Wednesday, February 4, 2026
Wednesday, February 4, 2026

H.D.Kumarswami ಅರ್ಜುನ ಸಲಗ ಇನ್ನು ನೆನಪಷ್ಟೆ- ಎಚ್.ಡಿ.ಕುಮಾರಸ್ವಾಮಿ

Date:

H.D.Kumarswami ಹಾಸನ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ಯಸಳೂರು ಬಳಿ ಕಾಡಾನೆಗಳ ಸೆರೆಗೆ ನಡೆಸಿದ ಕಾರ್ಯಾಚರಣೆ ವೇಳೆ ಒಂಟಿ ಸಲಗದ ದಾಳಿಗೆ ತುತ್ತಾಗಿ ಸಾಕಾನೆ ಅರ್ಜುನ ವೀರಮರಣ ಹೊಂದಿದ ಘಟನೆ ತಿಳಿದು ಬಹಳ ನೋವುಂಟಾಯಿತು ಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿಯವರು ಸಂತಾಪ ಸೂಚಿಸಿದ್ದಾರೆ . ದಸರಾ ಅಂಬಾರಿಯನ್ನು ಹೊತ್ತು ಸಾಗಿದ್ದ ಅರ್ಜುನ ಇನ್ನು ನೆನಪಷ್ಟೇ.ಸ್ಥಳಾಂತರ ಕಾರ್ಯಾಚರಣೆ ವೇಳೆ ಸಾಕಾನೆಗಳು-ಕಾಡಾನೆಗಳ ನಡುವಿನ ಭೀಕರ ಕಾಳಗದ ವೇಳೆ ಇತರೆ ಸಾಕಾನೆಗಳು ಪಲಾಯನ ಮಾಡಿದರೆ, ಅರ್ಜುನ ಮಾತ್ರ ಒಂಟಿ ಸಲಗದ ಜತೆ ವಿರೋಚಿತವಾಗಿ ಸೆಣಸಾಡಿತ್ತು. ಇಂಥ ವಿರೋಚಿತ ಆನೆ ಸಾವನ್ನಪ್ಪಿರುವುದು ಅತ್ಯಂತ ದುಃಖದ ಸಂಗತಿಯಾಗಿದೆ ಎಂದಿದ್ದಾರೆ.

H.D.Kumarswami ಕಾಡಾನೆಗಳನ್ನು ಸೆರೆ ಹಿಡಿಯುವಾಗ ತಮ್ಮ ಪ್ರಾಣ ರಕ್ಷಣೆಯ ಜತೆಗೆ ವನ್ಯಮೃಗಗಳ ಜೀವಕ್ಕೆ ಹಾನಿ ಆಗದಂತೆ ಅರಣ್ಯ ಸಿಬ್ಬಂದಿ ಮುನ್ನೆಚ್ಚರಿಕೆ ವಹಿಸಲಿ.
ಅರ್ಜುನನ ಆತ್ಮಕ್ಕೆ ಚಿರಶಾಂತಿ ಸಿಗಲಿ ಎಂದಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Department of Posts ಗ್ರಾಮೀಣ ಅಂಚೆ ಸೇವಕರ ನೇಮಕಾತಿಗೆ ಅರ್ಜಿ ಆಹ್ವಾನ

Department of Posts ಅಂಚೆ ಇಲಾಖೆ ವತಿಯಿಂದ  ಶಾಖಾ ಅಂಚೆಪಾಲಕ, ಸಹಾಯಕ...

B.Y. Vijayendra ವಿಕಸಿತ ಭಾರತದತ್ತ ದೃಢ ಹೆಜ್ಜೆಯ ಬಜೆಟ್- ಬಿ.ವೈ.ವಿಜಯೇಂದ್ರ

B.Y. Vijayendra ದೇಶದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು...

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...