Thursday, February 5, 2026
Thursday, February 5, 2026

Aam Admi Party ಬ್ಯಾಂಕಿನ ಸಿಬ್ಬಂದಿಯೇ ಚಿನ್ನ ನಕಲಿಗೊಳಿಸಿದ ವಂಚನೆ ಪ್ರಕರಣ ತಲೆತಗ್ಗಿಸುವಂತೆ ಮಾಡಿದೆ- ಡಾ.ಕೆ.ಸುಂದರ ಗೌಡ

Date:

Aam Admi Party ಬ್ಯಾಂಕಿನ ಸಿಬ್ಬಂದಿಗಳೇ ಸಾರ್ವಜನಿಕರ ಬಂಗಾರವನ್ನು ನಕಲಿಗೊಳಿಸಿ ವಂಚಿಸಿರುವ ಪ್ರಕರಣ ಸಮಾಜದಲ್ಲಿ ತಲೆತಗ್ಗಿಸುವಂತೆ ಮಾಡಿದೆ ಎಂದು ಜಿಲ್ಲಾ ಆಮ್ ಆದ್ಮಿ ಮಾಧ್ಯಮ ಪ್ರತಿನಿಧಿ ಡಾ|| ಕೆ.ಸುಂದರಗೌಡ ಹೇಳಿದ್ದಾರೆ.

ಈ ಸಂಬಂಧ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿರುವ ಅವರು ನ್ಯಾಯ, ಶಿಸ್ತನ್ನು ಪರಿಪಾಲಿಸುವ ಬ್ಯಾಂಕ್ ಸಿಬ್ಬಂದಿಗಳೇ ಸಾರ್ವಜನಿಕರ ಬಂಗಾರದ ಒಡವೆಗಳನ್ನು ನಕಲಿಗೊಳಿಸಿ ಭಾರೀ ಭ್ರಷ್ಟಚಾರದಲ್ಲಿ ತೊಡಗಿರುವುದು ಪ್ರಜಾಪ್ರಭುತ್ವದ ಸರ್ವನಾಶದ ಸಂಕೇತ ಎಂದು ತಿಳಿಸಿದ್ದಾರೆ.

ಚಿಕ್ಕಮಗಳೂರಿನ ಸೆಂಟ್ರಲ್ ಬ್ಯಾಂಕ್ ಆಫ್ ಬರೋಡ್‌ದಲ್ಲಿ ಸಾವಿರಾರು ಗ್ರಾಹಕರು ಖಾತೆಗೆ ಹಣ ಹಾಗೂ ಬಂಗಾರ ಇರಿಸುತ್ತಾರೆ. ಆದರೆ ಇದೇ ಬ್ಯಾಂಕಿನ ಸಿಬ್ಬಂದಿಗಳು 141 ಗ್ರಾಹಕರ ಅಸಲಿ ಚಿನ್ನವನ್ನು ನಕಲಿ ಮಾಡಿ ಗ್ರಾಹಕರಿಗೆ ದ್ರೋಹವೆಸಗಿರುವುದು ಖಂಡನೀಯ ಎಂದು ಹೇಳಿದ್ದಾರೆ.

ನೂರಾರು ಗ್ರಾಹಕರು ಬದುಕು ಕಟ್ಟಿಕೊಳ್ಳುವ ಸಲುವಾಗಿ ಬ್ಯಾಂಕ್‌ನಲ್ಲಿ ಚಿನ್ನದ ಮೇಲೆ ಸಾಲ ಪಡೆಯುತ್ತಾರೆ. ಆದರೆ ಬೇಲಿಯೇ ಎದ್ದು ಹೊಲ ಮೇಯ್ದಂತೆ ಆಗಿದೆ. ಇಂತಹ ಪರಿಸ್ಥಿತಿಯನ್ನು ಗ್ರಾಹಕರು ಯಾವ ರೀತಿಯಲ್ಲಿ ಬಗೆಹರಿಸಿಕೊಳ್ಳುವುದೇ ದೊಡ್ಡ ಸಮಸ್ಯೆಯಾಗಿದೆ ಎಂದಿದ್ದಾರೆ.
ಸಾರ್ವಜನಿಕರು ಸರ್ಕಾರ ಮತ್ತು ಅಧಿಕಾರಿಗಳ ಮೇಲಿರುವ ನಂಬಿಕೆ ಭ್ರಷ್ಟಾಚಾರದ ಮೂಲಕ ಮಹಾಮಾರಿಯ ಬೆಳವಣಗೆಯಿಂದ ಹಂತ ಹಂತವಾಗಿ ಕುಸಿಯುತ್ತಿದೆ ಎಂದ ಅವರು ಇದರಿಂದ ಸಾಲಸೋಲ ಮಾಡಿ ಜೀವನ ರೂಪಿಸಿಕೊಳ್ಳುವ ಗ್ರಾಹಕರು ಪ್ರಾಣ ಕಳೆದುಕೊಳ್ಳುವ ಸ್ಥಿತಿಗೆ ತಲುಪಬೇಕಾಗುತ್ತದೆ ಎಂದು ಹೇಳಿದ್ದಾರೆ.

Aam Admi Party ಸರ್ಕಾರವು ಕೂಡಲೇ ಐದು ಕೋಟಿ ವಂಚನೆವೆಸಗಿರುವ ಬ್ಯಾಂಕಿನ ಸಿಬ್ಬಂದಿಗಳ ನಾಗರೀಕ ಹಕ್ಕುಗಳನ್ನು ನಿರಾಕರಣೆ, ಆರೋಗ್ಯ ಮತ್ತು ವಿದ್ಯಾಭ್ಯಾಸದ ಹಕ್ಕು ಕಸಿದುಕೊಂಡು ಕಠಿಣ ಶಿಕ್ಷೆಗೆ ಗುರಿಪಡಿಸದಿದ್ದಲ್ಲಿ ಅವ್ಯವಹಾರ ವೇ ಸಮಾಜದ ಮಾರಕಶಕ್ತಿಯಾಗಿ ಬೆಳೆಯುವುದರಲ್ಲಿ ಸಂಶಯವಿಲ್ಲ ಎಂದಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

JCI Shivamogga ಜೆಸಿಐ ಚಿರಂತನ ಅಧ್ಯಕ್ಷರಾಗಿ ಪೃಥ್ವಿ ನಾಗರಾಜ್ ಆಯ್ಕೆ.

JCI Shivamogga ಶಿವಮೊಗ್ಗ ನಗರದ ಶ್ರೀ ವೀರಶೈವ ಕಲ್ಯಾಣ ಮಂಟಪದಲ್ಲಿ ಆಯೋಜಿಸಿದ್ದ...

Social Welfare Department ಶುಲ್ಕ ಮರುಪಾವತಿ ಯೋಜನೆ ಸೌಲಭ್ಯ.ಆನ್ ಲೈನ್ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

Social Welfare Department ಶಿವಮೊಗ್ಗ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು...

Mescom ಫೆಬ್ರವರಿ 7. ಚಿಕ್ಕಲ್ಲು,ಗುರುಪುರ ಸುತ್ತಮುತ್ತ ವಿದ್ಯುತ್ ನಿಲುಗಡೆ.ಮೆಸ್ಕಾಂ ಪ್ರಕಟಣೆ.

Mescom ಎಂ.ಆರ್.ಎಸ್. ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ ತ್ರೈಮಾಸಿಕ ನಿರ್ವಹಣೆ ಕಾಮಗಾರಿ...

Prabhuling Kavalikatti ಕಾರು ಮತ್ತು ಬೈಕ್ ಅಪಘಾತ. ಮಾನವೀಯತೆ ಮೆರೆದ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ.

Prabhuling Kavalikatti ಶಿವಮೊಗ್ಗ ಜಿಲ್ಲಾಧಿಕಾರಿಗಳಾದ ಪ್ರಭುಲಿಂಗ ಕವಳಿಕಟ್ಟಿಯವರು ಸೊರಬ ತಾಲ್ಲೂಕಿನ ಉಳವಿಯ...