Saturday, December 6, 2025
Saturday, December 6, 2025

Basavanna ಬಸವಣ್ಣ ರಾಜ್ಯದ ಸಾಂಸ್ಕೃತಿಕ ನಾಯಕ ಘೋಷಣೆ ಬಗ್ಗೆ ಸಂತಸ- ತಾಲ್ಲೂಕು ವೀರಶೈವ ಲಿಂಗಾಯತ ಸಮಾಜ

Date:

Basavanna ಜಗಜ್ಯೋತಿ ಬಸವಣ್ಣನವರನ್ನು ಕರ್ನಾಟಕದ ಸಾಂಸ್ಕೃತಿಕ ರಾಯಭಾರಿ ಎಂದು ಘೋಷಿಸಿರುವುದು ಸ್ವಾಗತಾರ್ಹ ಎಂದು ಶ್ರೀ ವೀರಶೈವ ಲಿಂಗಾಯತ ಸಮಾಜದ ತಾಲ್ಲೂಕು ಪ್ರಧಾನ ಕಾರ್ಯದರ್ಶಿ ಎಂ.ಸಿ.ಶಿವಾನಂದಸ್ವಾಮಿ ತಿಳಿಸಿದ್ದಾರೆ.

ಈ ಕುರಿತು ಶುಕ್ರವಾರ ಹೇಳಿಕೆಯಲ್ಲಿ ತಿಳಿಸಿರುವ ಅವರು ಜಗತ್ತಿನ ಮೊಟ್ಟ ಮೊದಲ ಸಮಾನೆಯ ಹರಿಕಾರ, ಕಾಯಕವೇ ಕೈಲಾಸ ಎಂಬ ಸಂಸ್ಕೃತಿಯನ್ನು ಎತ್ತಿಹಿಡಿದವರು. ದುಡಿಮೆಯ ಫಲವನ್ನು ಸಮಾನಾಗಿ ಹಂಚಿಕೊಳ್ಳ ಬೇಕು. ದಾಸೋಹ ಸಂಸ್ಕೃತಿಯನ್ನು ಅನುಸರಿಸಿ ಪ್ರತಿಪಾದಿಸಿದ ಬಸವಣ್ಣರನ್ನು ರಾಯಬಾರೀ ಘೋಷಿಸಿರುವುದು ಖುಷಿಯ ಸಂಗತಿ ಎಂದು ಹೇಳಿದ್ದಾರೆ.

ಮಹಾಜ್ಞಾನಿ ಬಸವಣ್ಣನವರ ಆದರ್ಶಗಳನ್ನು ಪರಿಪಾಲಿಸುವ ಪಾಠವನ್ನು ಯುವಪೀಳಿಗೆ ಮಾಡಬೇಕು. ಜೊತೆಗೆ ಮುಂದಿನ ಜನಾಂಗಕ್ಕೆ ಕೊಂಡೊಯ್ಯುವ ಮಹತ್ತರ ಜವಾಬ್ದಾರಿ ಹೊರಬೇಕಿದೆ. ಹಾಗಾಗಿ ರಾಜ್ಯದಲ್ಲಿ ಬಸ ವಣ್ಣರ ತತ್ವಾದರ್ಶಗಳನ್ನು ಮೆಚ್ಚಿ ಕರ್ನಾಟಕ ಸಾಂಸ್ಕೃತಿಕ ರಾಯಬಾರಿಯನ್ನಾಗಿ ಮಾಡಿರುವುದು ಹೆಮ್ಮೆಯ ವಿಷ ಯ ಎಂದಿದ್ದಾರೆ.

Basavanna ಇಂತಹ ಮಹತ್ವದ ಘೋಷಣೆಗೆ ಕಾರಣಕರ್ತರಾದ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸೇರಿದಂತೆ ಮತ್ತಿತರರ ಜನಪ್ರತಿನಿಧಿಗಳು ಶ್ರಮವಹಿಸಿರುವುದಕ್ಕೆ ತಾಲ್ಲೂ ಕು ಸಂಘ ಅತ್ಯಂತ ಕೃತಜ್ಞತೆ ಸಲ್ಲಿಸಿದೆ ಎಂದು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...