Sunday, May 3, 2026
Sunday, May 3, 2026

Muzrai Temple ಕಣ್ಣನ್ ಕೇಸ್ ನೋಟೀಸ್ ಹಿಂಪಡೆಯಲು ತಹಶೀಲ್ದಾರ್ ಗೆ ಸಚಿವರ ಸೂಚನೆ

Date:

Muzrai Temple ಚಿಕ್ಕಮಗಳೂರು ಜಿಲ್ಲೆಯ ಹಿರೇಮಗಳೂರಿನ ಕಲ್ಯಾಣ ಕೋದಂಡರಾಮ ದೇವಸ್ಥಾನದಲ್ಲಿ ಪ್ರಧಾನ ಅರ್ಚಕರಾಗಿ ಸೇವೆ ಸಲ್ಲಿಸುತ್ತಿರುವ ಹಿರೇಮಗಳೂರು ಕಣ್ಣನ್ ಅವರಿಗೆ ಸರ್ಕಾರದಿಂದ ನೀಡಲಾಗುತ್ತಿದ್ದ ವೇತನವನ್ನು ಹಿಂದಿರುಗಿಸುವಂತೆ ಇತ್ತೀಚೆಗೆ ಅಲ್ಲಿನ ತಹಶೀಲ್ದಾರ್ ಸುಮಂತ್ ಅವರು ನೋಟಿಸ್ ಜಾರಿಗೊಳಿಸಿದ್ದರು. 10 ವರ್ಷಗಳ ವೇತನ ಹಿಂದಿರುಗಿಸುವಂತೆ ಸೂಚಿಸಿದ್ದರು. ಇದು ವಿವಾದಕ್ಕೆ ಕಾರಣವಾಗಿತ್ತು. ಕೂಡಲೇ ಎಚ್ಚೆತ್ತ ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ, ನೋಟಿಸ್ ಹಿಂಪಡೆಯುವಂತೆ ಸೂಚಿಸಿರುವುದಾಗಿ ಹೇಳಿದ್ದಾರೆ.

2013-14 ನೇ ಸಾಲಿನಿಂದ 2016-17ನೇ ಸಾಲಿನ ತನಕ ತಿಂಗಳಿಗೆ 2000 ದಂತೆ ವರ್ಷಕ್ಕೆ 24,000 ಪಾವತಿಸಬೇಕಿತ್ತು. 2017-18 ನೇ ಸಾಲಿನಿಂದ 2021-22ನೇ ಸಾಲಿನ ತನಕ ತಿಂಗಳಿಗೆ 4, ವರ್ಷಕ್ಕೆ 48000 ಪಾವತಿಸಬೇಕಿತ್ತು. ಆದರೆ, ವರ್ಷಕ್ಕೆ 90 ವರ್ಷಗಳಿಗೆ ಒಟ್ಟು 8.10ರೂ. ಲಕ್ಷ ಪಾವತಿಸ ಲಾಗಿದೆ. ತಮ್ಮ ಖಾತೆಗೆ ಜಮೆ ಆಗಿರುವ 4.74 ಲಕ್ಷ ಹಿಂದಿರುಗಿಸಬೇಕು ಎಂದು ನೋಟಿಸ್ ನಲ್ಲಿ ತಹಶೀಲ್ದಾರರು ವಿವರಿಸಿದ್ದಾರೆ.
ಕೋದಂಡ ರಾಮಚಂದ್ರ ದೇಗುಲ ಸಿ ವರ್ಗಕ್ಕೆ ಸೇರಿದೆ. 9 ವರ್ಷಗಳ ಅವಧಿಯಲ್ಲಿ ಹುಂಡಿ ಹಣ 5.98 ಲಕ್ಷ ರೂಪಾಯಿ ಸಂಗ್ರಹವಾಗಿದೆ. ಈ ಅವಧಿಯಲ್ಲಿ ವಿದ್ಯುತ್ ಶುಲ್ಕ, ರಥೋತ್ಸವ ಖರ್ಚು, ಅರ್ಚಕರ ವೇತನ ಸೇರಿ ಒಟ್ಟಾರೆ 12.96 ಅಕ್ಷ ರೂಪಾಯಿ ವೆಚ್ಚವಾಗಿದೆ ಎಂಬುದನ್ನ ನೋಟಿಸ್ ನಲ್ಲಿ ದಾಖಲಿಸಲಾಗಿದೆ.

Muzrai Temple ಈ ಕುರಿತು ಪ್ರತಿಕ್ರಿಯಿಸಿರುವ ಹಿರೇಮಗಳೂರು ಕಣ್ಣನ್ ಅವರು ದೇವಸ್ಥಾನದ ಆದಾಯ ಕಡಿಮೆ ಇದೆ ಎಂಬ ಕಾರಣಕ್ಕೆ ಈ ಹಿಂದೆ ಪಾವತಿ ಆಗಿರುವ ತಸ್ತಿಕ್ ಮೊತ್ತವನ್ನು ಹಿಂದಿರುಗಿಸುವಂತೆ ನೋಟಿಸ್ ನೀಡಿದ್ದಾರೆ. ಆದಾಯ ಕಡಿಮೆ ಇದ್ದ ಕಾರಣಕ್ಕೆ ಹಣ ವಾಪಸ್ ಕೇಳಿದರೆ ಅರ್ಚಕರ ಮನಸ್ಥಿತಿ ಏನಾಗಲಿದೆ ಎಂದು ಪ್ರಶ್ನಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shivamogga Police ಗಾಡಿಕೊಪ್ಪ ಸಂಚಾರ ನಿಯತ್ರಣ ಓಕೆ. ಆದರೆ ಮಿಕ್ಕ ಸಮಸ್ಯೆಗಳಿಗೆ ಪರಿಹಾರವಿಲ್ಲ ಯಾಕೆ?

Shivamogga Police ಗಾಡಿಕೊಪ್ಪ‌,ಶಿವಮೊಗ್ಗದ ಸೆಟಲೈಟ್ ಟೌನ್ ಎಂಬ ವ್ಯಾಪ್ತಿಗೆ ಬೆಳೆದುಬಿಟ್ಟಿದೆ. ಅಲ್ಕಿನ ವೃತ್ತಕ್ಕೆ...

Shivamogga Airport ಶಿವಮೊಗ್ಗಏರ್ ಪೋರ್ಟ್ ನಲ್ಲಿನೈಟ್ ಲ್ಯಾಂಡಿಂಗ್ಕಾಮಗಾರಿಯು ಜೂನ್ ತಿಂಗಳಲ್ಲಿ ಮುಗಿಯಲಿದೆ- ನಂಜಯ್ಯ‌ಮಠ

Shivamogga Airport ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಕರ್ಯ ನಿಗಮ ಮಂಡಳಿಯ (ಕೆಎಸ್‌ಐಡಿಸಿ)...

B.Y. Raghavendra ಬಿಎಸ್ ವೈ ಅಭಿಮಾನೋತ್ಸವ ಕೇವಲ ಸಮಾರಂಭವಲ್ಲ.ನಮ್ಮನಾಯಕರಿಗೆ ಸಲ್ಲಿಸುವ ಗೌರವ- ಬಿ.ವೈ.ರಾಘವೇಂದ್ರ.

B.Y. Raghavendra ಇದೇ ಮೇ 9ರಂದು ಚಿತ್ರದುರ್ಗದಲ್ಲಿ ಆಯೋಜಿಸಲಾಗಿರುವ ರೈತ ನಾಯಕ, ಮಾಜಿ...