Sunday, August 2, 2026
Sunday, August 2, 2026

Congress guarantee schemes ಗ್ಯಾರಂಟಿಗಳ ಪ್ರತೀ ಪೈಸೆಯೂ ನಿಮ್ಮ‌ಬದುಕಿಗೆ ಸದುಪಯೋಗವಾಗಬೇಕು- ಸಿದ್ಧರಾಮಯ್ಯ

Date:

Congress guarantee schemes  ನುಡಿದಂತೆ ನಡೆಯುತ್ತೇವೆ ಎನ್ನುವುದು ನಾವು ಜನತೆಗೆ ನೀಡಿರುವ ವಚನ.
ನಾವು ಉಳಿದವರಂತೆ ವಚನ ಭ್ರಷ್ಟರಲ್ಲ,
ವಚನ ಪಾಲಕರು.
ನಮ್ಮ ಪಕ್ಷದ ಚುನಾವಣಾ ಪ್ರಣಾಳಿಕೆಯಲ್ಲಿ ನೀಡಿರುವ ಭರವಸೆಯಂತೆ ಐದಕ್ಕೆ ಐದೂ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದ್ದೇವೆ ಎಂದು ಮುಖ್ಯ ಮಂತ್ರಿ ಸಿದ್ದ ರಾಮಯ್ಯ ಅವರು ಹೇಳಿದ್ದಾರೆ.

ಜನರಿಗೆ ಕೊಟ್ಟ ಮಾತು ಉಳಿಸಿಕೊಳ್ಳುವುದು ಜನರಿಂದ ಆಯ್ಕೆಯಾದ ಒಂದು ಸರ್ಕಾರದ ಕರ್ತವ್ಯ,
ಈ ಯೋಜನೆಗಳು ದುರುಪಯೋಗ ಆಗದಂತೆ ಪೂರ್ಣ ಪ್ರಮಾಣದಲ್ಲಿ ಸದ್ಬಳಕೆ ಮಾಡಿಕೊಳ್ಳಬೇಕಿರುವುದು ನಿಮ್ಮೆಲ್ಲರ ಕರ್ತವ್ಯ.
ನಿಮ್ಮದೇ ತೆರಿಗೆ ಹಣ,
ನಿಮ್ಮದೇ ಕಲ್ಯಾಣ ಕಾರ್ಯಕ್ರಮಗಳು,
ಇವು ಉಚಿತ ಯೋಜನೆಗಳು ಎಂಬ ತಪ್ಪು ಕಲ್ಪನೆ ಬೇಡ ಎಂದು ಹೇಳಿದ್ದಾರೆ.

Congress guarantee schemes  ಗ್ಯಾರಂಟಿಗಳ ಪ್ರತಿ ಪೈಸೆಯೂ
ನಿಮ್ಮ ಬದುಕಿಗೆ ಸದುಪಯೋಗವಾಗಬೇಕು.
ಚುನಾವಣಾ ಪ್ರಣಾಳಿಕೆಯನ್ನು
ಚುನಾವಣಾ ಪ್ರಚಾರಕ್ಕೆ ಸೀಮಿತಗೊಳಿಸದೆ ಅದನ್ನು ಕಾರ್ಯರೂಪಕ್ಕೆ ತಂದು,
ಜನರ ಬದುಕಲ್ಲಿ ಅವುಗಳ ಪ್ರತಿಫಲ ಕಾಣಬೇಕು ಎಂಬುದು ಆಶಯ ನಮ್ಮದು.
ನಮ್ಮ ಸರ್ಕಾರದ ಸದಾಶಯಕ್ಕೆ ತಮ್ಮೆಲ್ಲರ ಬೆಂಬಲವಿರಲಿ.
ಗ್ಯಾರಂಟಿಗಳ ಗೆಲುವು,
ಕರ್ನಾಟಕದ ಗೆಲುವು,
ನಿಮ್ಮೆಲ್ಲರ ಗೆಲುವು ಎಂದು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ತೀರ್ಥಹಳ್ಳಿಯಲ್ಲಿ ಮಳೆಗೆ ಶೆಡ್ ಕುಸಿತ: ಮೂವರ ಸಾವು.ಡಿಸಿಎಂ. ಡಾ.ಜಿ.ಪರಮೇಶ್ವರ ಸಂತಾಪ.

Breaking News ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಇಂದಿರಾನಗರದಲ್ಲಿ ಭಾರೀ ಮಳೆಗೆ ಗುಡ್ಡ...

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...