಿಕಿತ್ಸೆಗಾಗಿ ಕಟ್ಟಿರುವ ಈ ಆಸ್ಪತ್ರೆ ಯಶಸ್ವಿಯಾಗಿ ನಡೆದುಕೊಂಡು ಹೋಗಲಿ ಹಾಗೂ ಇದಕ್ಕೆ ಬೇಕಾದ ಸಹಕಾರ ಹಾಗೂ ಬೆಂಬಲವನ್ನು ನೀಡುತ್ತೇನೆ ಎಂದು ಹೇಳಿ ಅವರಿಗೆ ಶುಭ ಹಾರೈಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Interact Club ಮಕ್ಕಳಿಗೆ ಉತ್ತಮ ಶಿಕ್ಷಣ ಮತ್ತು ಭವಿಷ್ಯ ರೂಪಿಸುವಲ್ಲಿ ಪೋಷಕರ ಪಾತ್ರ ಬಹಳ ಮುಖ್ಯ – ರಮೇಶ್

ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ ಬೆಳೆಸುವಲ್ಲಿ ಇಂಟರಾಕ್ಟ್ ಕ್ಲಬ್ ಸಹಕಾರಿ ಎಂದು ಕ್ಷೇತ್ರ...

Veereshwar Punyashram Samskruth School ವೀರೇಶ್ವರ ಪುಣ್ಯಾಶ್ರಮದಲ್ಲಿ ಗಾಯಕ ನಿಜಗುಣಿ ಮಂಗಿ ಅವರ ಹಿಂದೂಸ್ತಾನಿ ಗಾಯನ

Veereshwar Punyashram Samskruth School ಸಾಗರ ರಸ್ತೆಯ ವೀರೇಶ್ವರ ಪುಣ್ಯಾಶ್ರಮ ಸಂಸ್ಕತ...

Rotary Shivamogga ರೇಬೀಸ್ ಮಾರಣಾಂತಿಕ‌ ಕಾಯಿಲೆಯಾಗುವ ಸಾಧ್ಯತೆ ಇದೆ, ನಿರ್ಲಕ್ಷ್ಯ ಬೇಡ- ಡಾ.ಅರವಿಂದ್

Rotary Shivamogga ರೇಬೀಸ್ ಮಾರಣಾಂತಿಕ ಕಾಯಿಲೆ ಆಗುವ ಸಾಧ್ಯತೆ ಇರುತ್ತದೆ. ಆದ್ದರಿಂದ...