Wednesday, February 4, 2026
Wednesday, February 4, 2026

B.Y.Vijayendra ಭದ್ರಾವತಿ ಬಿಜೆಪಿ ಕಾರ್ಯಕರ್ತನ ಮೇಲೆ ಹಲ್ಲೆ: ರಕ್ಷಣೆ ಕ್ರಮ ಕೈಗೊಳ್ಳಿ- ಬಿ.ವೈ.ವಿಜಯೇಂದ್ರ

Date:

B.Y.Vijayendra ಅಧಿಕಾರಸ್ಥ ಕಾಂಗ್ರೆಸ್ಸಿಗರ ಅಕ್ರಮಗಳ ವಿರುದ್ಧ ದನಿ ಎತ್ತುವ ಬಿಜೆಪಿ ಕಾರ್ಯಕರ್ತರನ್ನು ಗುರಿಯಾಗಿಸಿಕೊಂಡು ನಡೆಯುತ್ತಿರುವ ಹಲ್ಲೆ ಪ್ರಕರಣಗಳು ದಿನೇ ದಿನೇ ಹೆಚ್ಚುತ್ತಲೇ ಇವೆ. ಕಲಬುರ್ಗಿ, ಬೆಳಗಾವಿಯ ಪ್ರಕರಣಗಳ ಬೆನ್ನಲೇ ಭದ್ರಾವತಿಯ ನಮ್ಮ ಬಿಜೆಪಿ ಮುಖಂಡ ಗೋಕುಲ್ ಕೃಷ್ಣನ್ ಅವರ ಮೇಲೆ ನಡೆದಿರುವ ಗೂಂಡಾಗಳ ಹಲ್ಲೆ ಆತಂಕಕಾರಿ ಘಟನೆಯಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷರಾದ ವಿಜಯೇಂದ್ರ ಅವರು ತಮ್ಮ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

ಭದ್ರಾವತಿಯಲ್ಲಿ ನಡೆಯುತ್ತಿರುವ ಅಕ್ರಮ ದಂಧೆಗಳಿಗೆ ಸ್ಥಳೀಯ ಶಾಸಕರ ಕೈವಾಡ ಇರುವ ಬಗ್ಗೆ ಜಾಲತಾಣದಲ್ಲಿ ಗೋಕುಲ್ ಕೃಷ್ಣನ್ ಪ್ರಶ್ನಿಸಿದ್ದೇ, ಈ ದಾಳಿ ನಡೆಯಲು ಕಾರಣವಾಗಿದೆ ಎಂದು ಹೇಳಲಾಗುತ್ತಿದೆ ಎಂದಿದ್ದಾರೆ.

B.Y.Vijayendra ಕಾಂಗ್ರೆಸ್ ಸರ್ಕಾರ ಉದ್ದೇಶ ಪೂರ್ವಕವಾಗಿಯೇ ಬಿಜೆಪಿ ಕಾರ್ಯಕರ್ತರನ್ನು ಗುರಿಯಾಗಿಸಿಕೊಂಡು ಹಲ್ಲೆ ಮಾಡುವವರಿಗೆ ಕುಮ್ಮಕ್ಕು ನೀಡುತ್ತಿರುವಂತಿದೆ.
ತಕ್ಷಣವೇ ಭದ್ರಾತಿಯ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ನಮ್ಮ ಕಾರ್ಯಕರ್ತನಿಗೆ ರಕ್ಷಣೆ ನೀಡಿ, ದುಷ್ಕರ್ಮಿಗಳನ್ನು ಬಂಧಿಸಿ ಕಠಿಣ ಕ್ರಮ ಜರುಗಿಸಬೇಕೆಂದು ಒತ್ತಾಯಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Department of Posts ಗ್ರಾಮೀಣ ಅಂಚೆ ಸೇವಕರ ನೇಮಕಾತಿಗೆ ಅರ್ಜಿ ಆಹ್ವಾನ

Department of Posts ಅಂಚೆ ಇಲಾಖೆ ವತಿಯಿಂದ  ಶಾಖಾ ಅಂಚೆಪಾಲಕ, ಸಹಾಯಕ...

B.Y. Vijayendra ವಿಕಸಿತ ಭಾರತದತ್ತ ದೃಢ ಹೆಜ್ಜೆಯ ಬಜೆಟ್- ಬಿ.ವೈ.ವಿಜಯೇಂದ್ರ

B.Y. Vijayendra ದೇಶದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು...

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...