Monday, February 2, 2026
Monday, February 2, 2026

Ram mandir ಅಯೋಧ್ಯೆ ಬಾಲರಾಮ ಪ್ರಾಣಪ್ರತಿಷ್ಠಾಪನೆ ನಿಮಿತ್ತ ಹಿರೇಮಗಳೂರಿನಲ್ಲಿ ಸಂಭ್ರಮಾಚರಣೆ

Date:

Ram mandir ಅಯೋಧ್ಯೆಯಲ್ಲಿ ಶ್ರೀ ರಾಮಲಾಲ್ಲ ಪ್ರಾಣ ಪ್ರತಿಷ್ಟಾಪನಾ ಅಂಗವಾಗಿ ಹಿರೇ ಮಗಳೂರು ಶ್ರೀ ಕೋದಂಡರಾಮಚoದ್ರ ದೇವಾಲಯದಲ್ಲಿ ದಲಿತ ಹಿತರಕ್ಷಣಾ ವೇದಿಕೆಯ ಮುಖಂಡರುಗಳು ಸೋಮವಾರ ವಿಶೇಷ ಪೂಜೆಯಲ್ಲಿ ಭಾಗಿಯಾಗಿ ಶ್ರೀರಾಮನ ಆರ್ಶೀವಾದ ಪಡೆದುಕೊಂಡರು.

Ram mandir ಬಳಿಕ ಮಾತನಾಡಿದ ವೇದಿಕೆ ಮುಖಂಡ ಕುರುವಂಗಿ ವೆಂಕಟೇಶ್ ಇಡೀ ದೇಶವೇ ಶ್ರೀರಾಮ ಮಂದಿರ ಲೋಕಾರ್ಪಣೆ ದೃಶ್ಯಕಂಡು ಪುನೀತರಾಗಿದ್ದಾರೆ. ಅದಲ್ಲದೇ ಖುದ್ದು ಪ್ರಧಾನ ಮಂತ್ರಿ ಮೋದಿಯವರು ಕೂಡಾ ಅತ್ಯಂತ ಶ್ರದ್ದಾಭಕ್ತಿಯಿಂದ ದೇವಾಲಯದ ಪ್ರಾಣ ಪ್ರತಿಷ್ಟೆಯಲ್ಲಿ ನಿರತರಾಗಿರುವುದು ಹೆಮ್ಮೆಯ ಸಂಗತಿ ಎಂದರು.

ಶ್ರೀರಾಮನು ದೇವಾಲಯ ಸೇರುವ ಸುದಿನವಾಗಿದೆ. ಪ್ರತಿಯೊಬ್ಬರು ಸ್ವಾರ್ಥ, ಅಸೂಯೆ ತೊಲಗಿಸಲು ಶ್ರೀರಾಮಜಪದಲ್ಲಿ ನಿರತರಾದರೆ ಮನಸ್ಸು ಶುದ್ಧವಾಗುವ ಜೊತೆಗೆ ಬದುಕಿನಲ್ಲಿ ಶಾಂತಿ, ಸಂಮೃದ್ದಿ ನೆಲೆಯುರಲಿದೆ. ಹೀಗಾಗಿ ಪ್ರತಿ ಮನ, ಮನಸ್ಸುಗಳಲ್ಲಿ ಶ್ರೀರಾಮನ ಸಂದೇಶವನ್ನು ಅಳವಡಿಸಿಕೊಳ್ಳಬೇಕು ಎಂದರು.

ಈ ಸಂದರ್ಭದಲ್ಲಿ ವೇದಿಕೆಯ ಮುಖಂಡರುಗಳಾದ ಕೇಶವ, ರೇವನಾಥ್, ಹಂಪಯ್ಯ, ಹೆಚ್.ಎಸ್.ಪುಟ್ಟ ಸ್ವಾಮಿ, ನರಸಿಂಹಮೂರ್ತಿ, ಧನಂಜಯ್, ರವಿಕುಮಾರ್, ಮಂಜುನಾಥ್, ನಂದನ್, ನಂಜುoಡಪ್ಪ ಮತ್ತಿತರರು ಹಾಜರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...