Friday, June 19, 2026
Friday, June 19, 2026

B.S.Yediyurappa ರೈತರ ಸಾಲ ಮನ್ನಾ ಮಾಡಿ ನಿರ್ಧಾರ ಪ್ರಕಟಿಸಿ ಇಲ್ಲದಿದ್ದರೆ ಹೋರಾಟ ನಡೆಸುವೆವು ಬಿಎಸ್ ವೈ ಎಚ್ಚರಿಕೆ

Date:

B.S.Yediyurappa ಮುಂದಿನ 15ರಿಂದ 20 ದಿನಗಳ ಒಳಗೆ ರಾಜ್ಯ ಸರ್ಕಾರ ರೈತರ ಸಾಲ ಮನ್ನಾ ಮಾಡುವ ನಿರ್ಧಾರ ಪ್ರಕಟಿಸಬೇಕು. ಇಲ್ಲದಿದ್ದರೆ, ರಾಜ್ಯದಾದ್ಯಂತ ಹೋರಾಟ ಮಾಡುವೆ. ಸರ್ಕಾರ ಓಡಿಸುವವರೆಗೂ ವಿಶ್ರಮಿಸುವುದಿಲ್ಲ’ ಎಂದು ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್. ಯಡಿಯೂರಪ್ಪ ಗುಡುಗಿದರು.

‘ನನ್ನ ಅಧಿಕಾರದಲ್ಲಿ ಯಾವುದೇ ಷರತ್ತಿಲ್ಲದೇ ರೈತರಿಗೆ ವಿದ್ಯುತ್ ನೀಡಿದ್ದೆ. ಈಗ ಅನೇಕ ಷರತ್ತು ಗಳನ್ನು ವಿಧಿಸಿ ರೈತರೊಂದಿಗೆ ಚೆಲ್ಲಾಟ ಮಾಡುತ್ತಿರುವುದು ಖಂಡನೀಯ. ಇದನ್ನು ರಾಜ್ಯದಾದ್ಯಂತ ಮಾಡದಿದ್ದರೆ ಹೋರಾಟ ಮಾಡುವುದು ಅನಿವಾರ್ಯ’ ಎಂದರು.

B.S.Yediyurappa ಬೆಳಗಾವಿ ನಗರದಲ್ಲಿ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಆಯೋಜಿಸಿದ್ದ ಬೃಹತ್ ಪ್ರತಿಭಟನಾ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು, ‘ರಾಜ್ಯದಲ್ಲಿ ತೀವ್ರ ಬರ ಇದೆ. ಸರ್ಕಾರ ಕೈಕಟ್ಟಿ ಕೂರುವುದು ಎಷ್ಟು ಸರಿ? ಈ ಹಿಂದೆ ಅತಿವೃಷ್ಟಿಯಿಂದ ರೈತರು ಸಂಕಷ್ಟಕ್ಕೆ ಒಳಗಾದಾಗ ನಾನು ತಡ ಮಾಡದೇ ಸಾಲ ಮನ್ನಾ ಮಾಡಿದ್ದೆ. ಈಗಲೂ ನೀವು ಅಂಥ ನಿರ್ಧಾರ ತೆಗೆದು ಕೊಳ್ಳಬೇಕು’ ಎಂದು ಆಗ್ರಹಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ಆರೋಗ್ಯಕರ ವೃದ್ಧಾಪ್ಯಕ್ಕೆ ಯೋಗ ಸಹಕಾರಿ ಲೇ: ಡಾ.ಎಸ್.ಎಲ್.ಪಲ್ಲವಿ

Klive Special Article ಪ್ರತಿ ವರ್ಷ ಜೂನ್ 21ರಂದು ವಿಶ್ವದಾದ್ಯಂತ ಅಂತರಾಷ್ಟ್ರೀಯ...

ಗುತ್ತಿಗೆ ಆಧಾರದ ಮೇಲೆ ಪಶುವೈದ್ಯರ ಒಂದು ಹುದ್ದೆಗೆ ನೇಮಕಾತಿ ಪ್ರಕ್ರಿಯೆ

ಶಿವಮೊಗ್ಗ ವನ್ಯಜೀವಿ ವಿಭಾಗ ವ್ಯಾಪ್ತಿಯಲ್ಲಿನ ಸಕ್ರೆಬೈಲು ಆನೆ ಬಿಡಾರದ ಇಲಾಖಾ ಆನೆಗಳಿಗೆ...