Monday, March 23, 2026
Monday, March 23, 2026

Scheduled Caste Community ಪರಿಶಿಷ್ಟ ಸಮುದಾಯದವರಿಗೆ ನೀರಿನ ತೆರಿಗೆ ವಿಧಿಸದಿರಲು ಮನವಿ

Date:

Scheduled Caste Community ಪರಿಶಿಷ್ಟ ಜಾತಿ ಸಮುದಾಯದ ನಿವಾಸಿಗಳಿಗೆ ನೀರಿನ ತೆರಿಗೆ ಕಂದಾಯ ದಲ್ಲಿ ವಿಧಿಸಿರುವ ನೋಟೀಸ್ ಕೂಡಲೇ ರದ್ದುಪಡಿಸಬೇಕು ಎಂದು ಚಿಕ್ಕಮಗಳೂರು ನಗರಸಭಾ ಮಾಜಿ ಅಧ್ಯಕ್ಷರ ನೇತೃತ್ವದಲ್ಲಿ ಸ್ಥಳೀಯ ನಿವಾಸಿಗಳು ಹಾಲಿ ಅಧ್ಯಕ್ಷ ವರಸಿದ್ದಿ ವೇಣುಗೋಪಾಲ್ ಅವರಿಗೆ ಮನವಿ ಸಲ್ಲಿಸಿದರು.

ಈ ಕುರಿತು ಮಾತನಾಡಿದ ಮಾಜಿ ಅಧ್ಯಕ್ಷ ಸೈಯದ್ ಜಮೀಲ್ ಅಹ್ಮದ್ ನೀರಿನ ತೆರಿಗೆ ಸಂಬಂಧ ಪರಿಶಿಷ್ಟ ಜಾತಿ ಜನಾಂಗಕ್ಕೆ 1993 ರ ನಡವಳಿಯಲ್ಲಿ ನೀರಿನ ಸಂಪರ್ಕವನ್ನು ಸಂಪೂರ್ಣ ಉಚಿತವಾಗಿ ಘೋಷಿಸಲಾಗಿತ್ತು.

ಇದೀಗ ನಗರಸಭೆ ಆಡಳಿತ ಮಂಡಳಿ ತೆರಿಗೆ ಕಟ್ಟಬೇಕು ಎಂದು ನೋಟೀಸ್ ನೀಡಿರುವುದು ಸರಿಯಲ್ಲ ಎಂದರು.
ಪ್ರಸ್ತುತ ದಂಟರಮಕ್ಕಿ, ಹಿರೇಮಗಳೂರು ಹಾಗೂ ತಮಿಳುಕಾಲೋನಿ ಬಡಾವಣೆಯಲ್ಲಿ ಅತಿಹೆಚ್ಚು ಸಂಖ್ಯೆ ಯಲ್ಲಿ ಪ.ಜಾತಿ, ಪ.ಪಂಗಡ ಸಮುದಾಯದ ಬಡ ಹಾಗೂ ಹಿಂದುಳಿದ ವರ್ಗಗಳೇ ವಾಸಿಸುತ್ತಿರುವ ಹಿನ್ನೆಲೆ ಯಲ್ಲಿ ನೀರಿನ ಸಂಪರ್ಕವನ್ನು ಉಚಿತವಾಗಿ ಒದಗಿಸಬೇಕೆಂದು ನಡವಳಿಯನ್ನು ಮಾಡಲಾಗಿತ್ತು ಎಂದರು.

Scheduled Caste Community ಒಂದು ವೇಳೆ ನೀರಿನ ತೆರಿಗೆ ಕಂದಾಯವನ್ನು ಪಾವತಿಸಲೇಬೇಕು ಎಂಬುದಾದರೆ ಪ.ಜಾತಿಗೆ ಮೀಸಲಿಟ್ಟಿದ್ದ ಶೇ.18 ಹಣವನ್ನು ಉಪಯೋಗಿಸಿಕೊಂಡು ನೀರಿನ ತೆರಿಗೆಯನ್ನು ರದ್ದುಪಡಿಸಿ ನಿವಾಸಿಗಳಿಗೆ ಅನುಕೂಲ ಮಾಡಿ ಕೊಡಬೇಕು ಎಂದು ಆಗ್ರಹಿಸಿದರು.

ಈ ಸಂದರ್ಭದಲ್ಲಿ ನಗರಸಭಾ ಮಾಜಿ ಅಧ್ಯಕ್ಷ ಮಹಮ್ಮದ್ ಅಕ್ಬರ್, ನಿವಾಸಿಗಳಾದ ಕೆಂಚಯ್ಯ, ಶಾರದಮ್ಮ ಮತ್ತಿತರರು ಹಾಜರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Sagara News ಸಾಗರದಲ್ಲಿ “ಕ್ಯಾಂಪಸ್ ಕಟ್ಟೆ”.ಸಾಧಕಿಯರ ಬಗ್ಗೆ ವಿದ್ಯಾರ್ಥಿನಿಯರಿಂದ ಪರಿಚಯ.

Sagara News ಮಹಿಳಾ ಸಬಲೀಕರಣ ಪ್ರಾಮುಖ್ಯತೆ ಪಡೆಯುತ್ತಿರುವ ಅದೂ ಮಹಿಳಾ ದಿನಾಚರಣೆಯ...

Bakkeshwara Swamy Rathotsava ದಾವಣಗೆರೆ ಹೃದಯಭಾಗದ ರಾಜಬೀದಿಯ ಏಕೈಕವಾದ ಶ್ರೀಬಕ್ಕೇಶ್ವರ ಮಹಾರಥೋತ್ಸವ. ...

Bakkeshwara Swamy Rathotsava ದಾವಣಗೆರೆಯು ಅನಾದಿಕಾಲದಿಂದಲೂ ವ್ಯಾಪಾರೋದ್ಯಮಕ್ಕೆ ಪ್ರಸಿದ್ಧವಾದ ಕೇಂದ್ರವಾಗಿದ್ದು 1801...

KFD ತೀರ್ಥಹಳ್ಳಿ ತಾಲ್ಲೂಕಿನಲ್ಲಿ ಮಂಗನ ಕಾಯಿಲೆಗೆ ಈ ವರ್ಷಎರಡನೇ ಬಲಿ.

KFD ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ತಟ್ಟಿಕೇವಿಯಲ್ಲಿ ಮಂಗನ ಕಾಯಿಲೆಗೆ ಈ...

Cheetah Attack ಮುತ್ತಗಿ ಗ್ರಾಮದ ರೈತನ ಮೇಲೆ ಚಿರತೆ ಹಠಾತ್ ದಾಳಿ. ಮೆಗ್ಗಾನ್ ಆಸ್ಪತ್ರೆಗೆ ರೈತ ದಾಖಲು.

Cheetah Attack ಶಿಕಾರಿಪುರ ತಾಲ್ಲೂಕಿನ ತಡಸನಹಳ್ಳಿ, ಅಡಗಂಟಿ, ಮುತ್ತಗಿ ಗ್ರಾಮದ ರೈತರ...