Friday, March 20, 2026
Friday, March 20, 2026

Welfare Development Association ಕಡೂರು ತಾಲ್ಲೂಕು ಹೊಸಹಳ್ಳಿಯಲ್ಲಿ ಕುಂಬಾರ ಕುಟುಂಬಗಳಿಗೆ ಸವಲತ್ತು ಒದಗಿಸಲು ಮನವಿ

Date:

Welfare Development Association ಕಳೆದ ಹಲವು ದಶಕಗಳಿಂದ ಹಿಂದುಳಿದಿರುವ ಕುಂಬಾರ ಗುಂಡಯ್ಯ ಜನಾಂಗಕ್ಕೆ ಸರ್ಕಾರದ ಸವಲತ್ತು ಒದಗಿಸಿ ಆರ್ಥಿಕ ಹಾಗೂ ಸಾಮಾಜಿಕವಾಗಿ ಸದೃಢಗೊಳಿಸಲು ಮುಂದಾಗ ಬೇಕು ಎಂದು ಶ್ರೀ ಕುಂಬಾರ ಗುಂಡಯ್ಯ ಕ್ಷೇಮಾಭಿವೃದ್ದಿ ಸಂಘವು ಕಡೂರು ಶಾಸಕ ಕೆ.ಎಸ್.ಆನಂದ್ ಅವರನ್ನು ಶುಕ್ರವಾರ ಒತ್ತಾಯಿಸಿದರು.

ಈ ಸಂಬಂಧ ಕಡೂರು ಶಾಸಕರ ಕಚೇರಿಗೆ ತೆರಳಿದ ಸಖರಾಯಪಟ್ಟಣ ಸಮೀಪದ ಹೊಸಹಳ್ಳಿ ಗ್ರಾಮದ ಕ್ಷೇಮಾಭಿವೃಧ್ದಿ ಸಂಘದ ಮುಖಂಡರುಗಳು ಮನವಿ ಸಲ್ಲಿಸಿ ಜನಾಂಗಕ್ಕೆ ಸರ್ಕಾರದ ಸವಲತ್ತುಗಳನ್ನು ಒದಗಿಸ ಬೇಕು ಹಾಗೂ ತಾಲ್ಲೂಕು ಮಟ್ಟದ ಸಂಘ ರಚನೆಗೆ ಸಹಕರಿಸಬೇಕು ಎಂದು ಮನವಿ ಸಲ್ಲಿಸಿದರು.

Welfare Development Association ಈ ವೇಳೆ ಸಂಘದ ಅಧ್ಯಕ್ಷ ಹೆಚ್.ಎಂ.ಪ್ರವೀಣ್‌ಕುಮಾರ್ ಮಾತನಾಡಿ ನಾಗೇನಹಳ್ಳಿ ಪಂಚಾಯಿತಿ ವ್ಯಾಪ್ತಿಯ ಹೊಸಹಳ್ಳಿ ಗ್ರಾಮದಲ್ಲಿ ಸಮುದಾಯದ 50 ಕುಟುಂಬಗಳು ಜೀವನ ನಡೆಸುತ್ತಾ ಸರ್ಕಾರದ ಸವಲತ್ತುಗಳಿಂದ ವಂಚಿತವಾಗಿದೆ. ಆ ನಿಟ್ಟಿನಲ್ಲಿ ಶಾಸಕರು ಸಮುದಾಯಕ್ಕೆ ಸವಲತ್ತು ಒದಗಿಸಿ ಜನಾಂಗದ ಬೆಳವಣಿಗೆಗೆ ಸಹಕರಿಸಬೇಕು ಎಂದು ಆಗ್ರಹಿಸಿದರು.

ಜನಾಂಗಕ್ಕೆ ಈಗಾಗಲೇ ಗ್ರಾಮದಲ್ಲಿ ಯಾವುದೇ ಸಮುದಾಯ ಭವನ ಇಲ್ಲದಾಗಿದೆ. ಆ ನಿಟ್ಟಿನಲ್ಲಿ ಅನುದಾನ ಒದಗಿಸಿಕೊಟ್ಟು ಭವನ ನಿರ್ಮಾಣಕ್ಕೆ ಅನುವು ಮಾಡಿಕೊಡಬೇಕು. ವಿಶೇಷವಾಗಿ ಶ್ರೀ ತ್ರಿಪದಿ ಬ್ರಹ್ಮ ಸರ್ವಜ್ಞ ಮೂರ್ತಿ ಜಯಂತಿಗೆ ಕುಂಬಾರ ಗುಂಡಯ್ಯ ಜನಾಂಗಕ್ಕೆ ಆಹ್ವಾನ ನೀಡಬೇಕು ಎಂದರು.

ಈ ಸಂದರ್ಭದಲ್ಲಿ ಸಂಘದ ಪ್ರಧಾನ ಕಾರ್ಯದರ್ಶಿ ಹೆಚ್.ಎಂ.ಜಯಪ್ಪ, ಖಜಾಂಚಿ ಹೆಚ್.ಕೆ.ಜಯಣ್ಣ, ಗ್ರಾ.ಪಂ. ಮಾಜಿ ಅಧ್ಯಕ್ಷ ಹೆಚ್.ಎಸ್.ರಾಜು, ಮುಖಂಡರುಗಳಾದ ಕಲ್ಮರುಡಪ್ಪ, ಮರಿಸಿದ್ದಪ್ಪ, ರೇಣುಕಾ, ಹೇಮ ರಾಜು, ಬಸವರಾಜು, ರಮೇಶ್, ವಸಂತ್, ಮಹೇಂದ್ರ ಕುಮಾರ್, ಲೋಕೇಶ್, ಚಂದ್ರಪ್ಪ, ಮೋಹನ್ ಇದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ಗೋಪಾಲ ಗೌಡರು ಶಿವಮೊಗ್ಗ ಜಿಲ್ಲೆಯನ್ನ ಸಮಾಜವಾದದ ತೊಟ್ಟಿಲನ್ನಾಗಿ ರೂಪಿಸಿದವರು- ವೈ.ಎಸ್.ವಿ.ದತ್ತ.

Shimoga News ನಗರದ ಮಥುರಾ ಪ್ಯಾರಡೈಸ್ ಸಭಾಂಗಣದಲ್ಲಿ ಮಾಜಿ ಶಾಸಕ ಹಾಗೂ...

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...