Thursday, March 19, 2026
Thursday, March 19, 2026

Dinesh Gundu Rao ಡಯಾಲಿಸಿಸ್ ಕೇಂದ್ರಗಳನ್ನ ಸುವ್ಯವಸ್ಥೆಗೆ ತರುವತ್ತ ಗಮನ ಹರಿಸಿದ್ದೇನೆ- ಸಚಿವ ದಿನೇಶ್ ಗುಂಡೂರಾವ್

Date:

Dinesh Gundu Rao ಡಯಾಲಿಸಿಸ್ ಸಮಸ್ಯೆಗೆ ಹಿಂದಿನ ಸರ್ಕಾರದಲ್ಲಾದ ಎಡವಟ್ಟುಗಳು ಕಾರಣವೇ ಹೊರತು, ನಮ್ಮ ಸರ್ಕಾರದಿಂದ ಆಗಿದ್ದಲ್ಲ. ಸಾರ್ವಜನಿಕರಿಗೆ ತಪ್ಪು ಮಾಹಿತಿ ಹೋಗಬಾರದು ಎಂದು ಆರೋಗ್ಯ ಸಚಿವರಾದ ದಿನೇಶ್ ಗುಂಡೂರಾವ್ ಅವರು ತಿಳಿಸಿದ್ದಾರೆ.

ಡಯಾಲಿಸಿಸ್ ಕೇಂದ್ರಗಳನ್ನು ಸುವ್ಯವಸ್ಥೆಗೆ ತರುವತ್ತ ಹೆಚ್ಚಿನ ಗಮನ ಹರಿಸಿದ್ದೇನೆ. ಪಿಪಿಪಿ ಮಾದರಿಯಲ್ಲಿ ರಾಜ್ಯಾದ್ಯಂತ 800 ಏಕ ಬಳಕೆಯ ಡಯಾಲಿಸಿಸ್ ಯಂತ್ರಗಳನ್ನು ಅಳವಡಿಸಲು ಕ್ರಮ ವಹಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ.

ಸಿಬ್ಬಂದಿಗಳ ವೇತನ, ಹಾಗೂ ಇಎಸ್ಐ ಪಿಎಫ್ ಹಿಂದಿನ ಸರ್ಕಾರದ ಅವಧಿಯಲ್ಲಿ ಬಿಆರ್ ಎಸ್ ಮತ್ತು ಇಎಸ್ ಕೆಎಜಿ ಸಂಸ್ಥೆಯವರು ಬಾಕಿ ಉಳಿಸಿಕೊಂಡಿದ್ದಾರೆ. ಈ ಎರಡು ಸಂಸ್ಥೆಗಳ‌ ಬಗ್ಗೆ ಸಾರ್ವಜನಿಕರು, ಸಿಬ್ಬಂದಿಗಳಿಂದ ಸಾಕಷ್ಟು ದೂರುಗಳು ಬಂದಿದ್ದವು. ಜಿಲ್ಲಾ ಪ್ರವಾಸದ ವೇಳೆ ಹಲವು ಕಡೆ ಡಯಾಲಿಸಿಸ್ ಕೇಂದ್ರಗಳು ಸರಿಯಾಗಿ ನಿರ್ವಹಣೆ ಆಗದಿರುವುದನ್ನ ಗಮನಿಸಿದ್ದೆ ಎಂದಿದ್ದಾರೆ.

Dinesh Gundu Rao ಹೀಗಾಗಿ ಡಯಾಲಿಸಿಸ್ ಕೇಂದ್ರಗಳ ಸಮಸ್ಯೆಗೆ ಶಾಶ್ವತ ಪರಿಹಾರ ಒದಗಿಸುವ ನಿಟ್ಟಿನಲ್ಲಿ, ನಾಲ್ಕು ವಿಭಾಗವಾರು ಟೆಂಡರ್ ಆಹ್ವಾನಿಸಿ ಬಹುತೇಕ ಟೆಂಡರ್ ಪ್ರಕ್ರಿಯೆ ಪೂರ್ಣಗೊಳಿಸಲಾಗಿದೆ ಎಂದಿದ್ದಾರೆ.

ಎಲ್ಲೆಡೆ ಸೊಂಕು ರಹಿತ ಏಕಬಳಕೆಯ ಡಯಾಲಿಸಿಸ್ ಯಂತ್ರಗಳು ಬರಲಿವೆ. ಉತ್ತಮ ಡಯಾಲಿಸಿಸ್ ಸೇವೆ ಜನಸಾಮಾನ್ಯರಿಗೆ ದೊರೆಯಲಿದೆ.‌ ವ್ಯವಸ್ಥೆ ಸರಿಪಡಿಸಲು ಸಿಬ್ಬಂದಿಗಳು ಸಹಕರಿಸಬೇಕೆಂದು ಕೋರಿದ್ದಾರೆ

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ಗೋಪಾಲ ಗೌಡರು ಶಿವಮೊಗ್ಗ ಜಿಲ್ಲೆಯನ್ನ ಸಮಾಜವಾದದ ತೊಟ್ಟಿಲನ್ನಾಗಿ ರೂಪಿಸಿದವರು- ವೈ.ಎಸ್.ವಿ.ದತ್ತ.

Shimoga News ನಗರದ ಮಥುರಾ ಪ್ಯಾರಡೈಸ್ ಸಭಾಂಗಣದಲ್ಲಿ ಮಾಜಿ ಶಾಸಕ ಹಾಗೂ...

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...