Tuesday, December 16, 2025
Tuesday, December 16, 2025

Bhadra Jaljeevan Yojana ಭದ್ರಾ ಜಲಜೀವನ್ ಯೋಜನೆ ಆರಂಭಕ್ಕೆ ಗುದ್ದಲಿಪೂಜೆ

Date:

Bhadra Jaljeevan Yojana ಚಿಕ್ಕಮಗಳೂರು, ತಾಲ್ಲೂಕಿನ ಮಾಗಡಿ-ಕೈಮರ ಹಾಗೂ ರಾಮೇದೇವರಹಳ್ಳಿಯ ಗ್ರಾಮ ಸ್ಥರಿಗೆ ಭದ್ರಾ ಜಲಜೀವನ್ ಯೋಜನೆಯಡಿ 29 ಲಕ್ಷ ರೂ. ಅನುದಾನದಲ್ಲಿ ಮಂಜೂರಾಗಿರುವ ಶುದ್ಧ ಕುಡಿಯುವ ನೀರಿನ ಪೈಪ್‌ಲೈನ್ ಕಾಮಗಾರಿಗೆ ಶಾಸಕಿ ನಯನ ಮೋಟಮ್ಮ ಮಾಗಡಿಯಲ್ಲಿ ಗುರುವಾರ ಗುದ್ದಲಿಪೂಜೆ ನೆರವೇ ರಿಸಿ ಚಾಲನೆ ನೀಡಿದರು.

ಬಳಿಕ ಮಾತನಾಡಿದ ಶಾಸಕರು ಮುಂದಿನ ಮರ‍್ನಾಲ್ಕು ತಿಂಗಳಲ್ಲಿ ಭದ್ರಾ ಜಲಾಶಯದಿಂದ ಗ್ರಾಮಗಳಿಗೆ ಪೈಪ್‌ಲೈನ್ ಮುಖಾಂತರ ನೀರು ಹರಿಸುತ್ತಿರುವ ಹಿನ್ನೆಲೆಯಲ್ಲಿ ಕಾಮಗಾರಿಯನ್ನು ಗುಣಮಟ್ಟದಿಂದ ಕೂಡಿರುವ ಜೊತೆಗೆ ತ್ವರಿತವಾಗಿ ಪೂರೈಸಬೇಕು ಎಂದು ಗುತ್ತಿಗೆದಾರರಿಗೆ ಸೂಚಿಸಿದರು.

ಬಯಲುಸೀಮೆ ಪ್ರದೇಶವಾಗಿರುವ ಈ ಭಾಗದಲ್ಲಿ ಕುಡಿಯುವ ನೀರು ಅತ್ಯಂತ ಮಹತ್ವವನ್ನು ಪಡೆದುಕೊಳ್ಳ ಲಿದೆ. ಆ ನಿಟ್ಟಿನಲ್ಲಿ ಗ್ರಾಮಸ್ಥರು ಕುಡಿಯುವ ನೀರು ಕಾಮಗಾರಿ ಪೂರ್ಣಗೊಂಡ ಬಳಿಕ ಹೆಚ್ಚು ವ್ಯರ್ಥಗೊಳಿಸ ದಂತೆ ಕ್ರಮ ವಹಿಸಬೇಕು ಎಂದು ಮನವಿ ಮಾಡಿದರು.

ಪ್ರಸ್ತುತ ಮಾಗಡಿ ಗ್ರಾಮದಲ್ಲಿ 12 ಎಕರೆ ಸರ್ಕಾರಿ ಜಾಗವಿರುವ ಹಿನ್ನೆಲೆಯಲ್ಲಿ ನಿವೇಶನವನ್ನಾಗಿ ಮಾರ್ಪಾ ಡಿಸಿ ಅರ್ಹ ನಿವೇಶನರಹಿತರಿಗೆ ಹಂಚುವ ಗುರಿ ಹೊಂದಿದ್ದು ಆ ನಿಟ್ಟಿನಲ್ಲಿ ಜಾಗವನ್ನು ಮಟ್ಟಗೊಳಿಸುವ ಕಾರ್ಯ ಕ್ಕೆ ಗುದ್ದಲಿ ಪೂಜೆ ನೆರವೇರಿಸಿದ್ದು ನಿವೇಶನ ಹಂಚುವ ಸಂಬoಧ ಜಾಗಕ್ಕೆ ಶಾಸಕರ ಅನುದಾನದಲ್ಲಿ 5 ಲಕ್ಷ ರೂ. ಗಳನ್ನು ಮೀಸಲಿಡಲಾಗಿದೆ ಎಂದು ತಿಳಿಸಿದರು.

Bhadra Jaljeevan Yojana ಸಂದರ್ಭದಲ್ಲಿ ಜಿ.ಪಂ. ಮಾಜಿ ಸದಸ್ಯ ಕೆ.ವಿ.ಮಂಜುನಾಥ್, ಮುಗುಳುವಳ್ಳಿ ಗ್ರಾ.ಪಂ. ಅಧ್ಯಕ್ಷೆ ಭಾಗ್ಯ, ಸದಸ್ಯರುಗಳಾದ ಕಲಾವತಿ, ರಘುನಾಥನ್, ಮಲ್ಲೇಶ್, ವನಿತಾ, ಮಾಜಿ ಅಧ್ಯಕ್ಷ ಕೆ.ಎಸ್.ಪ್ರಕಾಶ್, ಕಾಂಗ್ರೆಸ್ ಮು ಖಂಡರುಗಳಾದ ಮುದಪೀರ್, ಎಂ.ವಿಜಯ್‌ಕುಮಾರ್, ಗ್ರಾ.ಪಂ. ಮಾಜಿ ಸದಸ್ಯ ಕೆ.ವಿ.ವಿರೂಪಾಕ್ಷಪ್ಪ, ಗುತ್ತಿಗೆ ದಾರ ರೋಹಿತ್ ಮತ್ತಿತರರು ಹಾಜರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

MESCOM ಡಿಸೆಂಬರ್ 16 & 17 ಶಿವಮೊಗ್ಗದ ರವೀಂದ್ರನಗರಕ್ಕೆ ವಿದ್ಯುತ್ ಸರಬರಾಜು ಇಲ್ಲ, ಮೆಸ್ಕಾಂ ಪ್ರಕಟಣೆ

MESCOM ಶಿವಮೊಗ್ಗ ನಗರ ಉಪವಿಭಾಗ-1, ಘಟಕ-2ರ ವ್ಯಾಪ್ತಿಯ ರವೀಂದ್ರ ನಗರದಲ್ಲಿ ಓವರ್...

Shamanur Shivashankarappa ವಿಧಾನ ಸಭಾ ಕಲಾಪ: ಅಗಲಿದ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪನವರಿಗೆ ಶ್ರದ್ಧಾಂಜಲಿ

Shamanur Shivashankarappa ಎಲ್ಲ ರಾಜಕಾರಣಿಗಳೊಂದಿಗೆ ಆತ್ಮೀಯ ಒಡನಾಟ ಹೊಂದಿದ್ದ ಶಾಮನೂರು ಶಿವಶಂಕರಪ್ಪ...

Dr. G.S. Shivarudrappa ರಾಷ್ಟ್ರಕವಿ ಜಿ.ಎಸ್.ಎಸ್. ರಚಿತ ಕವನಗಳ ಆನ್ ಲೈನ್ ಗಾಯನ ಸ್ಪರ್ಧೆ

Dr. G.S. Shivarudrappa ಶಿವಮೊಗ್ಗದಲ್ಲಿ ರಾಷ್ಟ್ರಕವಿ ಡಾ. ಜಿ.ಎಸ್ . ಶಿವರುದ್ರಪ್ಪ...

ಸಿಗಂದೂರು ಸೇತುವೆ: ಆತ್ಮಹತ್ಯೆಗೆ ಯತ್ನಿಸಿದಾತನ ಜೀವವುಳಿಸಿದ ಇಂಜಿನಿಯರ್ ಮಾತಿನ ಕೌಶಲ

ಮೈಸೂರಿನ ವ್ಯಕ್ತಿಯೊಬ್ಬರು ಸಿಗಂದೂರು ಸೇತುವೆ ಮೇಲೆ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಇಂಜಿನಿಯರ್ ಒಬ್ಬರ...