Monday, February 2, 2026
Monday, February 2, 2026

Bike Jatha in Ripponpet ಅಪರಾಧ ತಡೆ ಮಾಸಾಚರಣೆ ಬೈಕ್ ಜಾಥಾ ನಡೆಸಿದ ರಿಪ್ಪನ್ ಪೇಟೆ ಪೊಲೀಸ್

Date:

Bike Jatha in Ripponpet ರಿಪ್ಪನ್‌ಪೇಟೆ ಪೊಲೀಸರಿಂದ ಅಪರಾಧ ತಡೆ ಮಾಸಾಚರಣೆ ಅಂಗವಾಗಿ ಜಾಗೃತಿಗಾಗಿ ಬೈಕ್ ರ್ಯಾಲಿ ನಡೆಯಿತು.

ವಾಹನ ಚಲಾಯಿಸುವ ವೇಳೆ ರಸ್ತೆ ಸುರಕ್ಷತೆಯ ನಿಯಮವನ್ನು ಪಾಲಿಸದೆ ಇರುವುದು ನಿಮಗೆ ನೀವೇ ದ್ರೋಹ ಮಾಡಿದ ಹಾಗೆ. ರಸ್ತೆ ಸುರಕ್ಷತೆಯ ಬಗ್ಗೆ ಯುವಜನತೆ ಪಾಲಿಸದೆ ಇರುವುದರಿಂದ ಹೆಚ್ಚಿನ ವಾಹನ ಅಪಘಾತಗಳಾಗಿ ಸಾವು ಸಂಭವಿಸುತ್ತದೆ. ಈ ನಿಟ್ಟಿನಲ್ಲಿ ವಾಹನ ಚಲಾಯಿಸವವರು ಜಾಗರೂಕರಾಗಬೇಕು ಎಂದು ತೀರ್ಥಹಳ್ಳಿ ಉಪ ವಿಭಾಗದ ಡಿವೈಎಸ್ಪಿ ಗಜಾನನ ವಾಮನ ಸುತಾರ ಅವರು ಹೇಳಿದರು.

ರಿಪ್ಪನ್ ಪಟ್ಟಣದಲ್ಲಿ ರಸ್ತೆ ಸುರಕ್ಷತೆ ಹಾಗೂ ಅಪರಾಧ ತಡೆ ಮಾಸ ಜಾಗೃತಿ ಕಾರ್ಯಕ್ರಮದ ಅಂಗವಾಗಿ ರಿಪ್ಪನ್‌ಪೇಟೆ ಪೊಲೀಸ್ ಠಾಣೆ ಆಶ್ರಯದಲ್ಲಿ ನಡೆದ ಬೈಕ್ ರ್‍ಯಾಲಿಗೆ ಚಾಲನೆ ನೀಡಿ ಮಾತನಾಡಿದರು.

ರಸ್ತೆಯಲ್ಲಿ ವಾಹನ ಚಲಾಯಿಸುವವರು ತಮ್ಮ ಸುರಕ್ಷತೆಯ ಜತೆಗೆ ವಾಹನಗಳ ದಾಖಲೆಗಳನ್ನು ಇಟ್ಟುಕೊಳ್ಳಬೇಕು, ಅಪ್ರಬುದ್ಧ ಮಕ್ಕಳು ವಾಹನ ಚಲಾಯಿಸಿದರೆ ಅವರ ಹೆತ್ತವರ ಹೊಣೆಗಾರರಗುವುದು ಮಾತ್ರವಲ್ಲದೆ ಶಿಕ್ಷಕಾರ್ಹರು,ಇತ್ತೀಚಿನ ದಿನಗಳಲ್ಲಿ ಅಂತರ್ಜಾಲದ ಮೂಲಕ ಜನರನ್ನು ಯಾಮಾರಿಸುವ ಘಟನೆಗಳು ಹೆಚ್ಚಾಗಿ ನಡೆಯುತ್ತಿದೆ. ಇದರಲ್ಲಿ ಯುವಜನರು ಬಲಿಯಾಗುತಿದ್ದಾರೆ. ಈ ನಿಟ್ಟಿನಲ್ಲಿ ಜಾಗೃತಿ ವಹಿಸಬೇಕಾಗಿದೆ ಎಂದು ಕರೆ ನೀಡಿದರು.

ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಬೈಕ್ ರ್ಯಾಲಿ ನಡೆಯಿತು.

Bike Jatha in Ripponpet ಈ ಸಂಧರ್ಭದಲ್ಲಿ ಪಿಎಸ್‌ಐ ಪ್ರವೀಣ್ ಎಸ್ ಪಿ ಸೇರಿದಂತೆ ಸಿಬ್ಬಂದಿಗಳು ಹಾಗೂ ಕಾಲೇಜು ವಿದ್ಯಾರ್ಥಿಗಳು ಇದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...