Thursday, December 18, 2025
Thursday, December 18, 2025

Dinesh Gundu Rao ಡಯಾಲಿಸಿಸ್ ಕೇಂದ್ರಗಳನ್ನ ಸುವ್ಯವಸ್ಥೆಗೆ ತರುವತ್ತ ಗಮನ ಹರಿಸಿದ್ದೇನೆ- ಸಚಿವ ದಿನೇಶ್ ಗುಂಡೂರಾವ್

Date:

Dinesh Gundu Rao ಡಯಾಲಿಸಿಸ್ ಸಮಸ್ಯೆಗೆ ಹಿಂದಿನ ಸರ್ಕಾರದಲ್ಲಾದ ಎಡವಟ್ಟುಗಳು ಕಾರಣವೇ ಹೊರತು, ನಮ್ಮ ಸರ್ಕಾರದಿಂದ ಆಗಿದ್ದಲ್ಲ. ಸಾರ್ವಜನಿಕರಿಗೆ ತಪ್ಪು ಮಾಹಿತಿ ಹೋಗಬಾರದು ಎಂದು ಆರೋಗ್ಯ ಸಚಿವರಾದ ದಿನೇಶ್ ಗುಂಡೂರಾವ್ ಅವರು ತಿಳಿಸಿದ್ದಾರೆ.

ಡಯಾಲಿಸಿಸ್ ಕೇಂದ್ರಗಳನ್ನು ಸುವ್ಯವಸ್ಥೆಗೆ ತರುವತ್ತ ಹೆಚ್ಚಿನ ಗಮನ ಹರಿಸಿದ್ದೇನೆ. ಪಿಪಿಪಿ ಮಾದರಿಯಲ್ಲಿ ರಾಜ್ಯಾದ್ಯಂತ 800 ಏಕ ಬಳಕೆಯ ಡಯಾಲಿಸಿಸ್ ಯಂತ್ರಗಳನ್ನು ಅಳವಡಿಸಲು ಕ್ರಮ ವಹಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ.

ಸಿಬ್ಬಂದಿಗಳ ವೇತನ, ಹಾಗೂ ಇಎಸ್ಐ ಪಿಎಫ್ ಹಿಂದಿನ ಸರ್ಕಾರದ ಅವಧಿಯಲ್ಲಿ ಬಿಆರ್ ಎಸ್ ಮತ್ತು ಇಎಸ್ ಕೆಎಜಿ ಸಂಸ್ಥೆಯವರು ಬಾಕಿ ಉಳಿಸಿಕೊಂಡಿದ್ದಾರೆ. ಈ ಎರಡು ಸಂಸ್ಥೆಗಳ‌ ಬಗ್ಗೆ ಸಾರ್ವಜನಿಕರು, ಸಿಬ್ಬಂದಿಗಳಿಂದ ಸಾಕಷ್ಟು ದೂರುಗಳು ಬಂದಿದ್ದವು. ಜಿಲ್ಲಾ ಪ್ರವಾಸದ ವೇಳೆ ಹಲವು ಕಡೆ ಡಯಾಲಿಸಿಸ್ ಕೇಂದ್ರಗಳು ಸರಿಯಾಗಿ ನಿರ್ವಹಣೆ ಆಗದಿರುವುದನ್ನ ಗಮನಿಸಿದ್ದೆ ಎಂದಿದ್ದಾರೆ.

Dinesh Gundu Rao ಹೀಗಾಗಿ ಡಯಾಲಿಸಿಸ್ ಕೇಂದ್ರಗಳ ಸಮಸ್ಯೆಗೆ ಶಾಶ್ವತ ಪರಿಹಾರ ಒದಗಿಸುವ ನಿಟ್ಟಿನಲ್ಲಿ, ನಾಲ್ಕು ವಿಭಾಗವಾರು ಟೆಂಡರ್ ಆಹ್ವಾನಿಸಿ ಬಹುತೇಕ ಟೆಂಡರ್ ಪ್ರಕ್ರಿಯೆ ಪೂರ್ಣಗೊಳಿಸಲಾಗಿದೆ ಎಂದಿದ್ದಾರೆ.

ಎಲ್ಲೆಡೆ ಸೊಂಕು ರಹಿತ ಏಕಬಳಕೆಯ ಡಯಾಲಿಸಿಸ್ ಯಂತ್ರಗಳು ಬರಲಿವೆ. ಉತ್ತಮ ಡಯಾಲಿಸಿಸ್ ಸೇವೆ ಜನಸಾಮಾನ್ಯರಿಗೆ ದೊರೆಯಲಿದೆ.‌ ವ್ಯವಸ್ಥೆ ಸರಿಪಡಿಸಲು ಸಿಬ್ಬಂದಿಗಳು ಸಹಕರಿಸಬೇಕೆಂದು ಕೋರಿದ್ದಾರೆ

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Rotary Shivamogga ರೇಬೀಸ್ ಮಾರಣಾಂತಿಕ‌ ಕಾಯಿಲೆಯಾಗುವ ಸಾಧ್ಯತೆ ಇದೆ, ನಿರ್ಲಕ್ಷ್ಯ ಬೇಡ- ಡಾ.ಅರವಿಂದ್

Rotary Shivamogga ರೇಬೀಸ್ ಮಾರಣಾಂತಿಕ ಕಾಯಿಲೆ ಆಗುವ ಸಾಧ್ಯತೆ ಇರುತ್ತದೆ. ಆದ್ದರಿಂದ...

Department of Agriculture 2026 ಜನವರಿ 6. ಕೃಷಿ ಇಲಾಖೆಯಿಂದ “ಸಿರಿಧಾನ್ಯ & ಮರೆತು ಹೋದ ಖಾದ್ಯಗಳ ಪಾಕ ತಯಾರಿ” ಸ್ಪರ್ಧೆ

Department of Agriculture ಅಂತಾರಾಷ್ಟ್ರೀಯ ವಾಣಿಜ್ಯ ಮೇಳ-2026 ರ ಅಂಗವಾಗಿ ಕೃಷಿ...

Shivamogga Police ಶಿಕಾರಿಪುರ- ಚುರ್ಚುಗುಂಡಿಯಿಂದ ಯುವಕ ನಾಪತ್ತೆ, ಪೊಲೀಸ್ ಪ್ರಕಟಣೆ

Shivamogga Police ಶಿಕಾರಿಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ...