Thursday, October 3, 2024
Thursday, October 3, 2024

Republic Day ಸಂವಿಧಾನ ಪವಿತ್ರಗ್ರಂಥವೆಂದು ಎಲ್ಲರೂ ಗೌರವಿಸಿದರೆ ಸಾಮರಸ್ಯ ಮೂಡುತ್ತದೆ

Date:

ಸಂವಿಧಾನದ ಜಾಗೃತಿಯ ಅಗತ್ಯತೆ ಇಂದಿನ ಪೀಳಿಗೆಗೆ ಅತ್ಯಗತ್ಯವಾಗಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಗೌರವ ಕಾರ್ಯದರ್ಶಿ ಜಿ.ಬಿ.ಪವನ್ ತಿಳಿಸಿದರು.

ಚಿಕ್ಕಮಗಳೂರು ನಗರದ ಜಿಲ್ಲಾ ಕನ್ನಡ ಭವನದಲ್ಲಿ 75ನೇ ಗಣರಾಜ್ಯೋತ್ಸವದ ದ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು ಭಾರತದ ಸಂವಿಧಾನ ಸರ್ವ ಶ್ರೇಷ್ಠ ಸಂವಿಧಾನವಾಗಿದ್ದು ಇದನ್ನು ದೇಶದ ಎಲ್ಲಾ ಧರ್ಮೀಯರು ತಮ್ಮ ಮೊದಲ ಪವಿತ್ರ ಗ್ರಂಥವೆಂದು ಭಾವಿಸಿ ನೆಡೆದರೆ ಉತ್ತಮ ಮತ್ತು ಸಾಮರಸ್ಯದ ಭಾರತ ನಮ್ಮದಾಗಲಿದೆ ಎಂದು ಆಶಯ ವ್ಯಕ್ತಪಡಿಸಿದರು.

ಬುದ್ದ ಬಸವ ಅಂಬೇಡ್ಕರ್ ಮತ್ತು ಕುವೆಂಪುರವರ ಆಶಯಗಳು ಮತ್ತು ವಿಚಾರಧಾರೆಗಳೇ ಸಂವಿಧಾನವಾಗಿದ್ದು ಇವುಗಳನ್ನು ತಮ್ಮ ಮಕ್ಕಳಿಗೆ ಹೇಳಿಕೊಡವ ಗುರುತರವಾದ ಜವಾಬ್ದಾರಿ ಪೋಷಕರು ಮತ್ತು ಎಲ್ಲಾ ರಾಜಕೀಯ ಮತ್ತು ರಾಜಕೀಯೇತರ ಸಂಘಟನೆಗಳ ಮೇಲಿದೆ ಎಂದರು.

Republic Day 1947 ರಲ್ಲಿ ಸ್ವಾತಂತ್ರ‍್ಯ ಬಂದು 1950ರಲ್ಲಿ ನಮ್ಮದೇ ಆದ ವಿಶ್ವದಲ್ಲೇ ಅತೀ ಅದ್ಬುತವಾದ ಸಂವಿಧಾನವನ್ನು ಸ್ವೀಕರಿಸಿಕೊಂಡಿದ್ದರೂ ಕೂಡ ನಮ್ಮಗಳ ಸ್ವಾರ್ಥದಿಂದ ರಾಷ್ಟçದಲ್ಲಿ ಅದರ ಅನುಸರಿಸದಿರುವುದು ಶೋಚನೀಯ ಮುಂದಿನ ಪೀಳಿಗೆಗಳನ್ನು ಈ ಬಗ್ಗೆ ಎಚ್ಚರಿಸುವ ಕರ್ತವ್ಯ ಪ್ರತಿಯೊಬ್ಬ ಪ್ರಜೆಯ ಮೇಲಿದೆ ಎಂದರು.

ಕಸಾಪ ತಾಲ್ಲೂಕು ಅಧ್ಯಕ್ಷ ಬಿ.ಹೆಚ್. ಸೋಮಶೇಖರ್ ಮಾತನಾಡಿ ಸಂವಿಧಾನದ ಅನುಸರಣೆಯೇ ನಮ್ಮ ಜೀವನದ ಆದ್ಯತೆ ಆಗಬೇಕೆಂದರು. ಈ ಸಂದರ್ಭದಲ್ಲಿ ನಗರ ಕ.ಸಾ.ಪ.ನಗರ ಅಧ್ಯಕ್ಷ ಸಚಿನ್ ಸಿಂಗ್, ಮೇಕನಗದ್ದೆ ಲಕ್ಷ್ಮಣ್‌ಗೌಡ, ಈಶ್ವರಪ್ಪ ಹೊಸಳ್ಳಿ, ನಂದಕುಮಾರ್, ಪ್ರತಿಬಾ ವೀರೇಶ್ ಕೌಲಗಿ, ರವಿ, ವೀಣಾ ಅರವಿಂದ್, ಜಯಂತಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Rotary Shivamogga ಹೆಣ್ಣುಮಕ್ಕಳಿಗೆ ಪಾಠ ಪ್ರವಚನ ಕಲ್ಪಿಸಿರುವ ಸರ್ಕಾರ ದ ಮಹತ್ವ ಯೋಜನೆ- ಭಾರದ್ವಾಜ್

Rotary Shivamogga ದೇಶದ ಏಳಿಗೆಗಾಗಿ ಉತ್ತಮ ಪ್ರಜೆಗಳನ್ನು ನಿರ್ಮಿಸುವ ಮಹತ್ವದ ಕಾರ್ಯ...

Gandhi Jayanthi ಗಾಂಧೀಜಿ ಅವರಲ್ಲದೇ ಅನೇಕರ ಹೋರಾಟದ ಫಲ, ಸ್ವಾತಂತ್ರ್ಯ. ಅದನ್ನ ಉಳಿಸಿಕೊಳ್ಳಬೇಕು- ಮಧು ಬಂಗಾರಪ್ಪ

Gandhi Jayanthi ಗಾಂಧೀಜಿ ಸೇರಿದಂತೆ ಅನೇಕ ಹೋರಾಟಗಾರರ ಹೋರಾಟದ ಫಲದಿಂದ ನಮಗೆ...

Shivamogga Dasara ಶಿವಮೊಗ್ಗ ದಸರಾ ಉತ್ಸವಕ್ಕೆ ಕ್ಷಣಗಣನೆ

Shivamogga Dasara ರಾಜ್ಯದ ಎರಡನೇ ಅತಿ ದೊಡ್ಡ ದಸರಾ ಮಹೋತ್ಸವ ‘ಶಿವಮೊಗ್ಗ...

Chaudeshwari Temple ಶಿವಮೊಗ್ಗ ಚಾಲುಕ್ಯನಗರದ ಶ್ರೀಚೌಡೇಶ್ವರಿ ದೇಗುಲದಲ್ಲಿ ನವರಾತ್ರಿ ಉತ್ಸವ

Chaudeshwari Temple ಚಾಲುಕ್ಯನಗರದಲ್ಲಿರುವ ಶ್ರೀ ಚೌಡೇಶ್ವರಿ ಅಮ್ಮನವರ ದೇವಸ್ಥಾನ ನವರಾತ್ರಿಯ...