Friday, April 3, 2026
Friday, April 3, 2026

B. Y. Raghavendra ಈ ಆಶೀರ್ವಾದ- ಪುರಸ್ಕಾರ ನನ್ನನ್ನು ಇನ್ನಷ್ಟು ವಿನೀತನನ್ನಾಗಿ ಮಾಡಿದೆ- ಸಂಸದ ಬಿ.ವೈ.ರಾಘವೇಂದ್ರ

Date:

B. Y. Raghavendra ಮಲೆನಾಡು ವೀರಶೈವ ಲಿಂಗಾಯತ ಮಠಾಧೀಶರ ಪರಿಷತ್ ವತಿಯಿಂದ ಶಿವಮೊಗ್ಗದ ಸರ್ಜಿ ಕನ್ವೆನ್ಷನ್ ಹಾಲ್ ನಲ್ಲಿ ಶಿವಮೊಗ್ಗ ಸಂಸದ ಬಿ ವೈ ರಾಘವೇಂದ್ರ ಅವರಿಗೆ ಅಭಿನಂದನಾ ಸಮಾರಂಭವನ್ನು ಆಯೋಜಿಸಲಾಗಿತ್ತು.

ಈ ಸಮಾರಂಭದಲ್ಲಿ ಬಿ.ವೈ ರಾಘವೇಂದ್ರ ಅವರ ದಂಪತಿಯನ್ನು ಸನ್ಮಾನಿಸಲಾಯಿತು. ನಂತರ ಮಾತನಾಡಿದ ಅವರು,
ನನಗೆ ನಿಜವಾಗಿಯೂ ಗೊತ್ತಿಲ್ಲ. ನಾನು ಇಂಥದ್ದೊಂದು ಗೌರವ ಪಡೆಯುವುದಕ್ಕೆ ಎಷ್ಟು ಪುಣ್ಯ ಮಾಡಿದ್ದೆನೋ ಅನ್ನುವುದು.
ನನ್ನ ಪಾಲಿಗೆ ಸದಾ ಪೂಜನೀಯರುಗಳಾದ ಜಗದ್ಗುರುಗಳ ಸನ್ನಿಧಿಯಲ್ಲಿ ನನಗೆ ನೆನ್ನೆ ಸಿಕ್ಕ ಆಶೀರ್ವಾದ-ಪುರಸ್ಕಾರ ನನ್ನನ್ನು ಇನ್ನಷ್ಟು ವಿನೀತನನ್ನಾಗಿ, ಹೊಣೆಗಾರನನ್ನಾಗಿ ಮಾಡಿದೆ. ಜೊತೆಗೆ, ಇಂಥಾ ಪೂಜನೀಯರ ಶ್ರೀರಕ್ಷೆ ನನಗೆ ದೊರೆತಿದೆಯೆಂಬ ಭಾವವೇ ನನ್ನಲ್ಲಿ ಇನ್ನಷ್ಟು ಆತ್ಮ ವಿಶ್ವಾಸ ತುಂಬಿದೆ, ಸಾರ್ವಜನಿಕ ಬದುಕಿನಲ್ಲಿ ನಾನು ನಡೆಯುತ್ತಿರುವ ದಾರಿ ಸರಿಯಾಗಿದೆ ಅನ್ನುವ ನಂಬಿಕೆ ಕೊಟ್ಟಿದೆ ಎಂದು ಹೇಳಿದರು.

B. Y. Raghavendra ನನ್ನನ್ನು ಹರಸಿದ ಎಲ್ಲ ಪೂಜನೀಯರಿಗೂ ನನ್ನ ತುಂಬು ಹೃದಯದ ಕೃತಜ್ಞತೆಗಳು. ಅವರ ಆಶೀರ್ವಾದವನ್ನು ಸದಾ ಸತ್ಕಾರ್ಯಗಳಿಗೆ ಬಳಸಿ ಸಮಾಜದ ಒಳಿತಿಗಾಗಿ ಶ್ರಮಿಸುತ್ತೇನೆ ಅನ್ನುವ ಭರವಸೆ ನನ್ನದು ಎಂದು ತಿಳಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

D.S. Arun ಸೂಕ್ತ ವಿಲೇವಾರಿಯಾಗದ ಘನತ್ಯಾಜ್ಯ: ಸಾರ್ವಜನಿಕ ಆರೋಗ್ಯ, ಪರಿಸರದ ಮೇಲೆ ಪರಿಣಾಮ- ಡಿ‌.ಎಸ್.ಅರುಣ್

D.S. Arun ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಘನ ತ್ಯಾಜ್ಯ...

S.N. Channabasappa ಸತ್ತಮೇಲೆಯೂ ಹಗೆತನ ಸಾಧಿಸುವ ವಿಕೃತ ಮನಸ್ಥಿತಿಯನ್ನು ಹಿಂದೂ ಸಮಾಜ‌ ಒಪ್ಪುವುದಿಲ್ಲ- ಶಾಸಕ ಎಸ್.ಎನ್.ಚನ್ನಬಸಪ್ಪ

S.N. Channabasappa ಶಿವಮೊಗ್ಗ ನಗರದ ಸೂಳೆಬೈಲಿನ ಹಿಂದೂ ರುದ್ರಭೂಮಿಯಲ್ಲಿ ಹತ್ಯೆಯಾದ ಬಾಲಕ...

Karnataka Sahitya Academy ಸಾಹಿತ್ಯ ಅಕಾಡೆಮಿಯಿಂದ ವಿವಿಧ ಪ್ರಕಾರಗಳ ಕೃತಿಗಳ ಪುಸ್ತಕ ಬಹುಮಾನಕ್ಕೆ ಆರ್ಜಿ ಆಹ್ವಾನ

Karnataka Sahitya Academy ಕರ್ನಾಟಕ ಸಾಹಿತ್ಯ ಅಕಾಡೆಮಿಯು 2025 ನೇ ವರ್ಷದಲ್ಲಿ...

Karnataka University ನಾಯಕತ್ವ ಗುಣ ರೂಪುಸುವಲ್ಲಿ ವಿದ್ಯಾರ್ಥಿ ಸಂಸತ್ತು ಸಹಕಾರಿ-ಪ್ರೊ.ಜೆ.ಎಂ.ನಾಗಯ್ಯ

Karnataka University ಪ್ರಜಾಪ್ರಭುತ್ವದ ಸಬಲತೆಗೆ ಸಮರ್ಥ ನಾಯಕತ್ವ ಅಗತ್ಯ. ಪರಿಣಾಮಕಾರಿಯಾಗಿ ವಿಷಯ...