Friday, April 3, 2026
Friday, April 3, 2026

Guarantee Schemes ಕಾಂಗ್ರೆಸ್ ಗ್ಯಾರಂಟಿಗಳಿಗೆ ಬೆಲೆ ಕೊಡದೇ ಮೂರು ರಾಜ್ಯಗಳಲ್ಲಿ ಬಿಜೆಪಿ ಗೆ ಜನತೆ ಅಧಿಕಾರ ನೀಡಿದೆ

Date:

Guarantee Schemes ದೇಶದ ಪಂಚರಾಜ್ಯ ಚುನಾವಣೆಗಳ ಪೈಕಿ ಮೂರು ರಾಜ್ಯಗಳಲ್ಲಿ ಬಿಜೆಪಿ ಅಭೂತಪೂರ್ವವಾದ ಜಯಬೇರಿ ಬಾರಿಸುವ ಮೂಲಕ ಅಧಿಕಾರಕ್ಕೆ ಮುಂದಾಗಿರುವುದು ಸ್ವಾಗತಾರ್ಹ ಎಂದು ಕಡವಂತಿ ಗ್ರಾಮ ಪಂಚಾಯಿತಿ ಸದಸ್ಯ ವಿನೋದ್ ಬೊಗಸೆ ಹೇಳಿದ್ದಾರೆ.

ಈ ಸಂಬoಧ ಶುಕ್ರವಾರ ಹೇಳಿಕೆಯಲ್ಲಿ ತಿಳಿಸಿರುವ ಅವರು ರಾಜಸ್ಥಾನ, ಛತ್ತಿಸ್‌ಘಡ್ ಹಾಗೂ ಮಧ್ಯಪ್ರ ದೇಶದಲ್ಲಿ ಮೋದಿ ನೇತೃತ್ವದಲ್ಲಿ ನಡೆದ ಚುನಾವಣೆಯಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಿದೆ. ಇದರಿಂದ ಪಕ್ಷಕ್ಕೆ ಇನ್ನಷ್ಟು ಬಲಬಂದoತಾಗಿದೆ ಎಂದು ಹೇಳಿದ್ದಾರೆ.

ಮೂರು ರಾಜ್ಯಗಳಲ್ಲಿ ಮತದಾರರು ಗ್ಯಾರಂಟಿ ಭಾಗ್ಯಗಳಿಗೆ ಬೆಲೆಕೊಡದೇ ದೇಶ ಹಾಗೂ ರಾಜ್ಯದ ಹಿತ ಕಾಪಾಡುವಲ್ಲಿ ಪಣತೊಟ್ಟಿ ಬಿಜೆಪಿಗೆ ಅಧಿಕಾರಕ್ಕೆ ತಂದಿರುವುದು ಹೆಮ್ಮೆಯ ಸಂಗತಿ. ಕೇಂದ್ರ ಸರ್ಕಾರದ ಜನಪರ ಯೋಜನೆಗಳೇ ಮತದಾರರ ಪ್ರಮುಖ ಪಾತ್ರ ವಹಿಸಿದ ಪರಿಣಾಮ ಬಿಜೆಪಿ ಗೆಲುವು ಸಾಧಿಸಲು ಕಾರಣವಾಗಿದೆ ಎಂದಿದ್ದಾರೆ.

ರಾಜ್ಯದಲ್ಲಿ ಈಗಾಗಲೇ ಕಾಂಗ್ರೆಸ್ ಸರ್ಕಾರ ಆರು ತಿಂಗಳು ಕಳೆದರೂ ಸಹ ಸಂಪೂರ್ಣ ಗ್ಯಾರಂಟಿ ಒದಗಿ ಸದೇ ವಿಫಲತೆಯನ್ನು ಕಾಣುತ್ತಿದೆ. ಇದರಿಂದ ಚಿಕ್ಕಮಗಳೂರು-ಉಡುಪಿ ಲೋಕಸಭಾ ಚುನಾವಣೆಗೆ ಇನ್ನಷ್ಟು ಶಕ್ತಿ ತುಂಬಿ ಜಿಲ್ಲೆ ಸೇರಿದಂತೆ ರಾಜ್ಯಾದ್ಯಂತ ಬಿಜೆಪಿ ಅತಿಹೆಚ್ಚು ಸ್ಥಾನ ಲಭಿಸಲಿದೆ ಎಂದಿದ್ದಾರೆ.

Guarantee Schemes ಪ್ರಸ್ತುತ ಮೂರು ರಾಜ್ಯಗಳ ನಿರೀಕ್ಷೆಗೂ ಮೀರಿದ ಫಲಿತಾಂಶ ಮುಂಬರುವ ಲೋಕಸಭಾ ಚುನಾವಣೆಗೆ ದಿಕ್ಸೂಚಿಯಾಗಲಿದೆ. ಜೊತೆಗೆ ದೇಶ ಹಾಗೂ ರಾಜ್ಯದಲ್ಲೂ ಬಿಜೆಪಿ ಪ್ರಭಾವ ಬೀರುವ ಜೊತೆಗೆ ಮತ್ತೊಮ್ಮೆ ಮೂರನೇ ಬಾರಿಗೆ ದೇಶದಲ್ಲಿ ನರೇಂದ್ರ ಮೋದಿ ಪ್ರಧಾನ ಮಂತ್ರಿಯಾಗಲಿದ್ದಾರೆ ಎಂದು ಹೇಳಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ಶ್ರೀಬಿಷ್ಟಪ್ಪಯ್ಯನವರು

ಲೇ: ಪ್ರಸಾದ್ ಶ್ರೀವತ್ಸ. Klive Special Article ಭಾರತವೆಂದರೆ ಅದು ಕೇವಲ ದೇಶವಲ್ಲ ಅದೆಷ್ಟೋ...

B.Y. Vijayendra ದಾವಣಗೆರೆ ಚುನಾವಣೆ: ಬಿಜೆಪಿ ಅಭ್ಯರ್ಥಿಗೇ ಗೆಲುವು- ಬಿ.ವೈ.ವಿಜಯೇಂದ್ರ.

B.Y. Vijayendra  ಶಿವಮೊಗ್ಗದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಮಾಧ್ಯಮ ಮಿತ್ರರೊಂದಿಗೆ...

Drinking water supply ಗಮನಿಸಿ!.ಏಪ್ರಿಲ್ 4 & 5 ರಂದುಶಿವಮೊಗ್ಗ ನಗರದಲ್ಲಿ ಹಲವೆಡೆ ನೀರು ಸರಬರಾಜು ವ್ಯತ್ಯಯ.

Drinking water supply ನಗರದ ಕೃಷ್ಣರಾಜೇಂದ್ರ ಜಲಶುದ್ಧೀಕರಣ ಘಟಕಕ್ಕೆ ವಿದ್ಯುತ್ ಸರಬರಾಜು ಮಾಡುವ...

Hanuman Jayanti ಪಾರಂಪರಿಕ ಶ್ರದ್ದಾಭಕ್ತಿಗಳಿಂದ ದಾವಣಗೆರೆಯಲ್ಲಿ ಹನುಮ ಜಯಂತಿ

Hanuman Jayanti  ದಾವಣಗೆರೆ.ಏ.2. ನಗರದ ಜಯದೇವ ವೃತ್ತದಲ್ಲಿರುವ ಅಧ್ಯಾತ್ಮ ಮಂದಿರದಲ್ಲಿ ಶ್ರೀ...