Tuesday, October 1, 2024
Tuesday, October 1, 2024

Daivajna Credit Friendly Cooperative Society ಚಿಕ್ಕಮಗಳೂರು ದೈವಜ್ಞ ಕ್ರೆಡಿಟ್ ಸೌಹಾರ್ದ ಸಹಕಾರ ಸಂಘದ ಅಧ್ಯಕ್ಷರಾಗಿ ಶಾಲಿನಿ ,ಎ. ರಾಯ್ಕರ್ ಆಯ್ಕೆ

Date:

Daivajna Credit Friendly Cooperative Society ದೈವಜ್ಞ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘದ ನೂತನ ಅಧ್ಯಕ್ಷರಾಗಿ ಶಾಲಿನಿ.ಎ.ರಾಯ್ಕರ್ ಹಾಗೂ ಉಪಾಧ್ಯಕ್ಷರಾಗಿ ಹೆಚ್.ಕೆ.ಸುರೇಶ್ ಅವಿರೋಧಯಾಗಿ ಆಯ್ಕೆಯಾಗಿದ್ದಾರೆ.

ಚಿಕ್ಕಮಗಳೂರಿನ ಸಂಘದ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಕ್ಕೆ ಶಾಲಿನಿ ಮತ್ತು ಸುರೇಶ್ ಹೊರತು ಪಡಿಸಿ ಬರ‍್ಯಾವ ನಾಮಪತ್ರ ಸಲ್ಲಿಕೆಯಾಗದ ಹಿನ್ನೆಲೆಯಲ್ಲಿ ಚುನಾವಣಾಧಿಕಾರಿ ಕೆ.ಸಿ.ವಸಂತ ಶುಕ್ರವಾರ ಸಂಜೆ ಅವಿರೋಧ ಆಯ್ಕೆಯನ್ನು ಘೋಷಿಸಿದರು.

Daivajna Credit Friendly Cooperative Society ಬಳಿಕ ಮಾತನಾಡಿದ ಅಧ್ಯಕ್ಷೆ ಶಾಲಿನಿ.ಎ. ರಾಯ್ಕರ್ ಮುಂಬರುವ ದಿನಗಳಲ್ಲಿ ಸಂಘವು ರಜತ ಮಹೋ ತ್ಸವವನ್ನು ಆಚರಿಸುವ ಹಿನ್ನೆಲೆಯಲ್ಲಿ ನಿರ್ದೇಶಕರು ಹಾಗೂ ಸದಸ್ಯರು ಸಹಕಾರ ಪಡೆದುಕೊಂಡು ಸಂಘವನ್ನು ಆರ್ಥಿಕವಾಗಿ ಸದೃಢಗೊಳಿಸಲು ಮುಂದಾಗಲಿದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ನಿರ್ದೇಶಕರುಗಳಾದ ಸಿ.ಆರ್.ಸುಧೀರ್‌ಕುಮಾರ್, ಕೆ.ವಿ.ಮಹೇಂದ್ರ, ಕೆ.ವಿ.ಆನಂದ್, ಸಿ.ಎಲ್.ಶ್ರೀಕಾಂತ್, ಬಿ.ಜಿ.ಪ್ರಕಾಶ್, ಕೀರ್ತಿ ಸಿ.ಎಂ.ಶೆಟ್, ಯು.ಎಲ್.ಶ್ರೀಧರ್, ತಾರಾಮತಿ ಆರ್.ಶೇಟ್, ದೀಪಾ ಪ್ರಕಾಶ್, ವಿ.ರಮೇಶ್, ಸಲಹೆಗಾರರಾದ ಅಶೋಕ್ ರಾಯ್ಕರ್, ರಮೇಶ್ ಹಾಗೂ ಸಿಬ್ಬಂದಿಗಳು ಹಾಜರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

CM Siddharamaih ಪರಿಹಾರ ರೂಪದಲ್ಲಿ ಪಡೆದಿದ್ದ ನಿವೇಶನಗಳನ್ನ ಪತ್ನಿ ಹಿಂದಿರುಗಿಸಿದ್ದಾರೆ- ಸಿದ್ಧರಾಮಯ್ಯ

CM Siddharamaih ಮೈಸೂರಿನ ಮುಡಾ ಭೂಸ್ವಾಧೀನ ನಡೆಸದೆ ವಶಕ್ಕೆ ಪಡೆದಿದ್ದ...

R. Ashok ಸಿದ್ಧರಾಮಯ್ಯನವರಿಗೆ ತಮ್ಮ ತಪ್ಪಿನ ಅರಿವಾಯಿತಲ್ಲ”-ಆರ್ .ಅಶೋಕ್ ಪ್ರತಿಕ್ರಿಯೆ

R. Ashok ಮೂಡಾ ಹಗರಣದಲ್ಲಿ ಕಾನೂನಿನ ಕುಣಿಕೆ ಬಿಗಿಯಾಗುತ್ತಿದ್ದಂತೆ ಸಿಎಂ ಸಿದ್ಧರಾಮಯ್ಯ...

Shivamogga-Bhadravathi Urban Development Authority ಊರಗಡೂರು ನಿವೇಶನ ಪಡೆಯಲು ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ಮುಂದೂಡಿಕೆ

Shivamogga-Bhadravathi Urban Development Authority ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರವು ಶಿವಮೊಗ್ಗ ನಗರದ...