Thursday, March 19, 2026
Thursday, March 19, 2026

B.Y.Raghavendra ಶಿವಮೊಗ್ಗ ಎನ್.ಟಿ.ರಸ್ತೆ ಬೈಪಾಸ್ ಸೇತುವೆ ಲೋಕಾರ್ಪಣೆ

Date:

B.Y.Raghavendra ಶಿವಮೊಗ್ಗದಲ್ಲಿ ಸಂಸದ ಬಿ.ವೈ. ರಾಘವೇಂದ್ರ ಅವರು ಮಾತನಾಡಿ, ಅಧಿವೇಶನದ ಸಮಯದಲ್ಲಿ ಶಿವಮೊಗ್ಗ ಕ್ಷೇತ್ರದ ಅಭಿವೃದ್ಧಿ ವಿಚಾರದಲ್ಲಿ ಬಹಳ ಚರ್ಚೆ ಆಗಿದೆ. ಪ್ರಧಾನಿಗಳ ಸಂಕಲ್ಪ ಇದೆ ಎಂದಿದ್ದಾರೆ.

ಬರುವಂತಹ 25 ವರ್ಷಗಳಲ್ಲಿ ಭಾರತ ಅಭಿವೃದ್ಧಿ ಹೊಂದಿದ ದೇಶ ಆಗಲಿದೆ. ಆ ನಿಟ್ಟಿನಲ್ಲಿ ಸಾಕಷ್ಟು ಅಭಿವೃದ್ಧಿಗಳು ನಡೆಯುತ್ತಿದೆ.
ಪ್ರಧಾನಿಗಳ ಅಪೇಕ್ಷೆಯಂತೆ ಅಭಿವೃದ್ಧಿ ಕಾರ್ಯಗಳು ಆಗುತ್ತಿದೆ ಎಂದರು.

ಜಿಲ್ಲೆಯಲ್ಲಿ ಸಾಕಷ್ಟು ಅಭಿವೃದ್ಧಿಗಳು ಆಗುತ್ತಿದೆ.
ನೀರಾವರಿ ಯೋಜನೆಗೆ 2 ಸಾವಿರ ಕೋಟಿ ರೂ. ಹಣ ಬಂದಿದೆ.ಜಿಲ್ಲೆಯಲ್ಲಿ ವಿಮಾನ ಹಾರಾಟ ಶುರುವಾಗಿದೆ ಎಂದರು.

ಆದರೆ ಹವಾಮಾನ ಬದಲಾವಣೆಯಿಂದ ವಿಮಾನಗಳ ಹಾರಾಟದಲ್ಲಿ ಸಮಸ್ಯೆ ಆಗಿದೆ.ಸರಿಯಾದ ಸಮಯಕ್ಕೆ ವಿಮಾನಗಳು ಬರುತ್ತಿಲ್ಲ.ಹಾಗಾಗಿ ಸಮಸ್ಯೆ ಬಗೆಹರಿಸಲು ಅಧಿಕಾರಿಗಳ ಜೊತೆ ಸಭೆ ನಡೆದಿದೆ.ಆದಷ್ಟು ಬೇಗ ಈ ಎಲ್ಲಾ ಸಮಸ್ಯೆಗಳು ಬಗೆಹರಿಯಲಿದೆ ಎಂದರು.

B.Y.Raghavendra ರಾತ್ರಿ ವೇಳೆ ವಿಮಾನ ಹಾರಾಟಕ್ಕೂ ಎಲ್ಲಾ ತಯಾರಿ ನಡೆಯುತ್ತಿದೆ.ವಿವಿಧ ಅಭಿವೃದ್ಧಿ ಕಾಮಗಾರಿಯ ಉದ್ಘಾಟನೆಗೆ ನಿತಿನ್ ಗಡ್ಕರಿ ಅವರಿಗೆ ಆಹ್ವಾನ ನೀಡಿದ್ದೇನೆ.ಜನವರಿ ಮೂರನೇ ವಾರದಲ್ಲಿ ಸಮಯ ಕೊಡುತ್ತೇವೆ ಅಂದಿದ್ದಾರೆ.
ನೆಟ್ವರ್ಕ್ ಸಮಸ್ಯೆ ಬಗೆಹರಿಸಲು ಸಚಿವರಿಗೆ ಭೇಟಿ ಮಾಡಿದ್ದೇನೆ.
ಏಪ್ರಿಲ್ ಒಳಗಡೆ ನೆಟ್ವರ್ಕ್ ಟವರ್ ಗಳ ಲೋಕಾರ್ಪಣೆ ಆಗಲಿದೆ.ಬರುವಂತಹ ದಿನಗಳಲ್ಲಿ ಶಿವಮೊಗ್ಗ ಮತ್ತಷ್ಟು ಅಭಿವೃದ್ಧಿ ಆಗಲಿದೆ ಎಂದರು.

ರೈಲ್ವೆ ನಿಲ್ದಾಣಕ್ಕೆ ಕೆಳದಿ ಶಿವಪ್ಪನಾಯಕರ ಹೆಸರು ನಾಮಕರಣ ಆಗಲಿದೆ ಎಂದು ತಿಳಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...