Saturday, May 23, 2026
Saturday, May 23, 2026

Sri Skethra Adichunchanagiri ಕಾಲಭೈರವಾಷ್ಟಮಿ ವಿಶೇಷ ಭಜನಾ ಮೇಳ ಸ್ಪರ್ಧೆ

Date:

Sri Skethra Adichunchanagiri ನಾಗಮಂಗಲ ತಾಲೂಕಿನ ಶ್ರೀ ಕ್ಷೇತ್ರ ಆದಿಚುಂಚನಗಿರಿಯಲ್ಲಿ ಜ.4ರಂದು ಕಾಲಬೈರವಾಷ್ಠಮಿ ಪ್ರಯುಕ್ತ ಭಜನಾ ಮೇಳ, ಭೈರವಮಾಲೆ, ಗಿರಿಪ್ರದಕ್ಷಿಣೆ ಸೇರಿದಂತೆ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಜೊತೆಗೆ ಶ್ರೀ ಕಾಲಬೈರವೇಶ್ವರ ಸ್ವಾಮಿಗೆ ವಿಶೇಷ ಪೂಜೆ, ಹೊಮ, ಹವನಾದಿಗಳನ್ನು ಹಮ್ಮಿಕೊಳ್ಳಲಾಗಿದೆ.

ಕಾರ್ಯಕ್ರಮದಲ್ಲಿ ಪದ್ಮಭೂಷಣ ಪುರಸ್ಕೃತ ಪರಮಪೂಜ್ಯ ಜಗದ್ಗುರು ಶ್ರೀ ಶ್ರೀ ಶ್ರೀ ಡಾ. ಬಾಲಗಂಗಾಧರನಾಥ ಮಹಾಸ್ವಾಮೀಜಿಯವರ ದಿವ್ಯಾನುಗ್ರಹದೊಂದಿಗೆ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ 72ನೇ ಪೀಠಾಧ್ಯಕ್ಷ ಪರಮಪೂಜ್ಯ ಜಗದ್ಗುರು ಶ್ರೀ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿ ದಿವ್ಯ ಸಾನ್ನಿಧ್ಯದಲ್ಲಿ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪ್ರಧಾನ ಕಾರ್ಯದರ್ಶಿ ಶ್ರೀ ಪ್ರಸನ್ನನಾಥ ಸ್ವಾಮೀಜಿ ಇವರ ದಿವ್ಯ ಉಪಸ್ಥಿತರಿರುವರು.
ಭಜನಾ ಮೇಳದಲ್ಲಿ ಭಾಗವಹಿಸುವವರು ಬೆಳಗ್ಗೆ 8ಗಂಟೆಯೊಳಗೆ ನೊಂದಣಿಮಾಡಿಕೊಳ್ಳಬೇಕು. ಒಂದು ತಂಡದಲ್ಲಿ ಕನಿಷ್ಠ 8 ರಿಂದ ಗರಿಷ್ಟ 12 ಜನ ಮಾತ್ರ ಭಾಗವಹಿಸಲು ಅವಕಾಶವಿರುತ್ತದೆ. ಭಜನಾ ಪರಿಕರಗಳೊಂದಿಗೆ (ವಾದ್ಯ) ತಂಡ ಇರಬೇಕು. ವಿಜೇತರಾದ Sri Skethra Adichunchanagiri ತಂಡಕ್ಕೆ ಪ್ರಥಮ ಬಹುಮಾನ 10ಸಾವಿರ, ದ್ವಿತೀಯ ಬಹುಮಾನ 7 ಸಾವಿರ, ತೃತೀಯ ಬಹುಮಾನ 5 ಸಾವಿರ ರೂ. ಹಾಗೂ ಸಮಾಧಾನಕರ ಬಹುಮಾನ ನೀಡಲಾಗುವುದು. ಹೆಚ್ಚಿನ ಮಾಹಿತಿಗಾಗಿ 9945910985, 9448124141, 7760246607, 8553515798ಗೆ ಸಂಪರ್ಕಿಸಬಹುದು ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ತಾತ್ಕಾಲಿಕ ನೇರ ನೇಮಕಾತಿ ಮೂಲಕಖಾಯಂ ಶಿಕ್ಷಕರ ನೇಮಕಾತಿವರೆಗೆ ಅತಿಥಿ ಶಿಕ್ಷಕರ ನೇಮಕ

Shimoga News 2026-27ನೇ ಶೈಕ್ಷಣಿಕ ಸಾಲಿಗೆ ರಾಜ್ಯದ ಸರ್ಕಾರಿ ಪ್ರಾಥಮಿಕ ಮತ್ತು...

Klive Special Article ನೇಪಾಳದಲ್ಲಿ ಶೃಂಗೇರಿ ಜಗದ್ಗುರುಗಳು.

ವಿಶೇಷ ವರದಿ: ಪ್ರಭಾಕರ ಕಾರಂತ Klive Special Article ಜಗದ್ಗುರು ಶ್ರೀ ವಿಧುಶೇಖರ ಭಾರತೀ...

Eshwara Khandre ಶ್ರಾವ್ಯಾ ಸಾಗರ್ ನಿರ್ಮಾಣದ ಸಾಕ್ಷ್ಯಚಿತ್ರಕ್ಕೆ ಜೀವವೈವಿಧ್ಯ ಪ್ರಶಸ್ತಿ.

Eshwara Khandre ಕರ್ನಾಟಕ ಸರ್ಕಾರದ ಜೀವವೈವಿದ್ಯ ಮಂಡಳಿ ಕೊಡಮಾಡುವ ೨೦೨೫-೨೬ನೇ ಸಾಲಿನ...