Saturday, May 23, 2026
Saturday, May 23, 2026

S N Channabasappa ಕಾಂಗ್ರೆಸ್ ಸರ್ಕಾರ ಬಂದಾಗಿನಿಂದ ರಾಜ್ಯದಲ್ಲಿ ಗೂಂಡಾರಾಜ್ – ಶಾಸಕ ಚನ್ನಬಸಪ್ಪ

Date:

S N Channabasappa ಕಾಂಗ್ರೆಸ್ ಸರ್ಕಾರ ಬಂದಾಗಿನಿಂದ ಕರ್ನಾಟಕದಲ್ಲಿ ಗೂಂಡಾ ರಾಜ್‌ ನಡೆಯುತ್ತಲೇ ಬಂದಿದೆ. ಇದಕ್ಕೆ ಮತ್ತೊಂದು ಉದಾಹರಣೆ ಎಂಬಂತೆ ನಮ್ಮ ಜಿಲ್ಲೆಯ ಹೊಸನಗರ ತಾಲೂಕಿನ ಯುವ ಮೋರ್ಚಾ ಅಧ್ಯಕ್ಷರಾದ ನಿತೀನ್ ಅವರ ಮೇಲೆ ಕಾಂಗ್ರೆಸ್ ಪಕ್ಷದ ಗೂಂಡಗಳಿಂದ ನಡೆದ ಹಲ್ಲೆ ಪ್ರಕರಣ. ದಿನದಿಂದ ದಿನಕ್ಕೆ ಕಾಂಗ್ರೆಸ್ ಸರ್ಕಾರದ ಸಚಿವರು ಮತ್ತು ಶಾಸಕರು ಗೂಂಡಾಗಳನ್ನಿಟ್ಟು ದಬ್ಬಾಳಿಕೆ ಮಾಡುತ್ತಿದ್ದು, ಕೆಳ ಹಂತದಲ್ಲಿ ಕಾಂಗ್ರೆಸ್ ಮುಖಂಡರೇ ಗೂಂಡಾಗಳಾಗಿ ಅಖಾಡಕ್ಕೆ ಇಳಿಯುತ್ತಿದ್ದಾರೆ. ಇಷ್ಟೆಲ್ಲಾ ನಡೆಯುತ್ತಿದ್ದರೂ ಗೃಹ ಸಚಿವರು ಸುಮ್ಮನಿರುವುದು ದುರ್ದೈವದ ಸಂಗತಿ ಎಂದು ಶಿವಮೊಗ್ಗ ನಗರದ ಶಾಸಕರಾದ ಎಸ್.ಎನ್. ಚೆನ್ನಬಸಪ್ಪ ಅವರು ಹೇಳಿದರು.

S N Channabasappa ಇಂದು ಬೆಳಗ್ಗೆ ಶಿವಮೊಗ್ಗ ನಗರದ ಶಾಸಕರಾದ ಎಸ್ಎನ್ ಚನ್ನಬಸಪ್ಪ ಅವರು ಕಾಂಗ್ರೆಸ್ ಪಕ್ಷದ ಕಾರ್ಯಕರ್ತರಿಂದ ಹಲ್ಲೆಗೊಳಗಾಗಿ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಹೊಸನಗರ ತಾಲೂಕಿನ ಯುವ ಮೋರ್ಚಾ ಅಧ್ಯಕ್ಷರಾದ ನಿತೀನ್ ಮತ್ತು ಅವರ ಸಹೋದರ ನವೀನ್ ಹಾಗೂ ಹಲ್ಲೆಗೊಳಗಾಗಿ ಚಿಕಿತ್ಸೆಗಾಗಿ ದಾಖಲಾಗಿರುವ ಭದ್ರಾವತಿಯ ಕಾರ್ಯಕರ್ತ ಪರಮೇಶ್ ಅವರ ಆರೋಗ್ಯವನ್ನು ವಿಚಾರಿಸಿ, ಅವರಿಗೆ ಧೈರ್ಯ ತುಂಬುವಂತ ಕೆಲಸವನ್ನು ಮಾಡಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ತಾತ್ಕಾಲಿಕ ನೇರ ನೇಮಕಾತಿ ಮೂಲಕಖಾಯಂ ಶಿಕ್ಷಕರ ನೇಮಕಾತಿವರೆಗೆ ಅತಿಥಿ ಶಿಕ್ಷಕರ ನೇಮಕ

Shimoga News 2026-27ನೇ ಶೈಕ್ಷಣಿಕ ಸಾಲಿಗೆ ರಾಜ್ಯದ ಸರ್ಕಾರಿ ಪ್ರಾಥಮಿಕ ಮತ್ತು...

Klive Special Article ನೇಪಾಳದಲ್ಲಿ ಶೃಂಗೇರಿ ಜಗದ್ಗುರುಗಳು.

ವಿಶೇಷ ವರದಿ: ಪ್ರಭಾಕರ ಕಾರಂತ Klive Special Article ಜಗದ್ಗುರು ಶ್ರೀ ವಿಧುಶೇಖರ ಭಾರತೀ...

Eshwara Khandre ಶ್ರಾವ್ಯಾ ಸಾಗರ್ ನಿರ್ಮಾಣದ ಸಾಕ್ಷ್ಯಚಿತ್ರಕ್ಕೆ ಜೀವವೈವಿಧ್ಯ ಪ್ರಶಸ್ತಿ.

Eshwara Khandre ಕರ್ನಾಟಕ ಸರ್ಕಾರದ ಜೀವವೈವಿದ್ಯ ಮಂಡಳಿ ಕೊಡಮಾಡುವ ೨೦೨೫-೨೬ನೇ ಸಾಲಿನ...