Thursday, December 18, 2025
Thursday, December 18, 2025

Land record ಒತ್ತುವರಿ ಜಾಗ ಮತ್ತೆ ಸ್ವಾಧೀನಕ್ಕೆ ಪಡೆದ ಕಂಬದಾಳು ಹೊಸೂರು ಪಂಚಾಯಿತಿ

Date:

Land record 

ಭದ್ರಾವತಿ ತಾಲ್ಲೂಕು ಕಸಬಾ ಹೋಬಳಿ ಹುಣಸೆಘಟ್ಟ ಗ್ರಾಮದ ಸರ್ವೇ ನಂ.42ರಲ್ಲಿನ ಮುಪ್ಪತ್ತು ಸರ್ಕಾರಿ ಜಾಗವನ್ನು ಒತ್ತುವರಿ ಮಾಡಿಕೊಂಡಿದ್ದು, ಜಿಲ್ಲಾಧಿಕಾರಿಗಳು ತೆರವಿಗೆ ಸೂಚಿಸಿದ ಮೂರು ದಿನಗಳ ಒಳಗೆ ಸರ್ಕಾರಿ ಜಾಗ 2 ಎಕರೆ ಭೂಮಿಯಲ್ಲಿ ಬೆಳೆದಿದ್ದ ಅಡಿಕೆ ಸಸಿಗಳನ್ನು ತೆರವುಗೊಳಿಸಿ ಸರ್ಕಾರಿ ಜಾಗವನ್ನು ಕಂಬದಾಳು ಹೊಸೂರು ಗ್ರಾಮ ಪಂಚಾಯ್ತಿ ತನ್ನ ತೆಕ್ಕೆಗೆ ತೆಗೆದುಕೊಳ್ಳುವಲ್ಲಿ ಯಶಸ್ವಿಯಾಗಿದೆ.
ಕಳೆದ 18-12-2023
ರಂದು ಕಾನೂನು ಅಭಿಪ್ರಾಯ ಪಡೆದು ತಹಶೀಲ್ದಾರ್ ಭದ್ರಾವತಿ ಇವರ ಕಛೇರಿ ಪತ್ರದ ಸಂಖ್ಯೆ 54/2023
ರನ್ವಯ ಕ್ರಮಕೈಗೊಳ್ಳಲು ಜಿಲ್ಲಾಧಿಕಾರಿಗಳ ಕಾನೂನು ಸಲಹೆಗಾರರು ಸೂಚನೆ ನೀಡಿದ್ದರು. ಸರ್ಕಾರದ ಕಾರ್ಯದರ್ಶಿ, ಕಂದಾಯ ಇಲಾಖೆ ಅವರು 10-2-2010 ರಲ್ಲಿ ಹೊರಡಿಸಿರುವ ಸುತ್ತೋಲೆ ಕ್ರಮಸಂಖ್ಯೆ ಕೆಪಿಎಲ್‌ಸಿ/ಎಲ್‌ಎನ್‌ಡ 120 ರಂತೆ ಈ ಭೂಮಿಯ ತೆರವಿಗೆ ಗಮನ ಹರಿಸುವಂತೆ ಸೂಚಿಸಿದ್ದರು

ತದನಂತರ ಭದ್ರಾವತಿ ತಹಶೀಲ್ದಾರರು 28-12-2023 ರಂದು ಭೂ ದಾಖಲೆಗಳ ಸಹಾಯಕ ನಿರ್ದೇಶಕರಿಗೆ ಹುಣಸೆಘಟ್ಟೆ ಗ್ರಾಮದ ಸರ್ವೆ ನಂ.42ಕ್ಕೆ ಸಂಬಂಧಿಸಿದ ಒತ್ತುವರಿ ಜಮೀನನ್ನು ಅಳತೆ ಕಾರ್ಯ ಪೂರೈಸಲು 5-01-2024ರಂದು ಬೆಳಗ್ಗೆ 10ಗಂಟೆಗೆ ಮಂಜುನಾಥ್ ಎನ್ ಭೂಮಾಪಕರಿಗೆ ನಿಯೋಜಿಸಿ ಜಂಟಿ ಅಳತೆ ಪೂರೈಸಿ ಒತ್ತುವರಿಗೆ ತೆರವಿಗೆ ಆದೇಶಿಸಿದ್ದರು.

ಅಂತೆಯೇ ಮೊನ್ನೆ ಅಂದರೆ ಜ.6ರ ಶನಿವಾರ ಈ ಭೂಮಿಯಲ್ಲಿ ಅಳತೆ ಪೂರೈಸಿ ಇದು ಸರ್ಕಾರಿ ಜಾಗವಾಗಿರುವ ಹಿನ್ನೆಲೆಯಲ್ಲಿ ಇಲ್ಲಿ ಅಕ್ರಮವಾಗಿ ಅಡಿಕೆ ಸಸಿಗಳನ್ನು ಹಾಕಿದ್ದ ವ್ಯಕ್ತಿಗೆ ಸೂಚನೆ ನೀಡಿ ಅಲ್ಲಿ ಡಾ.ರಾಮಕೃಷ್ಣ ಎಂಬುವವರು ಬೆಳೆದಿದ್ದ ಸುಮಾರು ಒಂದು ಸಾವಿರಕ್ಕೂ ಹೆಚ್ಚು ಅಡಿಕೆ ಗಿಡಗಳನ್ನು ತೆರವುಗೊಳಿಸಲಾಗಿದೆ.

Land record ಸುತ್ತಲೂ ಟ್ರಂಚಿಂಗ್ ಮಾಡಲಾಗಿದ್ದು, ಜೆಸಿಬಿ ಮೂಲಕ ಇಡೀ ಸರ್ಕಾರಿ ಜಾಗವನ್ನು ತನ್ನ ತೆಕ್ಕೆಗೆ ಪಡೆಯುವಲ್ಲಿ ಯಶಸ್ವಿಯಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Interact Club ಮಕ್ಕಳಿಗೆ ಉತ್ತಮ ಶಿಕ್ಷಣ ಮತ್ತು ಭವಿಷ್ಯ ರೂಪಿಸುವಲ್ಲಿ ಪೋಷಕರ ಪಾತ್ರ ಬಹಳ ಮುಖ್ಯ – ರಮೇಶ್

ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ ಬೆಳೆಸುವಲ್ಲಿ ಇಂಟರಾಕ್ಟ್ ಕ್ಲಬ್ ಸಹಕಾರಿ ಎಂದು ಕ್ಷೇತ್ರ...

Veereshwar Punyashram Samskruth School ವೀರೇಶ್ವರ ಪುಣ್ಯಾಶ್ರಮದಲ್ಲಿ ಗಾಯಕ ನಿಜಗುಣಿ ಮಂಗಿ ಅವರ ಹಿಂದೂಸ್ತಾನಿ ಗಾಯನ

Veereshwar Punyashram Samskruth School ಸಾಗರ ರಸ್ತೆಯ ವೀರೇಶ್ವರ ಪುಣ್ಯಾಶ್ರಮ ಸಂಸ್ಕತ...

Rotary Shivamogga ರೇಬೀಸ್ ಮಾರಣಾಂತಿಕ‌ ಕಾಯಿಲೆಯಾಗುವ ಸಾಧ್ಯತೆ ಇದೆ, ನಿರ್ಲಕ್ಷ್ಯ ಬೇಡ- ಡಾ.ಅರವಿಂದ್

Rotary Shivamogga ರೇಬೀಸ್ ಮಾರಣಾಂತಿಕ ಕಾಯಿಲೆ ಆಗುವ ಸಾಧ್ಯತೆ ಇರುತ್ತದೆ. ಆದ್ದರಿಂದ...