Tuesday, October 1, 2024
Tuesday, October 1, 2024

Yuvanidhi Scheme ನಿರುದ್ಯೋಗಿ ಪದವೀಧರರೆ,ಡಿಪ್ಲೊಮ ಪಡೆದವರೆ ಯುವ ನಿಧಿಗೆ ನೋಂದಾಯಿಸಲು ಶುರುಮಾಡಿ

Date:

Yuvanidhi Scheme ರಾಜ್ಯ ಸರ್ಕಾರದ 5ನೇಯ ಗ್ಯಾರಂಟಿ ಯೋಜನೆಯಾದ ಯುವನಿಧಿ ಯೋಜನೆಯು ಅನುಷ್ಠಾನಗೊಳ್ಳುತ್ತಿದ್ದು, ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

2020-23ನೇ ಸಾಲಿನಲ್ಲಿ ಯಾವುದೇ ಡಿಪ್ಲೊಮಾ ಹಾಗೂ ಪದವಿ ಉತ್ತೀರ್ಣರಾಗಿ ಆರು ತಿಂಗಳಲ್ಲಿ ಉದ್ಯೋಗ ಸಿಗದವರಿಗೆ ಈ ಯೋಜನೆ ಅನ್ವಯವಾಗಲಿದೆ. ಅನುಮೋದನೆಗೊಂಡ ಅಭ್ಯರ್ಥಿಗಳಿಗೆ ಮುಂದಿನ ೨೪ ತಿಂಗಳು ಪದವೀಧರರಿಗೆ ಮಾಸಿಕ ರೂ. 3000/- ಹಾಗೂ ಡಿಪ್ಲೊಮಾ ಮುಗಿಸಿದವರಿಗೆ ಮಾಸಿಕ ರೂ. 1500/- ನಿರುದ್ಯೋಗ ಭತ್ಯ ನೀಡಲಾಗುವುದು. ಉದ್ಯೋಗ ಸಿಕ್ಕಿದ ಕೂಡಲೇ ಈ ಸೌಲಭ್ಯ ಸ್ಥಗಿತಗೊಳ್ಳಲಿದೆ.

ಅರ್ಜಿ ಸಲ್ಲಿಸಲು ಕರ್ನಾಟಕದ ನಿವಾಸಿಯಾಗಿರಬೇಕು. 2023ರಲ್ಲಿ ಪದವಿ/ಡಿಪ್ಲೊಮಾ ಉತ್ತೀರ್ಣರಾಗಿರಬೇಕು. ಉತ್ತೀರ್ಣರಾಗಿ 180 ದಿನಗಳಾದರೂ ಉದ್ಯೋಗ ಸಿಗದೆ ನಿರುದ್ಯೋಗಿಯಾಗಿರಬೇಕು. ಅರ್ಜಿ ಸಲ್ಲಿಸಿದ ದಿನದಿಂದ ಹುದ್ದೆ ಸಿಗುವವರೆಗೂ ಅಥವಾ 2 ವರ್ಷ ಗರಿಷ್ಠ ಅವಧಿವರೆಗೆ ಮಾತ್ರ ನಿರುದ್ಯೋಗ ಭತ್ಯೆ ಸಿಗಲಿದೆ.

Yuvanidhi Scheme ಅರ್ಜಿ ಸಲ್ಲಿಸುವ ದಿನಾಂಕ ಡಿ. 26 ರಿಂದ ಪ್ರಾರಂಭಗೊಂಡಿದ್ದು, ಆಸಕ್ತರು ಆಧಾರ್ ಕಾರ್ಡ್, ಬ್ಯಾಂಕ್ ಪಾಸ್‌ಬುಕ್, ಎಸ್‌ಎಸ್‌ಎಲ್‌ಸಿ ಅಂಕಪಟ್ಟಿ, ಪಿಯುಸಿ ಅಂಕಪಟ್ಟಿ, ಪದವಿ ಪ್ರಮಾಣಪತ್ರಗಳು ಹಾಗೂ ರೇಷನ್ ಕಾರ್ಡ್ಗಳೊಂದಿಗೆ ಅರ್ಜಿಯನ್ನು ಕರ್ನಾಟಕ ಒನ್, ಗ್ರಾಮ ಒನ್, ಬಾಪೂಜಿ ಸೇವಾ ಕೇಂದ್ರ, ಸೇವಾಸಿಂಧು ಪೋರ್ಟಲ್‌ನಲ್ಲಿ ಯುವನಿಧಿ ಯೋಜನೆ ಸೇವೆ ಆಯ್ಕೆ ಮಾಡಿಕೊಂಡು ಅರ್ಜಿಯನ್ನು ಸಲ್ಲಿಸುವಂತೆ ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

CM Siddharamaih ಪರಿಹಾರ ರೂಪದಲ್ಲಿ ಪಡೆದಿದ್ದ ನಿವೇಶನಗಳನ್ನ ಪತ್ನಿ ಹಿಂದಿರುಗಿಸಿದ್ದಾರೆ- ಸಿದ್ಧರಾಮಯ್ಯ

CM Siddharamaih ಮೈಸೂರಿನ ಮುಡಾ ಭೂಸ್ವಾಧೀನ ನಡೆಸದೆ ವಶಕ್ಕೆ ಪಡೆದಿದ್ದ...

R. Ashok ಸಿದ್ಧರಾಮಯ್ಯನವರಿಗೆ ತಮ್ಮ ತಪ್ಪಿನ ಅರಿವಾಯಿತಲ್ಲ”-ಆರ್ .ಅಶೋಕ್ ಪ್ರತಿಕ್ರಿಯೆ

R. Ashok ಮೂಡಾ ಹಗರಣದಲ್ಲಿ ಕಾನೂನಿನ ಕುಣಿಕೆ ಬಿಗಿಯಾಗುತ್ತಿದ್ದಂತೆ ಸಿಎಂ ಸಿದ್ಧರಾಮಯ್ಯ...

Shivamogga-Bhadravathi Urban Development Authority ಊರಗಡೂರು ನಿವೇಶನ ಪಡೆಯಲು ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ಮುಂದೂಡಿಕೆ

Shivamogga-Bhadravathi Urban Development Authority ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರವು ಶಿವಮೊಗ್ಗ ನಗರದ...