Thursday, June 18, 2026
Thursday, June 18, 2026

D. K. Shivakumar ಮೂಕ ಪ್ರಾಣಿಗಳಿಗಾಗಿ ಆಸ್ಪತ್ರೆ ನಿರ್ಮಿಸಿದ ಹಿರಿಯ ನಟಿ ಲೀಲಾವತಿ ಅವರ ಕಳಕಳಿ ಶ್ಲಾಘನೀಯ- ಡಿ.ಕೆ.ಶಿವಕುಮಾರ್

Date:

D. K. Shivakumar ರಾಜ್ಯದ ಉಪಮುಖ್ಯಮಂತ್ರಿಗಳಾದ ಡಿಕೆ ಶಿವಕುಮಾರ್ ಅವರು ನೆಲಮಂಗಲದ ಸೋಲದೇವನಹಳ್ಳಿಯಲ್ಲಿ ನೂತನವಾಗಿ ನಿರ್ಮಾಣವಾಗಿರುವ ಶ್ರೀಮತಿ ಎಂ.ಲೀಲಾವತಿ ಪಶು ವೈದ್ಯಕೀಯ ಆಸ್ಪತ್ರೆಯನ್ನು ಇಂದು ಉದ್ಘಾಟಿಸಿ, ಮಾತನಾಡಿದರು.

ಹಿರಿಯ ನಟಿ ಶ್ರೀಮತಿ ಲೀಲಾವತಿ ಹಾಗೂ ಅವರ ಮಗ ವಿನೋದ್ ರಾಜ್’ರವರು ನನ್ನ ನಿವಾಸಕ್ಕೆ ಬಂದು ತಾವು ಕಟ್ಟಿರುವ ಪಶು ವೈದ್ಯಕೀಯ ಆಸ್ಪತ್ರೆಯನ್ನು ಉದ್ಘಾಟಿಸಬೇಕೆಂದು ಕೇಳಿಕೊಂಡಿದ್ದರು. ಅದರಂತೆ ನನ್ನ ಸರ್ಕಾರಿ ಕೆಲಸಗಳ ನಡುವೆ ಬಿಡುವು ಮಾಡಿಕೊಂಡು ಇಂದು ಈ ಆಸ್ಪತ್ರೆಯನ್ನು ಉದ್ಘಾಟಿಸಿದ್ದೇನೆ. ಪಶು ವೈದ್ಯಕೀಯ ಆಸ್ಪತ್ರೆಯನ್ನು ನಿರ್ಮಾಣ ಮಾಡುವ ಮೂಲಕ ಇಂದು ಲೀಲಾವತಿಯವರು ಹಾಗೂ ವಿನೋದ್ ರಾಜ್’ರವರು ಸಮಾಜಕ್ಕೆ ಒಂದು ದೊಡ್ಡ ಸಂದೇಶವನ್ನು ನೀಡಿದ್ದಾರೆ ಎಂದು ಹೇಳಿದರು.

D. K. Shivakumar ಶ್ರೀಮಂತರು ಹಲವಾರು ರೀತಿಯಲ್ಲಿ ದಾನ, ಧರ್ಮ ಮಾಡಿರುವುದನ್ನು ನಾವು ನೋಡಿದ್ದೇವೆ. ಆದರೆ ಲೀಲಾವತಿಯವರು ಮೂಕ ಪ್ರಾಣಿಗಳಿಗಾಗಿ ಆಸ್ಪತ್ರೆಯೊಂದನ್ನು ನಿರ್ಮಿಸಿ ತೋರಿದ ಸಾಮಾಜಿಕ ಕಳಕಳಿ ಇದೆಲ್ಲವನ್ನು ಮೀರಿದ್ದು. 60 ವರ್ಷಗಳ ಕಾಲ ಕಲಾ ಸೇವೆ ಮಾಡಿರುವ ಲೀಲಾವತಿಯವರು, ಇಂದು ಸಾಮಾಜಿಕ ಸೇವೆಯ ಮೂಲಕ ಎಲ್ಲರಿಗೂ ಮಾದರಿಯಾಗಿದ್ದಾರೆ. ಪಶುಗಳ ಚಿಕಿತ್ಸೆಗಾಗಿ ಕಟ್ಟಿರುವ ಈ ಆಸ್ಪತ್ರೆ ಯಶಸ್ವಿಯಾಗಿ ನಡೆದುಕೊಂಡು ಹೋಗಲಿ ಹಾಗೂ ಇದಕ್ಕೆ ಬೇಕಾದ ಸಹಕಾರ ಹಾಗೂ ಬೆಂಬಲವನ್ನು ನೀಡುತ್ತೇನೆ ಎಂದು ಹೇಳಿ ಅವರಿಗೆ ಶುಭ ಹಾರೈಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ನಿರ್ಲಕ್ಷ್ಯ ಮಾಡದ ನಿಶ್ಶಬ್ದ ಕಾಯಿಲೆ, ಕಿಡ್ನಿ ಕ್ಯಾನ್ಸರ್- ಡಾ.ಯು‌.ಎಸ್.ಕಾರ್ತಿಕ್

Klive Special Article ಕಿಡ್ನಿ ಕ್ಯಾನ್ಸರ್ : ನೀವು ನಿರ್ಲಕ್ಷಿಸಬಾರದ ನಿಶ್ಯಬ್ದ...

K.S. Eshwarappa ಮನಸ್ಸು ಬಿಜೆಪಿ: ದೇಹ ಮಾತ್ರ ಹೊರಗೆ : ಕೆ.ಎಸ್.ಈಶ್ವರಪ್ಪ

K.S. Eshwarappa ಪಕ್ಷದ ಬೆಳವಣಿಗೆ ಮತ್ತು ಶುದ್ಧೀಕರಣಕ್ಕೆ ಆಗ್ರಹಿಸಿ ಬಿಜೆಪಿಯಿಂದ ಹೊರ...

ಸಮಾನತೆ, ಸ್ವಾವಲಂಬನೆ ಸಾಧಿಸುವಲ್ಲಿ ಸಹಕಾರ ಸಂಘಗಳ ಪಾತ್ರ ಅಪಾರ : ಶ್ರೀರಂಭಾಪುರಿಶ್ರೀ

ಸಮಾನತೆ, ಸ್ವಾವಲಂಬನೆ ಸಾಧನೆಯಲ್ಲಿ ಸಹಕಾರ ಸಂಘಗಳ ಪಾತ್ರ ಮಹತ್ವವಾದದು. ಅಭಿವೃದ್ಧಿಯನ್ನು ಸಾಧಿಸಲು...