Monday, May 4, 2026
Monday, May 4, 2026

Student Suicide ರಾಜ್ಯದಲ್ಲಿ ವಿದ್ಯಾರ್ಥಿಗಳ ಆತ್ಮಹತ್ಯೆ ಹೆಚ್ವುತ್ತಿದೆ ದಸಂಸ ದಿಂದ ಆತಂಕ

Date:

student Suicide ರಾಜ್ಯದಲ್ಲಿ ದಿನೇ ದಿನೇ ವಿದ್ಯಾರ್ಥಿಗಳು ನೇಣಿಗೆ ಶರಣಾಗುತ್ತಿರುವ ಹಿನ್ನೆಲೆ ಯಲ್ಲಿ ನೈತಿಕ ಹೊಣೆಹೊತ್ತ ಶಿಕ್ಷಣ ಸಚಿವರು ರಾಜೀನಾಮೆ ಸಲ್ಲಿಸಿ, ಮಕ್ಕಳ ಸಾವಿನ ಹಿಂದಿನ ರಹಸ್ಯವನ್ನು ಸಮಗ್ರ ತನಿಖೆ ನಡೆಸಬೇಕು ಎಂದು ದಸಂಸ (ಪ್ರೋ.ಕೃಷ್ಣಪ್ಪ ಸ್ಥಾಪಿತ) ಚಿಕ್ಕಮಗಳೂರು ಜಿಲ್ಲಾ ಸಂಚಾಲಕ ಕಬ್ಬಿಕೆರೆ ಮೋಹನ್‌ಕುಮಾರ್ ಒತ್ತಾಯಿಸಿದ್ದಾರೆ.

ಈ ಕುರಿತು ಶನಿವಾರ ಪತ್ರಿಕಾ ಹೇಳಿಕೆ ನೀಡಿರುವ ಅವರು ಶಿಕ್ಷಣ ಸಚಿವರ ತವರು ಕ್ಷೇತ್ರವಾದ ಶಿವಮೊಗ್ಗ ಜಿಲ್ಲೆಯ ಪದವಿ ಕಾಲೇಜು ವಿದ್ಯಾರ್ಥಿ ಬಿಳಕೊಪ್ಪದಲ್ಲಿ ಆತ್ಮಹತ್ಯೆಗೆ ಶರಣಾಗಿರುವುದು ದುರ್ದೈವದ ಸಂಗತಿ. ಇಂ ತಹ ಪ್ರಕರಣಗಳು ರಾಜ್ಯಾದ್ಯಂತ ಹೆಚ್ಚಾಗುತ್ತಿರುವುದು ಹಲವು ಅನುಮಾನಗಳಿಗೆ ಕಾರಣವಾಗುತ್ತಿದೆ ಎಂದಿದ್ದಾರೆ.

ಈಗಾಗಲೇ ಚಿಕ್ಕಮಗಳೂರು, ವಿಜಯಪುರ ಸೇರಿದಂತೆ ಇದೀಗ ಶಿವಮೊಗ್ಗದಲ್ಲೂ ವಿದ್ಯಾರ್ಥಿಯ ಸಾವಿನ ಹಿಂದಿನ ರಹಸ್ಯ ಬಗೆಹರಿದಿಲ್ಲ. ಅದಲ್ಲದೇ ಶಿಕ್ಷಣ ಸಚಿವ ಮಧು ಬಂಗಾರಪ್ಪ ಜಿಲ್ಲೆಯಲ್ಲೇ ವಿದ್ಯಾರ್ಥಿ ಆತ್ಮಹತ್ಯೆ ಶರಣಾಗಿದ್ದರೂ ಸರ್ಕಾರ ಯಾವುದೇ ಕ್ರಮ ಕೈಗೊಂಡಿರುವುದಿಲ್ಲ ಎಂದು ಆರೋಪಿಸಿದ್ದಾರೆ.

student Suicide ಹೀಗಾಗಿ, ವಿದ್ಯಾರ್ಥಿಗಳ ಸಾವಿನ ಸಮಗ್ರ ತನಿಖೆಯನ್ನು ನಡೆಸಿ ನೊಂದ ಕುಟುಂಬಕ್ಕೆ ಸಾಂತ್ವಾನ ಹೇಳಬೇಕು ಹಾಗೂ ಶಿಕ್ಷಣ ಸಚಿವರ ರಾಜೀನಾಮೆ ಪಡೆದುಕೊಂಡು ಸರ್ಕಾರವೇ ನೇರವಾಗಿ ತನಿಖೆ ನಡೆಸುವ ಮುಖಾಂತರ ಮುಂದಿನ ದಿನಗಳಲ್ಲಿ ಈ ಅಚಾತುರ್ಯ ನಡೆಯದಂತೆ ಕ್ರಮ ವಹಿಸಬೇಕು ಎಂದು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shivamogga Police ಗಾಡಿಕೊಪ್ಪ ಸಂಚಾರ ನಿಯತ್ರಣ ಓಕೆ. ಆದರೆ ಮಿಕ್ಕ ಸಮಸ್ಯೆಗಳಿಗೆ ಪರಿಹಾರವಿಲ್ಲ ಯಾಕೆ?

Shivamogga Police ಗಾಡಿಕೊಪ್ಪ‌,ಶಿವಮೊಗ್ಗದ ಸೆಟಲೈಟ್ ಟೌನ್ ಎಂಬ ವ್ಯಾಪ್ತಿಗೆ ಬೆಳೆದುಬಿಟ್ಟಿದೆ. ಅಲ್ಕಿನ ವೃತ್ತಕ್ಕೆ...

Shivamogga Airport ಶಿವಮೊಗ್ಗಏರ್ ಪೋರ್ಟ್ ನಲ್ಲಿನೈಟ್ ಲ್ಯಾಂಡಿಂಗ್ಕಾಮಗಾರಿಯು ಜೂನ್ ತಿಂಗಳಲ್ಲಿ ಮುಗಿಯಲಿದೆ- ನಂಜಯ್ಯ‌ಮಠ

Shivamogga Airport ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಕರ್ಯ ನಿಗಮ ಮಂಡಳಿಯ (ಕೆಎಸ್‌ಐಡಿಸಿ)...

B.Y. Raghavendra ಬಿಎಸ್ ವೈ ಅಭಿಮಾನೋತ್ಸವ ಕೇವಲ ಸಮಾರಂಭವಲ್ಲ.ನಮ್ಮನಾಯಕರಿಗೆ ಸಲ್ಲಿಸುವ ಗೌರವ- ಬಿ.ವೈ.ರಾಘವೇಂದ್ರ.

B.Y. Raghavendra ಇದೇ ಮೇ 9ರಂದು ಚಿತ್ರದುರ್ಗದಲ್ಲಿ ಆಯೋಜಿಸಲಾಗಿರುವ ರೈತ ನಾಯಕ, ಮಾಜಿ...