Monday, February 2, 2026
Monday, February 2, 2026

Agriculture News ರೈತರಿಗೆ ಮೇವು ಬೆಳೆಗಳ ತರಬೇತಿ ಶಿಬಿರ

Date:

Agriculture News ಕರ್ನಾಟಕ ಪಶುವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಬೀದರ, ಪಶುವೈದ್ಯಕೀಯ ಮಹಾವಿದ್ಯಾಲಯ, ಶಿವಮೊಗ್ಗ ಸಹಯೋಗದೊಂದಿಗೆ ಜ.10 ಮತ್ತು 11 ರಂದು ನಗರದ ವಿನೋಬನಗರದಲ್ಲಿರುವ ಪಶುವೈದ್ಯಕೀಯ ಮಹಾವಿದ್ಯಾಲಯದಲ್ಲಿ ರೈತರಿಗೆ ಮೇವು ಬೆಳೆಗಳ ಕುರಿತು ತರಬೇತಿಯನ್ನು ಆಯೋಜಿಸಲಾಗಿದೆ.

ತರಬೇತಿ ಕಾರ್ಯಕ್ರಮದಲ್ಲಿ ಮಲೆನಾಡು ಗಿಡ್ಡತಳಿ ಹೊಂದಿರುವ ಸಣ್ಣ ಹಿಡುವಳಿದಾರಿಗೆ ಹಸಿರು ಮೇವಿನ ತಳಿಗಳ ಪ್ರದರ್ಶನ ಹಾಗೂ ಮೇವಿನ ಬೆಳೆಗಳ ಬೇಸಾಯ ಕ್ರಮಗಳು, ಮೇವು ಬೀಜಗಳ ಸಂಸ್ಕರಣೆ ಹಾಗೂ ಮೇವಿನ ತಳಿಗಳ ಪಸರಣೆ (ಪ್ರಾಯೋಗಿಕ ತರಬೇತಿ), ಹುಲ್ಲುಗಾವಲು ನಿರ್ವಹಣೆಯ ಅಗತ್ಯತೆಯ ಕುರಿತಾದ ವಿವಿಧ ವಿಷಯಗಳು ಒಳಗೊಂಡಿರುತ್ತದೆ. ಮಲೆನಾಡು ಗಿಡ್ಡ ತಳಿಯ ಹಾಲು, ಸಗಣಿ ಮತ್ತು ಗಂಜಳದಿಂದ ತಯಾರಿಸಲಾದ ವಿವಿಧ ಉತ್ಪನ್ನಗಳ ಪ್ರದರ್ಶನವನ್ನು ಏರ್ಪಡಿಸಲಾಗಿದೆ.

Agriculture News ಈ ತರಬೇತಿ ಕಾರ್ಯಕ್ರಮದಲ್ಲಿ ಭಾಗವಹಿಸಲು ಆಸಕ್ತಿಯುಳ್ಳವರು ತಮ್ಮ ಹೆಸರನ್ನು ಡಾ. ಹರೀಶ್ ಎಂ.-9470747820 ಹಾಗೂ ಡಾ. ವೆಂಕಟೇಶ್ -9482373685 ಮೊಬೈಲ್ ನಂ.ಗಳಿಗೆ ಎಸ್.ಎಂ.ಎಸ್./ವಾಟ್ಸ್‍ಪ್ ಮೂಲಕ ಅಥವಾ ರಾ.ಕೃ.ವಿಕಾಸ ಯೋಜನಾ ಸಂಯೋಜಕರು, ಪ್ರಾಣಿ ಅನುವಂಶೀಯತೆ ಹಾಗೂ ತಳಿಶಾಸ್ತ್ರ ವಿಭಾಗ, ಪಶುವೈದ್ಯಕೀಯ ಮಹಾವಿದ್ಯಾಲಯ, ವಿನೋಬನಗರ, ಶಿವಮೊಗ್ಗ ಇಲ್ಲಿ ನೇರ ಸಂಪರ್ಕ ಮಾಡಿ ನೊಂದಾಯಿಸಿಕೊಳ್ಳುವಂತೆ ವಿಭಾಗದ ಸಹ ಪ್ರಾಧ್ಯಾಪಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...