Sunday, August 2, 2026
Sunday, August 2, 2026

Bank and Insurance Company ಖಾಸಗಿ ವಿಮಾ ಕಂಪನಿ ವಿರುದ್ಧ ವ್ಯಾಜ್ಯ ಗೆದ್ದ ಹೊನ್ನೇಕೆರೆಯ ಪೂರ್ವಾನಾಯ್ಕ್

Date:

Bank and Insurance Company ಬ್ಯಾಂಕು ಮತ್ತು ಇನ್ಶೂರೆನ್ಸ್ ಕಂಪನಿ ವಿರುದ್ದ ಸೇವಾನ್ಯೂನ್ಯತೆ ಕುರಿತು ದಾಖಲಿಸಿದ್ದ ಪ್ರಕರಣದಲ್ಲಿ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಅಧ್ಯಕ್ಷರ ಪೀಠವು ಅರ್ಜಿದಾರರಿಗೆ ಪರಿಹಾರ ಒದಗಿಸುವಂತೆ ಆದೇಶಿಸಿದೆ.
ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ಹೊನ್ನೇಕೆರೆ ಗ್ರಾಮದ ಪುರ್ವಾನಾಯ್ಕ್ ಎಂಬುವವರು 1ನೇ ಎದುರುದಾರರಾದ ಬ್ಯಾಂಕ್ ಆಫ್ ಬರೋಡ ತೀರ್ಥಹಳ್ಳಿ ಮತ್ತು 2ನೇ ಎದುರುದಾರರಾದ ಟಾಟಾ ಎ.ಐ.ಜಿ ಜನರಲ್ ಇನ್ಸೂರೆನ್ಸ್ ಕಂಪನಿ ಲಿ ಎಂಬುವವರ ವಿರುದ್ಧ ಸೇವಾನ್ಯೂನ್ಯತೆ ಕುರಿತು ಆಪಾದಿಸಿ ಪ್ರಕರಣ ದಾಖಲಿಸಿದ್ದರು.

ಅರ್ಜಿದಾರರು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ಹೊನ್ನೇಕೆರೆಯಲ್ಲಿ 2 ಎಕರೆ ಜಮೀನನ್ನು ಹೊಂದಿದ್ದು, 2017 ರಲ್ಲಿ ಬ್ಯಾಂಕ್ ಆಫ್ ಬರೋಡದವರಿಂದ ಸಾಲ ಪಡೆದು ಇಲ್ಲಿ ಒಂದು ಕಟ್ಟಡವನ್ನು ನಿರ್ಮಿಸಿರುತ್ತಾರೆ. ಈ ಕಟ್ಟಡಕ್ಕೆ 2ನೇ ಎದುರುದಾರರಾದ ವಿಮಾ ಕಂಪನಿಯವರಿಂದ ದಿನಾಂಕ:22.03.2021 ರಲ್ಲಿ ಪ್ರಿಮಿಯಮ್ ಮೊತ್ತವನ್ನು ಪಾವತಿಸಿ ಪಾಲಿಸಿಯನ್ನು ಕೂಡ ಪಡೆದಿದ್ದು ದಿ: 28.02.2022 ರಂದು ಈ ಕಟ್ಟಡವು ಗುಡುಗು ಮತ್ತು ಸಿಡಿಲಿನ ಹೊಡೆತದಿಂದಾಗಿ ಹಾನಿಗೊಳಗಾಗಿರುತ್ತದೆ.
ಅರ್ಜಿದಾರರು 1 ಮತ್ತು 2ನೇ ಎದುರುದಾರರನ್ನು ಸಂಪರ್ಕಿಸಿ ಕಟ್ಟಡಕ್ಕೆ ಉಂಟಾದ ಹಾನಿಗೆ ಸಂಬಂಧಿಸಿದಂತೆ, ಇಂಜಿನಿಯರ್ ನೀಡಿರುವ ಅಂದಾಜು ಪಟ್ಟಿ ಪ್ರಕಾರ ರೂ.18,15,000/-ಗಳನ್ನು ವಿಮಾ ಪರಿಹಾರವಾಗಿ ಪಾವತಿಸುವಂತೆ ಕೋರಿರುತ್ತಾರೆ. ಆದರೆ 2ನೇ ಎದುರುದಾರರು ವಿಮಾ ಕಂಪನಿಯವರು ಈ ಕಟ್ಟಡವನ್ನು ಫಿರ್ಯಾದಿದಾರರು ಕೋಳಿ ಸಾಕಾಣಿಕೆಗೆ ಮತ್ತು ಆಹಾರ ಸಂಗ್ರಹಣೆಗೆ ಬಳಸಿದ್ದರಿಂದ ಮತ್ತು ಆ ರೀತಿಯ ಕಟ್ಟಡದ ಬಳಕೆಯು ವಿಮಾ ಪಾಲಿಸಿಯ ಷರತ್ತು ಮತ್ತು ನಿಬಂಧನೆಗಳ ಉಲ್ಲಂಘನೆಯಾಗಿರುವುದರಿಂದ ವಿಮಾ ಪರಿಹಾರವನ್ನು ನೀಡಲಾಗುವುದಿಲ್ಲ ಎಂದು ಅರ್ಜಿಯನ್ನು ತಿರಸ್ಕರಿಸಿರುತ್ತಾರೆ.

Bank and Insurance Company ಪ್ರಕರಣದ ಅಂಶಗಳು, ಎದುರುದಾರರ ಹೇಳಿಕೆಗಳು ಉಭಯ ಪಕ್ಷೇತರರು ಹಾಜರುಪಡಿಸಿದ ಎಲ್ಲಾ ಸೂಕ್ತ ದಾಖಲೆಗಳನ್ನು ಆಯೋಗವು ಕುಲಂಕುಶವಾಗಿ ಪರಿಶೀಲಿಸಿ 1ನೇ ಎದುರುದಾರರು ಫರ್ಯಾದಿದಾರರು ನಿರ್ಮಿಸಿರುವ ಕಟ್ಟಡಕ್ಕೆ ಆರ್ಥಿಕ ಸಹಾಯವನ್ನು ಮಾತ್ರ ಮಾಡಿದವರಾಗಿದ್ದು, 2ನೇ ಎದುರುದಾರರಾದ ವಿಮಾ ಕಂಪನಿಯವರು ಈ ಕಟ್ಟಡಕ್ಕೆ ವಿಮಾ ಪಾಲಿಸಿಯನ್ನು ನೀಡಿದವರಾಗಿರುವುದರಿಂದ, ಕಟ್ಟಡದ ಹಾನಿಗೆ ಸಂಬಂಧಿಸಿದಂತೆ ರೂ.18,15,000/-ಗಳ ವಿಮಾ ಪರಿಹಾರ ಮೊತ್ತವನ್ನು ಪಾವತಿಸಲು ಬಾಧ್ಯರಾಗಿರುತ್ತಾರೆ ಎಂದು ತೀರ್ಮಾನಿಸಿರುತ್ತದೆ. ಹಾಗೂ ವಿಮಾ ಕಂಪನಿಯವರು ಕೇವಲ ತಾಂತ್ರಿಕ ಅಂಶಗಳ ಆಧಾರದ ಮೇಲೆ ವಿಮಾ ಪರಿಹಾರವನ್ನು ನಿರಾಕರಿಸುವಂತಿಲ್ಲವೆಂದು ಆದೇಶಿಸಿ ಪ್ರಕರಣವನ್ನು ಭಾಗಶಃ ಪುರಸ್ಕರಿಸಿರುತ್ತದೆ.
ವಿಮಾ ಕಂಪನಿಯವರು ಫಿರ್ಯಾದುದಾರರಿಗೆ ವಿಮಾ ಪರಿಹಾರ ರೂ.18,15,000/-ಗಳನ್ನು ವಾರ್ಷಿಕ ಶೇ.6% ಬಡ್ಡಿಯೊಂದಿಗೆ ಮರು ಪಾವತಿಸಬೇಕೆಂದು ಮತ್ತು ರೂ.5,000/-ಗಳನ್ನು ಮಾನಸಿಕ ಹಾನಿಗೆ ಸಂಬಂಧಿಸಿದಂತೆ ಹಾಗೂ ರೂ.10,000/-ಗಳನ್ನು ವ್ಯಾಜ್ಯದ ಖರ್ಚು ವೆಚ್ಚಗಳ ಬಾಬ್ತನ್ನು ಈ ಆದೇಶವಾದ 45 ದಿನದೊಳಗಾಗಿ ಪಾವತಿಸಬೇಕೆಂದು ನಿರ್ದೇಶಿಸಿ, ದಿನಾಂಕ:01.01.2024 ರಂದು ಶಿವಮೊಗ್ಗ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಅಧ್ಯಕ್ಷರಾದ ಟಿ. ಶಿವಣ್ಣ, ಮಹಿಳಾ ಸದಸ್ಯೆ ಸವಿತಾ ಬಿ. ಪಟ್ಟಣಶೆಟ್ಟಿ ಮತ್ತು ಸದಸ್ಯ ಬಿ.ಡಿ ಯೋಗಾನಂದ ಭಾಂಡ್ಯ ಇವರ ಪೀಠವು ಆದೇಶಿಸಿರುತ್ತದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ₹ 6.400 ಕೋಟಿ ವೆಚ್ಚದ ಶಿವಮೊಗ್ಗ- ತುಮಕೂರು ಚತುಷ್ಪಥ ರಸ್ತೆ ಮುಂದಿನ ಮಾರ್ಚ್ ಗೆ ಸಿದ್ಧ- ಬಿ.ವೈ.ರಾಘವೇಂದ್ರ

B.Y. Raghavendra ಮಲೆನಾಡು ಹಾಗೂ ರಾಜಧಾನಿ ಬೆಂಗಳೂರು ನಡುವಿನ ಸಂಪರ್ಕವನ್ನು ಕ್ರಾಂತಿಕಾರಕವಾಗಿ...

S. N. Channabasappa ಬಡಾವಣೆಗಳಿಗೆ ಮೂಲಭೂತ ಸೌಕರ್ಯ ಒದಗಿಸುವುದು ನಮ್ಮ ಮುಖ್ಯ ಕರ್ತವ್ಯ- ಎಸ್.ಎನ್.ಚನ್ನಬಸಪ್ಪ

S. N. Channabasappa ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಒಳಪಡುವ...

Rotary Club of Shivamogga ಮಕ್ಕಳಲ್ಲಿ ರೋಟರಿ ಸಂಸ್ಥೆ ನಾಯಕತ್ವ ಗುಣಗಳನ್ನ ಬೆಳೆಸುತ್ತದೆ- ಡಿ.ಕೆ.ನರಹರಿ

Rotary Club of Shivamogga ರೋಟರಿ ಸಂಸ್ಥೆಯು ಮಕ್ಕಳಿಗೆ ಶಾಲಾ ಹಂತದಲ್ಲಿಯೇ...

B.Y. Raghavendra ಹವಾಮಾನ ಆಧಾರಿತ ಬೆಳೆವಿಮೆ: ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ವಿಸ್ತರಿಸಿ- ಸಂಸದ ಬಿ.ವೈ‌.ರಾಘವೇಂದ್ರ

B.Y. Raghavendra ಮುಂಗಾರು ಹಂಗಾಮಿನಲ್ಲಿ ರಾಜ್ಯಾದ್ಯಂತ ವಾಡಿಕೆಗಿಂತ ಶೇ.34 ರಷ್ಟು ಮಳೆ...