Wednesday, August 12, 2026
Wednesday, August 12, 2026

Sankara Eye Hospital Shimoga ಸಕಾಲದಲ್ಲಿ ಕಣ್ಣಿನ ಪರೀಕ್ಷೆ ಮಾಡಿಸಿ- ಡಾ.ವರ್ಷಾ

Date:

Sankara Eye Hospital Shimoga ಕಣ್ಣುಗಳು ಮನುಷ್ಯನ ದೇಹದ ಪ್ರಮುಖ ಅಂಗ ಆಗಿದ್ದು, ಸಕಾಲದಲ್ಲಿ ಕಣ್ಣುಗಳ ಪರೀಕ್ಷೆ ಮಾಡಿಸಿಕೊಳ್ಳಬೇಕು. ಕಣ್ಣಿನ ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ಮಾಡಬಾರದು ಎಂದು ಶಂಕರ ಕಣ್ಣಿನ ಆಸ್ಪತ್ರೆಯ ವೈದ್ಯೆ ಡಾ. ವರ್ಷಾ ಅಭಿಪ್ರಾಯಪಟ್ಟರು.

ಕಸ್ತೂರ ಬಾ ಬಾಲಿಕಾ ಪದವಿಪೂರ್ವ ಕಾಲೇಜು ಹಾಗೂ ರೋಟರಿ ಶಿವಮೊಗ್ಗ ಪೂರ್ವ ಸಂಸ್ಥೆ ವತಿಯಿಂದ ಶಂಕರ ಕಣ್ಣಿನ ಆಸ್ಪತ್ರೆಯ ಸಹಯೋಗದಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಶಿಬಿರದಲ್ಲಿ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ಆಯೋಜಿಸಿದ್ದ ನೇತ್ರ ತಪಾಸಣಾ ಹಾಗೂ ಮಾಹಿತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

ಕಣ್ಣಿನಲ್ಲಿ ಅನೇಕ ಸಮಸ್ಯೆಗಳು ಎದುರಾಗುತ್ತವೆ. ಕಣ್ಣು ಸೂಕ್ಷ್ಮ ಭಾಗ ಸಹ ಆಗಿರುವುದರಿಂದ ಎಚ್ಚರಿಕೆ ವಹಿಸಬೇಕು. ಮಕ್ಕಳು ಬಾಲ್ಯದಲ್ಲೇ ತಪಾಸಣೆ ನಡೆಸುವ ಜೊತೆಯಲ್ಲಿ ಕಾಲ ಕಾಲಕ್ಕೆ ಪರೀಕ್ಷೆ ನಡೆಸಬೇಕು. ಸಮಸ್ಯೆಗಳಿದ್ದಲ್ಲಿ ಕೂಡಲೇ ಸರಿಪಡಿಸಿಕೊಳ್ಳಬೇಕು ಎಂದು ತಿಳಿಸಿದರು.

ಆರ್ಥಿಕವಾಗಿ ಹಿಂದುಳಿದವರಿಗೆ ಶಂಕರ ಕಣ್ಣಿನ ಆಸ್ಪತ್ರೆ ವತಿಯಿಂದ ಉಚಿತ ಶಸ್ತ್ರ ಚಿಕಿತ್ಸೆ ಮಾಡಲಾಗುವುದು. ಇತ್ತೀಚೆಗೆ ಗ್ಲುಕೋಮಾ ಕಣ್ಣಿನ ಕಾಯಿಲೆ ಹೆಚ್ಚಾಗುತ್ತಿದ್ದು, ತುಂಬಾ ಆಘಾತಕಾರಿಯಾಗಿದೆ ಎಂದರು.

ರೋಟರಿ ಶಿವಮೊಗ್ಗ ಪೂರ್ವ ಸತೀಶ್ ಚಂದ್ರ ಮಾತನಾಡಿ, ಗ್ರಾಮೀಣ ಭಾಗದಲ್ಲಿ ಆರೋಗ್ಯದ ಬಗ್ಗೆ ಅರಿವು ಕಡಿಮೆ ಇದ್ದು, ಮಕ್ಕಳು ಮೊಬೈಲ್, ಕಂಪ್ಯೂಟರ್ ಹೆಚ್ಚು ಬಳಸುವುದರಿಂದ ಕಣ್ಣಿನ ಸಮಸ್ಯೆ ಹೆಚ್ಚಾಗುತ್ತದೆ. ಪೋಷಕರು ಗಮನ ವಹಿಸಬೇಕು ಎಂದು ಸಲಹೆ ನೀಡಿದರು.

ಇದೇ ಸಂದರ್ಭದಲ್ಲಿ ರೋಟರಿ ಮಾಜಿ ಸಹಾಯ ಗವರ್ನರ್ ಜಿ.ವಿಜಯ್‌ಕುಮಾರ್, ಕಣ್ಣಿನ ಆರೋಗ್ಯ ಕಾಪಾಡಿಕೊಳ್ಳಲು ವೈದ್ಯರ ಮಾರ್ಗದರ್ಶನ ಪಡೆದುಕೊಳ್ಳಬೇಕು. ಇಂತಹ ಶಿಬಿರಗಳನ್ನು ಸದುಪಯೋಗ ಪಡೆದುಕೊಳ್ಳಬೇಕು ಎಂದು ತಿಳಿಸಿದರು.

Sankara Eye Hospital Shimoga ಶಿಬಿರ ಅಧಿಕಾರಿ ರಾಘವೇಂದ್ರ ಡಿಎಚ್, ಸಹ ಶಿಬಿರಾಧಿಕಾರಿ ಪ್ರವೀಣ್, ಲಕ್ಷ್ಮೀ, ಹಾರೋಬೆನವಳ್ಳಿ ಗ್ರಾಮದ ಮುಖಂಡರಾದ ರಾಘವೇಂದ್ರ, ಸೀತಾರಾಮ ಆಂಜನೇಯ ದೇವಸ್ಥಾನದ ಅಧ್ಯಕ್ಷ ಸುರೇಶ್, ಎಲ್ಲ ಗ್ರಾಮಸ್ಥರು ಹಾಗೂ ಶಿಬಿರಾರ್ಥಿಗಳು ಮತ್ತಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive special Article ಆಧ್ಯಾತ್ಮದ ಆನಂದ ಹಂಚಿದ ದಾವಣಗೆರೆಯ ಶ್ರೀಶಿವಾನಂದ ತೀರ್ಥರು ...

"ಅಧ್ಯಾತ್ಮಾನಂದ ನೀಡುತ್ತಿದ್ದ ದಾವಣಗೆರೆಯ ಶ್ರೀ ಶಿವಾನಂದ ತೀರ್ಥರು" ( ಅವರ ಜಯಂತ್ಯೋತ್ಸವ ತನ್ನಿಮಿತ್ತಈವಿಶೇಷಲೇಖನ) -Klive...

Kuvempu University ಆಗಸ್ಟ್ 13 & 14. ರಂದು ಕುವೆಂಪು ವಿವಿಯ ಸ್ನಾತಕೋತ್ತರ ಪದವಿಗಳಿಗೆ ಪ್ರವೇಶಾತಿ

2026-27ನೇ ಸಾಲಿಗೆ ಕುವೆಂಪು ವಿಶ್ವವಿದ್ಯಾಲಯದ ಜ್ಞಾನ ಸಹ್ಯಾದ್ರಿ ಕ್ಯಾಂಪಸ್, ಮತ್ತು ವಿವಿ...