Wednesday, September 9, 2026
Wednesday, September 9, 2026

ಕೈಗಾರಿಕೆಗಳಿಗೆ ನೂತನ ಆಸ್ತಿ ತೆರಿಗೆ ಮಿತಿ : ಕರಡು ಸಿದ್ಧ

Date:

ರಾಜ್ಯ ಸರ್ಕಾರ ಕೈಗಾರಿಕೆಗಳನ್ನು ಪ್ರತ್ಯೇಕಗೊಳಿಸಿ ನೂತನ ಆಸ್ತಿ ತೆರಿಗೆ ಮಿತಿ ವಿಧಿಸುವ ವಿಧೇಯಕಕ್ಕೆ ಕರಡು ಸಿದ್ಧಪಡಿಸುತ್ತಿದೆ.

ಪ್ರಸ್ತುತ ರಾಜ್ಯ ಸರ್ಕಾರ ವಾಣಿಜ್ಯ ಕಟ್ಟಡಗಳಿಗೆ ವಿಧಿಸುತ್ತಿರುವ ತೆರಿಗೆಯ ಶೇ.70 ರಷ್ಟು ತೆರಿಗೆಯನ್ನು ಕೈಗಾರಿಕೆ ಮಿತಿಗೊಳಿಸುವ ಹೊಸ ವಿಧೇಯಕಕ್ಕೆ ಬೆಳಗಾವಿ ಅಧಿವೇಶನದಲ್ಲಿ ಅನುಮೋದನೆ ನಂತರ ರಾಜ್ಯದಲ್ಲಿ ಜಾರಿಗೆ ಬರಲಿದೆ.

ಸಣ್ಣ ಮತ್ತು ಮಧ್ಯಮ ವರ್ಗದ ಕೈಗಾರಿಕೆಗಳ ಉತ್ತೇಜನ ದೃಷ್ಟಿಯಿಂದಾಗಿ ನೂತನ ಆಸ್ತಿ ತೆರಿಗೆ ಮಿತಿ ವಿಧಿಸುವ ವಿಧೇಯಕ ಮಂಡಿಸಲಾಗುತ್ತಿದೆ.

ಈ ಕುರಿತಂತೆ “ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ಅವರು ಕೋವಿಡ್ ನಂತರ ಕೈಗಾರಿಕಾ ಉತ್ತೇಜನಕ್ಕೆ ಹೊಸ ಕಾನೂನು ಅಗತ್ಯವಿತ್ತು. ಹೀಗಾಗಿ ಆಸ್ತಿ ತೆರಿಗೆ ಸಂಬಂಧ ವಿಧೇಯಕ ಮಂಡನೆ ಆಗಲಿದೆ” ಎಂದು ತಿಳಿಸಿದ್ದಾರೆ.

ಕರ್ನಾಟಕ ಪೌರಸಭೆಗಳ ಅಧಿನಿಯಮ 1964 ರ ಕಲಂ 101(2)ರ ಕಾಯ್ದೆಗೆ ತಿದ್ದುಪಡಿ ತಂದು ನೂತನ ತೆರಿಗೆ ನೀತಿಯನ್ನು ಸೇರ್ಪಡಿಸಲು ಸಂಪುಟ ಒಪ್ಪಿಗೆ ನೀಡಿದೆ. ಕೈಗಾರಿಕೆಗೆ ಬಳಸುತ್ತಿರುವ ಮತ್ತು ಬಳಸುವ ಉದ್ದೇಶ ಹೊಂದಿರುವ ಸರ್ಕಾರಿ ಕಟ್ಟಡಗಳಿಗೂ ಮೊದಲು ನೀಡಿದ ವಿನಾಯಿತಿಗಳನ್ನು ತೆಗೆದುಹಾಕಲು ಪ್ರಸ್ತಾಪಿಸಲಾಗಿದೆ.

ಬಿಬಿಎಂಪಿ ಹೊರತುಪಡಿಸಿ ಮಹಾನಗರ ಪಾಲಿಕೆ/ ನಗರಸಭೆ /ಪುರಸಭೆಗಳು ಸೇರಿದಂತೆ ಎಲ್ಲಾ ನಗರಗಳಿಗೆ ಈ ಹೊಸ ಕಾನೂನು ಅನ್ವಯಿಸಲಿದೆ.

Book Your Advertisement Now.

Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa ಸರ್ಕಾರದ ಸೇವೆಗಳನ್ನ ಜನರ ಮನೆಬಾಗಿಲಿಗೆ ತಲುಪಿಸುವ ಉದ್ದೇಶದಿಂದ “ಪ್ರಜಾಸೇವೆ “ಜಾರಿಗೆ: ಮಧು ಬಂಗಾರಪ್ಪ

Madhu Bangarappa ಜನಸಾಮಾನ್ಯರ ದಿನನಿತ್ಯದ ಸಮಸ್ಯೆ-ಸವಾಲುಗಳಿಗೆ, ದುಃಖ ದುಮ್ಮಾನಗಳಿಗೆ ತ್ವರಿತವಾಗಿ ಸ್ಪಂದಿಸಿ,...

S.N. Channabasappa ಸಮಾಜಮುಖಿಯಾಗಿ ಕ್ರಿಯಾಶೀಲವಾಗಿರುವ ಆರ್ಯವೈಶ್ಯ ಶ್ರೀರಾಮಸಹಕಾರ ಸಂಘದ ಕಾರ್ಯ ಶ್ಲಾಘನೀಯ : ಎಸ್.ಎನ್.ಚನ್ನಬಸಪ್ಪ

S.N. Channabasappa "ಸಮಾಜದ ಉದಯೋನ್ಮುಖ ಯುವ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸುವುದು ಹಾಗೂ...

B.Y. Raghavendra ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ವಿಳಂಬಕ್ಕೆ ಸಂಸದ ಬಿ.ವೈ. ರಾಘವೇಂದ್ರ ಅಸಮಾಧಾನ

B.Y. Raghavendra ಶಿವಮೊಗ್ಗ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ನಡೆಯುತ್ತಿರುವ ವಿವಿಧ ರಾಷ್ಟ್ರೀಯ ಹೆದ್ದಾರಿ...