Wednesday, July 8, 2026
Wednesday, July 8, 2026

JDS Party ಜೆಡಿಎಸ್ ಇಬ್ರಾಹಿಂ ಬಣದ ರಾಷ್ಟ್ರೀಯ ಅಧ್ಯಕ್ಷರಾಗಿ ಕೇರಳದ ಸಿ.ಕೆ.ನಾಣು ಅವರ ಆಯ್ಕೆ

Date:

JDS Party ಜೆಡಿಎಸ್‌ನ ಸಿ.ಎಂ. ಇಬ್ರಾಹಿಂ ಬಣದ ರಾಷ್ಟ್ರೀಯ ಅಧ್ಯಕ್ಷ ರನ್ನಾಗಿ ಕೇರಳದ ಸಿ.ಕೆ. ನಾಣು ಅವರನ್ನು ಆಯ್ಕೆ ಮಾಡಲಾಗಿದೆ.

ಬೆಂಗಳೂರು ನಗರದ ಕಾಡು- ಗೊಂಡನಹಳ್ಳಿಯಲ್ಲಿ ಇಬ್ರಾಹಿಂ ಬಣದ ರಾಷ್ಟ್ರೀಯ ಸಭೆಯಲ್ಲಿ ನಾನು ಅವರನ್ನು ಸಿ.ಕೆ ನಾನು ನೂತನ ರಾಷ್ಟ್ರೀಯ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಯಿತು.
ಈ ಸಂದರ್ಭದಲ್ಲಿ ಸಿಕೆ ನಾನು ಅವರು ಮಾತನಾಡಿ ಹಿಂದಿನ ಸಭೆಗಳಲ್ಲಿ ಎಚ್ ಡಿ ದೇವೇಗೌಡರೊಂದಿಗೆ ನಾವು ಇದ್ದೇವೆ. ಆದರೆ ನನ್ನನ್ನು ಅವರು ಉಚ್ಚಾಡಿಸಿದ್ದಾರೆ. ಗಾಂಧಿಯವರ ಜಾತ್ಯತೀತ ಸಿದ್ದಾಂತದ ಮೇಲೆ ನಮ್ಮ ಪಕ್ಷ ನಿಂತಿರುವುದು. ಅದಕ್ಕೆ ವಿರುದ್ಧವಾಗಿ ಇರುವವರ ಜೊತೆ ಸಖ್ಯ ಬೆಳೆಸುವುದು ಸರಿಯೇ ಎಂದು ಅವರಲ್ಲಿ ಕೇಳಲು ಬಯಸುತ್ತೇನೆ ಎಂದರು.

JDS Party ಸಭೆಯಲ್ಲಿ ಮಾತನಾಡಿದ ಇಬ್ರಾಹಿಂ,ಗಾಂಧಿಯವರ ತತ್ವ ಸಿದ್ಧಾಂತ ಮತ್ತು ಜಾತ್ಯತೀತ ಸಿದ್ದಾಂತಗಳಲ್ಲಿ ಜೆಡಿಎಸ್ ನಂಬಿಕೆ ಇಟ್ಟಿದೆ. ಅದಕ್ಕೆ ಪೂರಕವಾಗಿ ಹೊಸ ಅಧ್ಯಕ್ಷರನ್ನ ಆಯ್ಕೆ ಮಾಡಿದ್ದೇವೆ. ಪ್ರಧಾನಿ ನರೇಂದ್ರ ಮೋದಿ ಐವತ್ತು ವರ್ಷ ಅಧಿಕಾರದಲ್ಲಿರಬಹುದು. ಆದರೆ ಜಾತ್ಯತೀತ ಸಿದ್ದಾಂತ ಸೂರ್ಯ ಮತ್ತು ಚಂದ್ರ ಇರುವವರೆಗೂ ಅಜರಾಮರವಾಗಿ ಇರಲಿದೆ ಎಂದರು.

ಜೆಡಿಎಸ್‌ನ ತೆಲಂಗಾಣ ರಾಜ್ಯ ಘಟಕದ ಅಧ್ಯಕ್ಷ ಸೂರಿ ಅವರು, ‘ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾಗಿ ನಾನು ಅವರು ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ’ ಎಂದು ಪ್ರಕಟಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಸಾಮಾಜಿಕ ಸೇವೆಗಳು ಮನುಷ್ಯನ ಬದುಕನ್ನ ಸಾರ್ಥಕಗೊಳಿಸುತ್ತವೆ : ಬಿ.ವೈ.ರಾಘವೇಂದ್ರ

B.Y. Raghavendra ‘ಸೇವೆಯೇ ಸಾರ್ಥಕ ಸ್ನೇಹವೇ ಅಮರ’ ಎಂದು ಸಂಸದ ಬಿ.ವೈ....

Sri Sonda Swarnavalli Mahasansthan 2026 ರ ಭಗವದ್ಗೀತಾ ಅಭಿಯಾನ: ವಿಜಯನಗರದಲ್ಲಿ ಆಯೋಜನೆ, ಸ್ವರ್ಣವಲ್ಲಿಶ್ರೀಗಳಿಂದ ಸಭೆ

Sri Sonda Swarnavalli Mahasansthan ಶ್ರೀ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನ, ಶಿರಸಿ...

S.N. Channabasappa ಶಿವಮೊಗ್ಗ ನ್ಯೂ ಮಂಡ್ಲಿಯಲ್ಲಿ ಮಳೆಗೆ ಮನೆ ಕುಸಿತ.: ಶಾಸಕ ಚನ್ನಬಸಪ್ಪ ಪರಿಶೀಲನೆ

S.N. Channabasappa ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಶಿವಮೊಗ್ಗ...