Thursday, March 19, 2026
Thursday, March 19, 2026

Kannadasene Chikkamagaluru ವಾಣಿಜ್ಯ ಮಳಿಗೆಗಳ ಫಲಕಗಳು ಕನ್ನಡದಲ್ಲೇ ಇರಬೇಕೆಂದು ಕ್ರಮಕೈಗೊಳ್ಳಲು ಆಗ್ರಹ

Date:

Kannadasene Chikkamagaluru ಚಿಕ್ಕಮಗಳೂರು ನಗರ ವ್ಯಾಪ್ತಿಯಲ್ಲಿರುವ ಎಲ್ಲಾ ವಾಣಿಜ್ಯ ಮಳಿಗೆಗಳ ನಾಮಫಲಕವನ್ನು ಕನ್ನಡದಲ್ಲೇ ಅಳವಡಿಸುವಂತೆ ಸೂಕ್ತ ಕ್ರಮ ವಹಿಸಬೇಕು ಎಂದು ನಗರಸಭಾ ಅಧ್ಯಕ್ಷರಿಗೆ ಕನ್ನಡಸೇನೆ ಮುಖಂಡರುಗಳು ಒತ್ತಾಯಿಸಿದರು.

ಈ ಸಂಬಂಧ ನಗರಸಭಾ ಅಧ್ಯಕ್ಷ ವರಸಿದ್ಧಿ ವೇಣುಗೋಪಾಲ್ ಅವರಿಗೆ ಮನವಿ ಸಲ್ಲಿಸಿದ ಕನ್ನಡಸೇನೆ ಮುಖಂಡರುಗಳು ಶೇ.70ರಷ್ಟು ಕನ್ನಡದ ಪದಗಳನ್ನೇ ಬಳಸಿ ನಾಮಫಲಕ ಅಳವಡಿಸುವಂತೆ ಸೂಚನೆ ನೀಡಬೇಕು ಎಂದರು.

ಬಳಿಕ ಮಾತನಾಡಿದ ಕನ್ನಡಸೇನೆ ಜಿಲ್ಲಾಧ್ಯಕ್ಷ ಪಿ.ಸಿ.ರಾಜೇಗೌಡ ನಗರದಲ್ಲಿರುವ ವಾಣಜ್ಯ ಮಳಿಗೆಗಳಾದ ಲಾಡ್ಜ್, ಹೋಟೆಲ್, ರೆಸ್ಟೋರೆಂಟ್ ಹಾಗೂ ಹೋಂಸ್ಟೆ, ರೆಸಾರ್ಟ್ಗಳಿಗೆ ಕನ್ನಡದಲ್ಲೇ ಹೆಚ್ಚು ನಾಮಫಲಕ ಹಾಕಿಸಿ ಭಾಷೆಯ ಬೆಳವಣಿಗೆಗೆ ಸಹಕರಿಸಬೇಕು ಎಂದರು.

Kannadasene Chikkamagaluru ಇತ್ತೀಚೆಗೆ ನಾಮಫಲಕಗಳಲ್ಲಿ ಶೇ.30ರಷ್ಟು ಕನ್ನಡ ಪದಗಳ ಬಳಕೆಯಾಗುತ್ತಿದ್ದು ಇದನ್ನು ಕೂಡಲೇ ತಡೆಹಿಡಿ ದು ಶೇ.70 ರಷ್ಟು ಕನ್ನಡವನ್ನು ಬಳಸುವಂತೆ ಅಂಗಡಿ ಮುಂಗಟ್ಟುದಾರರಿಗೆ ಕಡ್ಡಾಯವಾಗಿ ಸೂಚಿಸುವಂತೆ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಕನ್ನಡಸೇನೆ ಆಟೋ ಘಟಕದ ಅಧ್ಯಕ್ಷ ಜಯಪ್ರಕಾಶ್, ಸಂಘಟನಾ ಕಾರ್ಯದರ್ಶಿ ಸತೀಶ್, ಮುಖಂಡರುಗಳಾದ ಶಂಕರೇ ಗೌಡ, ಹರೀಶ್, ಪಾಲಾಕ್ಷಿ ಮತ್ತಿತರರು ಹಾಜರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ಗೋಪಾಲ ಗೌಡರು ಶಿವಮೊಗ್ಗ ಜಿಲ್ಲೆಯನ್ನ ಸಮಾಜವಾದದ ತೊಟ್ಟಿಲನ್ನಾಗಿ ರೂಪಿಸಿದವರು- ವೈ.ಎಸ್.ವಿ.ದತ್ತ.

Shimoga News ನಗರದ ಮಥುರಾ ಪ್ಯಾರಡೈಸ್ ಸಭಾಂಗಣದಲ್ಲಿ ಮಾಜಿ ಶಾಸಕ ಹಾಗೂ...

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...