Thursday, March 19, 2026
Thursday, March 19, 2026

Shivamogga DC Dr. Selvamani R ಇವಿಎಂ & ವಿವಿಪ್ಯಾಟ್ ಬಗ್ಗೆ ಪೂರ್ಣ ಮಾಹಿತಿಯಿಂದ ಕಾರ್ಯ ನಿರ್ವಹಿಸಿ- ಡಾ.ಸೆಲ್ವಮಣಿ

Date:

Shivamogga DC Dr. Selvamani R ಇವಿಎಂ ಮತ್ತು ವಿವಿಪ್ಯಾಟ್ ಕುರಿತು ಸಮಗ್ರವಾಗಿ ತಿಳಿದುಕೊಂಡು ಅತಿ ಜಾಗೃತೆಯಿಂದ, ಸೂಕ್ಷ್ಮವಾಗಿ ನಿರ್ವಹಣೆ ಮಾಡಬೇಕೆಂದು ಚುನಾವಣೆಗೆ ಸಂಬಂಧಿಸಿದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಆರ್ ಸೂಚನೆ ನೀಡಿದರು.

ಶಿವಮೊಗ್ಗದ ಫ್ರೀಡಂ ಪಾರ್ಕ್ ಬಳಿಯ ಗಾಂಧಿ ಭವನದಲ್ಲಿ ಇಂದು ಅಧಿಕಾರಿಗಳಿಗೆ ಮೊಬೈಲ್ ಡೆಮಾನ್‍ಸ್ಟ್ರೇಷನ್ ವೆಹಿಕಲ್(ಎಂಡಿವಿ) ಮೂಲಕ ಆಯೋಜಿಸಲಾಗಿದ್ದ ಇವಿಎಂ ಮತ್ತು ವಿವಿಪ್ಯಾಟ್ ಪ್ರಾತ್ಯಕ್ಷಿಕೆ ಹಾಗೂ ಅರಿವು ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಇಂದಿನ ಪ್ರಾತ್ಯಕ್ಷಿಕೆ ಮತ್ತು ಅರಿವು ಕಾರ್ಯಕ್ರಮದಲ್ಲಿ ಮಾಸ್ಟರ್ ತರಬೇತುದಾರರು ಸಮಗ್ರವಾಗಿ ಇವಿಎಂ ಮತ್ತು ವಿವಿಪ್ಯಾಟ್ ಕಾರ್ಯಚಟುವಟಿಕೆ ಹಾಗೂ ಬಳಕೆ ವಿಧಾನವನ್ನು ತಿಳಿಸಿಕೊಡುವರು. ಅದನ್ನು ಸಮರ್ಪಕವಾಗಿ ತಿಳಿದುಕೊಂಡು ಇಂದು ಪಾಲ್ಗೊಂಡಿರುವ 7 ತಂಡಗಳು ತಾವು ಸಹ ಪ್ರಾತ್ಯಕ್ಷಿಕೆ ನೀಡಬೇಕು ಎಂದರು.

ಇವಿಎಂ ಮಷೀನ್‍ಗಳು ಅತ್ಯಂತ ಸೂಕ್ಷ್ಮವಾಗಿದ್ದು ಅವುಗಳನ್ನು ಅತಿ ಎಚ್ಚರಿಕೆಯಿಂದ ನಿರ್ವಹಿಸಬೇಕು. ಚುನಾವಣಾ ಆಯೋಗ ಈ ವಿಷಯವಾಗಿ ಅತ್ಯಂತ ನಿರ್ದಿಷ್ಟವಾಗಿದ್ದು, ಯಾವುದೇ ತಪ್ಪುಗಳು ಜರುಗದಂತೆ ಜಾಗೃತೆ ವಹಿಸಬೇಕು. ಇವಿಎಂ ಗಳ ಸಾಗಾಣಿಕೆ, ಶೇಖರಣೆ ಮತ್ತು ಬಳಕೆ ಎಲ್ಲವೂ ಅತ್ಯಂತ ಜವಾಬ್ದಾರಿಯಿಂದ ಕೂಡಿದ್ದು ಎಚ್ಚರಿಕೆಯಿಂದ ನಿರ್ವಹಣೆ ಮಾಡಬೇಕು. ಇಲ್ಲವಾದಲ್ಲಿ ಸಂಬಂಧಿಸಿದ ಅಧಿಕಾರಿಗಳೇ ಜವಾಬ್ದಾರರಾಗುತ್ತಾರೆ. ಇವಿಎಂ ಮತ್ತು ವಿವಿಪ್ಯಾಟ್ ನಲ್ಲಿ ತಾಂತ್ರಿಕ ತೊಂದರೆಗಳು, ಇತರೆ ಸ್ಪಷ್ಟನೆಗಳು ಇದ್ದಲ್ಲಿ ಮಾಸ್ಟರ್ ಟ್ರೈನರ್ ಮತ್ತು ತಂತ್ರಜ್ಞರೊಂದಿಗೆ ಚರ್ಚಿಸಿ ಸರಿಪಡಿಸಿಕೊಳ್ಳುವಂತೆ ತಿಳಿಸಿದರು.

Shivamogga DC Dr. Selvamani R ಮಾಸ್ಟರ್ ಟ್ರೈನರ್ ರವಿಕುಮಾರ್ ಪ್ರಾತ್ಯಕ್ಷಿಕೆ ನಡೆಸಿಕೊಟ್ಟರು. ಈ ವೇಳೆ ಜಿಲ್ಲಾ ಪಂಚಾಯತ್ ಸಿಇಓ ಸ್ನೇಹಲ್ ಸುಧಾಕರ ಲೋಖಂಡೆ, ಅಪರ ಜಿಲ್ಲಾಧಿಕಾರಿ ಸಿದ್ದಲಿಂಗ ರೆಡ್ಡಿ, ಎಲ್ಲ ತಾಲ್ಲೂಕುಗಳ ತಹಶೀಲ್ದಾರರು, ಮಾಸ್ಟರ್ ತರಬೇತುದಾರರು, ಅಧಿಕಾರಿ/ಸಿಬ್ಬಂದಿಗಳು ಪಾಲ್ಗೊಂಡಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...