Monday, February 2, 2026
Monday, February 2, 2026

Muruga Mutt ಶಿವಮೊಗ್ಗ ಜಿಲ್ಲೆ ಕಲೆ ಸಂಸ್ಕೃತಿ & ಮಾನವೀಯತೆಯ ಗಣಿಯಾಗಿದೆ- ಪದ್ಮಶ್ರೀ ಮಂಜಮ್ಮ ಜೋಗತಿ

Date:

Muruga Mutt ಶಿವಮೊಗ್ಗ ಜಿಲ್ಲೆಯ ಆನಂದಪುರ ಮುರುಘಾಮಠದಲ್ಲಿ ಐತಿಹಾಸಿಕ ಕಂಚಿನ ದೀಪ ರಥೋತ್ಸವ ನಿಮಿತ್ತ ಭಾವೈಕ್ಯ ಸಮ್ಮೇಳನ ವೈಭವದಿಂದ ನಡೆಯಿತು.

ಮಠದಿಂದ ಪ್ರತಿ ವರ್ಷ ಶ್ರೇಷ್ಠ ಸಾಧಕ ಮಹಿಳೆಗೆ ಕೆಳದಿ ರಾಣಿ ಚೆನ್ನಮ್ಮ ರಾಣಿ ಪ್ರಶಸ್ತಿ ನೀಡಲಾಗುತಿದ್ದು ಈ ವರ್ಷ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಜಾನಪದ ಕಲಾವಿದೆ ಮಂಜಮ್ಮ ಜೋಗತಿ ರವರಿಗೆ ಕೆಳದಿ ರಾಣಿ ಚೆನ್ನಮ್ಮ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಮಂಜಮ್ಮ ಜೋಗತಿ ಮಾತನಾಡಿ, ಶಿವಮೊಗ್ಗ ಜಿಲ್ಲೆ ಕಲೆ, ಸಂಸ್ಕೃತಿ ಮತ್ತು ಮಾನವೀಯ ಗುಣಗಳ ಗಣಿಯಾಗಿದೆ ,
ತಮ್ಮ ಆರಂಭದ ದಿನಗಳಲ್ಲಿ ಸಮಾಜದಲ್ಲಿ ಅಪಮಾನ ಉಂಟಾಗುತ್ತಿತ್ತು. ಕಲೆಯಲ್ಲಿ ಅತ್ಯಧಿಕ ಸಾಧನೆ ಮಾಡಿದ ಕಾರಣ ಇಂದು ದೊಡ್ಡ ಗೌರವದ ಸ್ಥಾನ ದೊರೆಯುತ್ತಿದೆ. ಕಲೆಗೆ ಬೆಲೆ ಕಟ್ಟಲು ಸಾಧ್ಯವಿಲ್ಲ ಎಂಬುದಕ್ಕೆ ತಮ್ಮ ಜೀವನ ಚರಿತ್ರೆಯೇ ಸಾಕ್ಷಿ ಎಂದರು.

ಸಮಾಜದಲ್ಲಿ ಪುರುಷ ಮತ್ತು ಮಹಿಳೆಯರಿಗೆ ಸಮಾನ ಗೌರವ ಸಿಗಬೇಕು ಎಂಬ ಶಿವಶರಣರ ಆಸೆ ಇಂದು ಪರಿಪೂರ್ಣವಾಗುತ್ತಿದೆ ಎಂದು ಸಂತಸ ವ್ಯಕ್ತಪಡಿಸಿದರು.

ದೊರೆತ ಅವಕಾಶ ಮತ್ತು ಬದುಕಿನ ಸಮಯವನ್ನು ಸದುಪಯೋಗ ಪಡಿಸಿಕೊಂಡರೆ ಪ್ರತಿಯೊಬ್ಬರೂ ಸಾಧಕರಾಗಲು ಸಾಧ್ಯ ಎಂದರು.

ಕಾರ್ಯಕ್ರಮ ಉದ್ಘಾಟಿಸಿದ ಶಿವಮೊಗ್ಗ ಜಿಲ್ಲಾ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಆರ್.ಎಂ. ಮಂಜುನಾಥ ಗೌಡ ಮಾತನಾಡಿ, ಶೈಕ್ಷಣಿಕ, ಸಾಮಾಜಿಕ, ಧಾರ್ಮಿಕ ಹಾಗೂ ಸಮಾಜ ಸೇವೆಯಲ್ಲಿ ಇಲ್ಲಿನ ಮಲ್ಲಿಕಾರ್ಜುನ ಶ್ರೀಗಳ ಕಾಳಜಿ ಮತ್ತು ಶ್ರಮಕ್ಕೆ ಸಾರ್ವತ್ರಿಕ ಬೆಂಬಲ ಅಗತ್ಯವಿದೆ ಎಂದರು.

ಸಹಕಾರ ರತ್ನ ಪ್ರಶಸ್ತಿ ಪುರಸ್ಕೃತ ಹರನಾಥರಾವ್ ಮತ್ತಿಕೊಪ್ಪ, ಶಿವಮೊಗ್ಗದ ವಿದ್ಯುತ್ ವೀರಶೈವ ನೌಕರರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಎಸ್.ಜಿ.ಶಶಿಧರ, ರಾಜ್ಯ ಪ್ರಶಸ್ತಿ ಪುರಸ್ಕೃತ ಶಿಕ್ಷಕಿ ಫೌಜಿ ಶರಾವತ್, ನಾಟಿ ವೈದ್ಯ ಕೆ.ಟಿ.ತಿಮ್ಮೇಶ್, ಸಮಾಜ ಸೇವಕ ಶೇಣಿಗೆ ರುದ್ರಪ್ಪ ಗೌಡ, ಜಿಲ್ಲಾ ಉತ್ತಮ ಸಹಕಾರ ಪ್ರಶಸ್ತಿ ಪುರಸ್ಕೃತ ಆರ್.ವಿನಯಕುಮಾರ್ ದುಮ್ಮ, ನಾಟಿ ವೈದ್ಯ ಕೆ.ಸಿ.ದೇವಪ್ಪರಿಗೆ ಸಮಾಜ ಸೇವಾ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಯಿತು.

Muruga Mutt ಹೊಂಬುಜ ಜೈನ ಮಠದ ಡಾ.ದೇವೇಂದ್ರ ಕೀರ್ತಿ ಭಟ್ಟಾರಕ ಭಟ್ಟಾಚಾರ್ಯ ಸ್ವಾಮೀಜಿ ಸಮ್ಮುಖದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಡಾ.ಮಲ್ಲಿಕಾರ್ಜುನ ಮುರುಘರಾಜೇಂದ್ರ ಸ್ವಾಮೀಜಿ ಸಾನಿಧ್ಯ ವಹಿಸಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...