Tuesday, October 1, 2024
Tuesday, October 1, 2024

Ram Mandir Ayodhya ಅಯೋಧ್ಯೆಗೆ ಜನವರಿ 22 ರಂದು ಎಲ್ಲರೂ ಬಂದರೆ ನೂಕು ನುಗ್ಗಲಾಗಬಹುದು. ನಿಮ್ಮೂರಲ್ಲೇ ಇದ್ದು ರಾಮನನ್ನ ಪ್ರಾರ್ಥಿಸಿ- ಮೋದೀಜಿ

Date:

Ram Mandir Ayodhya ರಾಮ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮವನ್ನು ಕಣ್ತುಂಬಿಕೊಳ್ಳಬೇಕೆಂಬುದು ಎಲ್ಲರ ಬಯಕೆಯಾಗಿದೆ. ಆದರೆ ಎಲ್ಲರಿಗೂ ಜನವರಿ 22ರಂದು ಅಯೋಧ್ಯೆಗೆ ಬರಲು ಸಾಧ್ಯವಿಲ್ಲ. ಮನೆಯಲ್ಲಿಯೇ ದೀಪ ಬೆಳಗುವುದರ ಮೂಲಕ ಶ್ರೀರಾಮನನ್ನು ಪ್ರಾರ್ಥಿಸಿ’ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಜನತೆಗೆ ಮನವಿ ಮಾಡಿದ್ದಾರೆ.

ಭದ್ರತಾ ದೃಷ್ಟಿಯಿಂದ 22ರಂದು ಅಯೋಧ್ಯೆಗೆ ತಲುಪುವುದು ಕಷ್ಟಕರವಾಗಿದೆ. ದೇಶದ ಜನತೆಗೆ ಅದರಲ್ಲೂ ಉತ್ತರ ಪ್ರದೇಶದ ಜನತೆಗೆ ಆ ದಿನದಂದು ಅಯೋಧ್ಯೆಗೆ ಬರಬೇಡಿ ಎಂದು ಕೈ ಮುಗಿದು ಕೇಳಿಕೊಳ್ಳುತ್ತೇನೆ. ಜನವರಿ 23ರ ನಂತರ ಯಾವಾಗ ಬೇಕಾದರೂ ಭೇಟಿ ನೀಡಿ ಶ್ರೀರಾಮನ ದರ್ಶನ ಪಡೆಯಿರಿ’ ಎಂದರು.

Ram Mandir Ayodhya ಆ ದಿನ ಶ್ರೀರಾಮ ಅಯೋಧ್ಯೆಗೆ ಬರುತ್ತಾನೆ. ಶ್ರೀರಾಮನ ಭಕ್ತರಾದ ನಾವು ಶ್ರೀರಾಮನಿಗೆ ತೊಂದರೆಯಾಗುವಂತಹ ಯಾವ ಕೆಲಸವನ್ನು ಮಾಡಬಾರದು. ರಾಮ ಮಂದಿರ ನಿರ್ಮಾಣಕ್ಕೆ 550 ವರ್ಷ ಕಾದಿದ್ದೇವೆ. ಅವನ ದರ್ಶನಕ್ಕಾಗಿ ಇನ್ನೂ ಸ್ವಲ್ಪ ಸಮಯ ಕಾಯಬೇಕಿದೆ’ ಎಂದು ಹೇಳಿದರು.

‘ಆ ದಿನ ಅಯೋಧ್ಯೆಗೆ ಬರಲಾಗದೆ ಇರುವವರು ಬೇಸರಿಸುವ ಅಗತ್ಯವಿಲ್ಲ. ತಮ್ಮ ಮನೆಯಲ್ಲಿ ಶ್ರೀರಾಮನನ್ನು ಪ್ರಾರ್ಥಿಸಿ. ಶ್ರೀರಾಮ ಜ್ಯೋತಿ ಬೆಳಗಿಸುವ ಮೂಲಕ ದೀಪಾವಳಿಯನ್ನು ಆಚರಿಸಿ’ ಎಂದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

CM Siddharamaih ಪರಿಹಾರ ರೂಪದಲ್ಲಿ ಪಡೆದಿದ್ದ ನಿವೇಶನಗಳನ್ನ ಪತ್ನಿ ಹಿಂದಿರುಗಿಸಿದ್ದಾರೆ- ಸಿದ್ಧರಾಮಯ್ಯ

CM Siddharamaih ಮೈಸೂರಿನ ಮುಡಾ ಭೂಸ್ವಾಧೀನ ನಡೆಸದೆ ವಶಕ್ಕೆ ಪಡೆದಿದ್ದ...

R. Ashok ಸಿದ್ಧರಾಮಯ್ಯನವರಿಗೆ ತಮ್ಮ ತಪ್ಪಿನ ಅರಿವಾಯಿತಲ್ಲ”-ಆರ್ .ಅಶೋಕ್ ಪ್ರತಿಕ್ರಿಯೆ

R. Ashok ಮೂಡಾ ಹಗರಣದಲ್ಲಿ ಕಾನೂನಿನ ಕುಣಿಕೆ ಬಿಗಿಯಾಗುತ್ತಿದ್ದಂತೆ ಸಿಎಂ ಸಿದ್ಧರಾಮಯ್ಯ...

Shivamogga-Bhadravathi Urban Development Authority ಊರಗಡೂರು ನಿವೇಶನ ಪಡೆಯಲು ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ಮುಂದೂಡಿಕೆ

Shivamogga-Bhadravathi Urban Development Authority ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರವು ಶಿವಮೊಗ್ಗ ನಗರದ...