Monday, February 2, 2026
Monday, February 2, 2026

Kannadasene Chikkamagaluru ವಾಣಿಜ್ಯ ಮಳಿಗೆಗಳ ಫಲಕಗಳು ಕನ್ನಡದಲ್ಲೇ ಇರಬೇಕೆಂದು ಕ್ರಮಕೈಗೊಳ್ಳಲು ಆಗ್ರಹ

Date:

Kannadasene Chikkamagaluru ಚಿಕ್ಕಮಗಳೂರು ನಗರ ವ್ಯಾಪ್ತಿಯಲ್ಲಿರುವ ಎಲ್ಲಾ ವಾಣಿಜ್ಯ ಮಳಿಗೆಗಳ ನಾಮಫಲಕವನ್ನು ಕನ್ನಡದಲ್ಲೇ ಅಳವಡಿಸುವಂತೆ ಸೂಕ್ತ ಕ್ರಮ ವಹಿಸಬೇಕು ಎಂದು ನಗರಸಭಾ ಅಧ್ಯಕ್ಷರಿಗೆ ಕನ್ನಡಸೇನೆ ಮುಖಂಡರುಗಳು ಒತ್ತಾಯಿಸಿದರು.

ಈ ಸಂಬಂಧ ನಗರಸಭಾ ಅಧ್ಯಕ್ಷ ವರಸಿದ್ಧಿ ವೇಣುಗೋಪಾಲ್ ಅವರಿಗೆ ಮನವಿ ಸಲ್ಲಿಸಿದ ಕನ್ನಡಸೇನೆ ಮುಖಂಡರುಗಳು ಶೇ.70ರಷ್ಟು ಕನ್ನಡದ ಪದಗಳನ್ನೇ ಬಳಸಿ ನಾಮಫಲಕ ಅಳವಡಿಸುವಂತೆ ಸೂಚನೆ ನೀಡಬೇಕು ಎಂದರು.

ಬಳಿಕ ಮಾತನಾಡಿದ ಕನ್ನಡಸೇನೆ ಜಿಲ್ಲಾಧ್ಯಕ್ಷ ಪಿ.ಸಿ.ರಾಜೇಗೌಡ ನಗರದಲ್ಲಿರುವ ವಾಣಜ್ಯ ಮಳಿಗೆಗಳಾದ ಲಾಡ್ಜ್, ಹೋಟೆಲ್, ರೆಸ್ಟೋರೆಂಟ್ ಹಾಗೂ ಹೋಂಸ್ಟೆ, ರೆಸಾರ್ಟ್ಗಳಿಗೆ ಕನ್ನಡದಲ್ಲೇ ಹೆಚ್ಚು ನಾಮಫಲಕ ಹಾಕಿಸಿ ಭಾಷೆಯ ಬೆಳವಣಿಗೆಗೆ ಸಹಕರಿಸಬೇಕು ಎಂದರು.

Kannadasene Chikkamagaluru ಇತ್ತೀಚೆಗೆ ನಾಮಫಲಕಗಳಲ್ಲಿ ಶೇ.30ರಷ್ಟು ಕನ್ನಡ ಪದಗಳ ಬಳಕೆಯಾಗುತ್ತಿದ್ದು ಇದನ್ನು ಕೂಡಲೇ ತಡೆಹಿಡಿ ದು ಶೇ.70 ರಷ್ಟು ಕನ್ನಡವನ್ನು ಬಳಸುವಂತೆ ಅಂಗಡಿ ಮುಂಗಟ್ಟುದಾರರಿಗೆ ಕಡ್ಡಾಯವಾಗಿ ಸೂಚಿಸುವಂತೆ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಕನ್ನಡಸೇನೆ ಆಟೋ ಘಟಕದ ಅಧ್ಯಕ್ಷ ಜಯಪ್ರಕಾಶ್, ಸಂಘಟನಾ ಕಾರ್ಯದರ್ಶಿ ಸತೀಶ್, ಮುಖಂಡರುಗಳಾದ ಶಂಕರೇ ಗೌಡ, ಹರೀಶ್, ಪಾಲಾಕ್ಷಿ ಮತ್ತಿತರರು ಹಾಜರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...