Thursday, March 19, 2026
Thursday, March 19, 2026

Klive Special ಜೀವಭಾವಗಳುದ್ಧರಿಸಿದ ಏಸುವಿನ ಜನ್ಮದಿನ-ಕವಿ ರಮೇಶ್ ಗುಬ್ಬಿ ಅವರ ಕವಿತೆ

Date:

Klive Special “ಸಮಸ್ತ ಅಕ್ಷರಬಂಧುಗಳಿಗೂ ಕ್ರಿಸ್ಮಸ್ ಹಬ್ಬದ ಹಾರ್ದಿಕ ಶುಭಕಾಮನೆಗಳು. ನಮ್ಮೆಲ್ಲರ ನಲುಮೆಯ ಕ್ರೈಸ್ತ ಬಾಂಧವರಿಗೆ ಶುಭಾಶಯಗಳೊಂದಿಗೆ, ಒಲುಮೆಯ ಅಕ್ಷರಬಂಧುಗಳ ಪರವಾಗಿ ಹಬ್ಬದುಡುಗರೆಯಾಗಿ ಈ ಕಾವ್ಯ ಕಾಣಿಕೆ. ದೇವಮಾನವ ಯೇಸುಕ್ರಿಸ್ತನ ದಿವ್ಯ ಸಂದೇಶ ಜಗದಿ ಅನುಕ್ಷಣವೂ ಅನುರಣಿಸಲಿ. ಸಕಲ ಬದುಕುಗಳೂ ಕರುಣೆ-ಪ್ರೀತಿ-ಮಮತೆಗಳಿಂದ ಸಂತಸದಿ ನಳನಳಿಸಲಿ” – ಪ್ರೀತಿಯಿಂದ ಎ.ಎನ್.ರಮೇಶ್.ಗುಬ್ಬಿ.

ಈ ದಿನ..!

ಪ್ರೀತಿ ಮಮಕಾರಗಳ ತತ್ವ
ಸಾರಲು ದೇವದೂತ ಕ್ರಿಸ್ತ
ಧರೆಗಿಳಿದು ಬಂದ ಸುದಿನ
ದಿವ್ಯಜ್ಯೋತಿ ಬುವಿಗಿಳಿದು
ಬೆಳಗಿತು ಅಗಣಿತ ಹೃನ್ಮನ.!

ಕರುಣೆ ಕ್ಷಮೆಗಳ ಮಹತ್ವ
ತೋರಲು ದೈವ ಯೇಸು
ಇಳೆಗವತರಿಸಿದ ಶುಭದಿನ
ಭವ್ಯಕಾಂತಿ ಜೀವತಳೆದು
ಮೊಳಗಿತು ನವ್ಯ ಕೀರ್ತನ.!

ಮಮತೆ ಸತ್ಯಗಳ ನಿಜಸತ್ವ
ಸಾಕ್ಷಿಕರಿಸಲು ದಯಾಮಯ
ಅವನಿಗಡಿಯಿಟ್ಟ ಪುಣ್ಯದಿನ
ಸುರದೀಪ್ತಿ ರೂಪ ಪಡೆದು
ಮಿನುಗಿತು ಅನನ್ಯ ಚೇತನ.!

Klive Special ಜೀವಗಳಿಗೆ ಹೊಸದು ದಿಕ್ಕು
ನೀಡಿದ ದೈವಾಂಶಸಂಭೂತ
ಜನಿಸಿದ ಪಾವನ ಪವಿತ್ರದಿನ
ಬಾಲಕ್ರಿಸ್ತನ ಮುಗುದ ನಗು
ಧರಣಿ ದೇದೀಪ್ಯವಾಗಿಸಿದ ದಿನ.!

ಬದುಕುಗಳ ಬೇಗುದಿ ಬಿಕ್ಕು
ಕಳೆದ ಬೆಳಕ ಕಾರುಣ್ಯದಾತ
ಹುಟ್ಟಿದ ಮಹಾ ಮಂಗಳದಿನ
ಜಗದ ಜೀವಭಾವಗಳುದ್ದರಿಸಿದ
ಯೇಸುದೇವನ ಜನುಮದಿನ.!

ಎ.ಎನ್.ರಮೇಶ್. ಗುಬ್ಬಿ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...