Monday, April 6, 2026
Monday, April 6, 2026

Department Of Labour Commission ಗಿಗ್ ಕಾರ್ಮಿಕರು ವಿಮಾ ಪರಿಹಾರ ಯೋಜನೆಗೆ ಹೇಗೆ ಅರ್ಜಿ ಸಲ್ಲಿಸಬೇಕು?

Date:

Department Of Labour Commission ಕರ್ನಾಟಕ ರಾಜ್ಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಫುಡ್ ಡೆಲಿವರಿ ಮಾಡುವ ಹಾಗೂ ಇ-ಕಾಮರ್ಸ್ ಸಂಸ್ಥೆಗಳಾದ ಅಮೆಜಾನ್, ಫ್ಲಿಪ್‍ಕಾರ್ಟ್, ಪೋರ್ಟರ್, ಫಾರ್ಮಸಿ, ಬ್ಲಿಂಕಿಟ್, ಜೆಪ್ಪೊ ಬಿಗ್ ಬಾಸ್ಕೆಟ್, ಡೊಮಿನೊಸ್ ಮುಂತಾದ ಸಂಸ್ಥೆಗಳಲ್ಲಿ ಡೆಲಿವರಿ ವೃತ್ತಿಯಲ್ಲಿ ತೊಡಗಿರುವ ಗಿಗ್ ಕಾರ್ಮಿಕರಿಗೆ ದೇಶದಲ್ಲಿಯೇ ಮೊದಲ ಬಾರಿಗೆ ವಿಮಾ ಯೋಜನೆ ಜಾರಿಯಾಗಿದೆ.

ಎಲ್ಲಾ ಅರ್ಹ ಅಸಂಘಟಿತ ಗಿಗ್ ಕಾರ್ಮಿಕರಿಗೆ ಸೇವಾ ಸಿಂಧು ಪೋರ್ಟಲ್‍ನಲ್ಲಿ ನೋಂದಾಯಿಸಬಹುದಾಗಿದೆ ಎಂದು ಜಿಲ್ಲಾ ಕಾರ್ಮಿಕ ಅಧಿಕಾರಿಗಳು ತಿಳಿಸಿದ್ದಾರೆ.

ವಿಮಾ ಸೌಲಭ್ಯವು ಕರ್ತವ್ಯದಲ್ಲಿರುವಾಗ, ಇಲ್ಲದಿರುವಾಗ ಸಂಭವಿಸುವ ಅಪಘಾತಗಳಿಗೂ ಅನ್ವಯವಾಗಲಿದ್ದು, ಯೋಜನೆ ಸಂಪೂರ್ಣ ಉಚಿತ, ಯಾವುದೇ ರೀತಿಯ ಪ್ರೀಮಿಯಂ ಪಾವತಿಸುವ ಅಗತ್ಯ ಇರುವುದಿಲ್ಲ. ಅಪಘಾತದಲ್ಲಿ ಮರಣ ಹೊಂದಿದ್ದಲ್ಲಿ ವಿಮಾ ಪರಿಹಾರ 2 ಲಕ್ಷ ರೂ. ಹಾಗೂ ಜೀವ ವಿಮಾ 2 ಲಕ್ಷ ರೂ. ಸೇರಿ ಒಟ್ಟು 4 ಲಕ್ಷ ರೂ, ಅಪಘಾತದಿಂದ ಶಾಶ್ವತ ದುರ್ಬಲ ಹೊಂದಿದ್ದಲ್ಲಿ 2 ಲಕ್ಷ ರೂ ವರೆಗೆ ಸೌಲಭ್ಯ, ಆಸ್ಪತ್ರೆ ವೆಚ್ಚ ಮರುಪಾವತಿ ಒಂದು ಲಕ್ಷ ರೂ. ವರೆಗೆ ಸೌಲಭ್ಯಗಳು ಇರುತ್ತದೆ.

Department Of Labour Commission 18 ರಿಂದ 60 ವರ್ಷದೊಳಗಿನ ಗಿಗ್ ಕಾರ್ಮಿಕರು ಸೇವಾಸಿಂಧು ಪೋರ್ಟಲ್‍ ಮೂಲಕ ತಮ್ಮ ಹೆಸರು ನೋಂದಾಯಿಸಬೇಕು. ಆದಾಯ ತೆರಿಗೆ ಪಾವತಿದಾರರಾಗಿರಬಾರದು, ಭವಿಷ್ಯನಿಧಿ ಹಾಗೂ ಇಎಸ್‍ಐ ಫಲಾನುಭವಿಯಾಗಿರಬಾರದು ಹಾಗೂ ಕರ್ನಾಟಕದಲ್ಲಿ ಡೆಲಿವರಿ ಕಾರ್ಯ ನಿರ್ವಹಿಸುತ್ತಿರುವವರಿಗೆ ಮಾತ್ರ ಅನ್ವಯಿಸುತ್ತದೆ. ಆಧಾರ್ ಸಂಖ್ಯೆ, ವೃತ್ತಿ ನಿರ್ವಹಿಸುತ್ತಿರುವ ಸಂಸ್ಥೆಗಳು ವಿತರಿಸಿದ ಗುರುತಿನ ಚೀಟಿ, ವೇತನ ಚೀಟಿ, ವೇತನ ಪಡೆದ ಬ್ಯಾಂಕ್ ಪಾಸ್‍ಬುಕ್ ಹಾಗೂ ಇ-ಶ್ರಮ್ ಕಾರ್ಡ್ ಈ ಎಲ್ಲಾ ದಾಖಲಾತಿಗಳನ್ನು ಹೊಂದಿರಬೇಕು.

ಹೆಚ್ಚಿನ ಮಾಹಿತಿಗಾಗಿ ಶಿವಮೊಗ್ಗ ಕಾರ್ಮಿಕ ನಿರೀಕ್ಷಕರುಗಳ ಕಚೇರಿಯ ಕಾರ್ಮಿಕ ಅಧಿಕಾರಿ ದೂ.ಸಂ. 08182-248940 ನ್ನು ಸಂಪರ್ಕಿಸಬಹುದು ಹಾಗೂ ಶಿವಮೊಗ್ಗ ಜಿಲ್ಲೆಯ ಕಾರ್ಮಿಕ ಅಧಿಕಾರಿಯವರ ಕಚೇರಿ ಅಥವಾ ಕಾರ್ಮಿಕ ನಿರೀಕ್ಷಕರ ಕಚೇರಿ ಶಿವಮೊಗ್ಗ, ಭದ್ರಾವತಿ, ಸೊರಬ, ಸಾಗರ, ಹೊಸನಗರ, ತೀರ್ಥಹಳ್ಳಿ, ಶಿಕಾರಿಪುರ ಕಚೇರಿಗಳನ್ನು ಸಂಪರ್ಕಿಸಬಹುದೆಂದು ಕಾರ್ಮಿಕ ಅಧಿಕಾರಿ ಸುಮ ಹೆಚ್.ಎಸ್ ಅವರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N.Channabasappa ಸಮಾಜದ ಪ್ರತಿಯೊಬ್ಬರಿಗೂ ತರಬೇತಿ ಕೇಂದ್ರದ ಪ್ರಯೋಜನ ಸಿಗಲಿ- ಎಸ್.ಎನ್.ಚನ್ನಬಸಪ್ಪ

S.N.Channabasappa ಅಖಿಲ ಕರ್ನಾಟಕ ದೈವಜ್ಞ ಬ್ರಾಹ್ಮಣ ಮಹಿಳಾ ಮಂಡಳಿ, ಶಿವಮೊಗ್ಗ ಇವರ...

Kuvempu University ಮಾಧ್ಯಮ ಕ್ಷೇತ್ರದಲ್ಲಿ ನಿರೂಪಕರಿಗೆ ಹೆಚ್ಚಿನ ಬೇಡಿಕೆ: ಭಾಷಾ ಪ್ರೌಢಿಮೆ, ವಿಷಯಗಳ ಸಮಗ್ರ ಅರಿವು ಮುಖ್ಯ- ಹೊನ್ನಾಳಿ ಚಂದ್ರಶೇಖರ್

Kuvempu University ಪತ್ರಕರ್ತರಾಗಬೇಕಾದರೆ ಆಳವಾದ ಜ್ಞಾನವನ್ನು ಹೊಂದಿರಬೇಕು ಮತ್ತು ನಿರಂತರ ಓದುತ್ತಾ...

Rotary Shivamogga ರಕ್ತದಾನವು ಮಹತ್ವದ ಸೇವೆ- ಡಿ.ಎಸ್.ಅರುಣ್

Rotary Shivamogga ಶಿವಮೊಗ್ಗ ಜಿಲ್ಲಾ ಔಷಧ ವ್ಯಾಪಾರಿಗಳ ಸಂಘದ ವತಿಯಿಂದ, ರೋಟರಿ...

B.Y. Raghavendra ಕೇಂದ್ರ ಸಚಿವರೊಂದಿಗೆ ಅಡಿಕೆ ಕೃಷಿಕರ ಸಮಸ್ಯೆ ಚರ್ಚಿಸಿದ ಬಿ.ವೈ.ರಾಘವೇಂದ್ರ

B.Y. Raghavendra ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಸಚಿವರಾದ ಶ್ರೀ...