Tuesday, October 1, 2024
Tuesday, October 1, 2024

Karnataka Dalit Sangarsha Samiti ಕರ್ನಾಟಕ ದಲಿತ ಸಂಘರ್ಷ ಸಮಿತಿಗೆ 50ರ ಸಂಭ್ರಮ

Date:

Karnataka Dalit Sangarsha Samiti ಬಿ. ಕೃಷ್ಣಪ್ಪ ನವರು ಅವಕಾಶ ವಾದಿಯಾಗಿರಲಿಲ್ಲ. ಅವರು ಆದರ್ಶವಾದಿಯಾಗಿದ್ದರು ಎಂದು ಕಾಂಗ್ರೆಸ್ ಪಕ್ಷದ ವಕ್ತಾರರಾದ ಶ್ರೀ ಆಯನೂರು ಮಂಜುನಾಥ್ ರವರು ಹೇಳಿದರು.

ಪ್ರೊ. ಬಿ ಕೃಷ್ಣಪ್ಪ ನವರು ಸ್ಥಾಪಿಸಿದ ಕರ್ನಾಟಕ ದಲಿತ ಸಂಘರ್ಷ ಸಮಿತಿಯ ವತಿಯಿಂದ ಪತ್ರಿಕಾ ಭವನದಲ್ಲಿ ನಡೆದ” ಕರ್ನಾಟಕದ ದಲಿತ ಚಳುವಳಿಗೆ 50 ರ ಸಂಭ್ರಮ “ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಬಹುಷಃ ಜಗತ್ತಿನ ಯಾವುದೇ ಮೂಲೆಯಲ್ಲಿ ಯಾವುದೇ ಚಳುವಳಿಯು ಇಷ್ಟು ಸುದೀರ್ಘ ಅವಧಿಗೆ ನಡೆದ ಉದಾಹರಣೆಯಿಲ್ಲ. ಅಂತಹದೊಂದು ಬೃಹತ್ ರಾಜಕೀಯ ವಿದ್ಯಾಮಾನವನ್ನು ಮುನ್ನಡೆಸಿದ ಮಹಾನಾಯಕ ಪ್ರೊ ಬಿ ಕೃಷ್ಣಪ್ಪ ನವರು ಕರ್ನಾಟಕದ ಇತಿಹಾಸದಲ್ಲಿ ಎಂದಿಗೂ ಅಜರಾಮರವಾಗಿ ಉಳಿಯುತ್ತಾರೆ. ಇದು ಎಲ್ಲರ ಪಾಲಿಗೆ ಸ್ವಾಭಿಮಾನದ ಸಂಗತಿ ಎಂದು ಆಯನೂರು ಮಂಜುನಾಥ ಹೇಳಿದರು.

Karnataka Dalit Sangarsha Samiti ವೇದಿಕೆಯಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡರಾದ ಎಂ ಶ್ರೀಕಾಂತ್, ನ್ಯಾಯವಾದಿಗಳಾದ ಕೆಪಿ ಶ್ರೀಪಾಲ್, ರಿಪ್ಪನ್ ಪೇಟೆಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಧ್ಯಾಪಕರಾದ ಬಿ ಎಲ್ ರಾಜು, ಸಾಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕಾಲೇಜಿನ ಪ್ರಾಧ್ಯಾಪಕರಾದ ಡಾ. ಕುಂಸಿ ಉಮೇಶ್, ಸಹದ್ರಿ ಕಲಾ ಕಾಲೇಜಿನ ಪ್ರಾಧ್ಯಾಪಕರಾದ ಡಾ. ಮೇಟಿ ಮಲ್ಲಿಕಾರ್ಜುನ್, ಡಿಎಸ್‌ಎಸ್ ನ ರಾಜ್ಯ ಖಜಾಂಚಿ ಬಿಎ ಕಾಟ್ಕೆ, ಕರ್ನಾಟಕದಲ್ಲಿ ಸಂಘರ್ಷ ಸಮಿತಿಯ ಜಿಲ್ಲಾ ಸಂಚಾಲಕರಾದ ಎಂ ಏಳು ಕೋಟಿ, ಭದ್ರಾವತಿಯ ಶ್ರೀ ಕೃಷ್ಣ ಪದವಿ ಪೂರ್ವ ಕಾಲೇಜಿನ ನಿವೃತ್ತ ಪ್ರಾಂಶುಪಾಲರಾದ ಶಿವಬಸಪ್ಪ, ಕರ್ನಾಟಕ ದಲಿತ ನೌಕರರ ಒಕ್ಕೂಟದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎನ್ ಮಂಜುನಾಥ್,ಕರ್ನಾಟಕ ದಲಿತ ಮಹಿಳಾ ಒಕ್ಕೂಟದ ಜಿಲ್ಲಾ ಸಂಚಾಲಕಿಯಾದ ಗಂಗಮಾಳಮ್ಮ ಸೊರಬ ಮೊದಲಾದವರಿದ್ದರು. ಸಭೆಯ ಅಧ್ಯಕ್ಷತೆಯನ್ನು ಕರ್ನಾಟಕ ದಲಿತ ಸಂಘರ್ಷ ಸಮಿತಿಯ ರಾಜ್ಯ ಸಂಚಾಲಕರಾದ ಎಂ ಗುರುಮೂರ್ತಿ ಯವರು ವಹಿಸಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

CM Siddharamaih ಪರಿಹಾರ ರೂಪದಲ್ಲಿ ಪಡೆದಿದ್ದ ನಿವೇಶನಗಳನ್ನ ಪತ್ನಿ ಹಿಂದಿರುಗಿಸಿದ್ದಾರೆ- ಸಿದ್ಧರಾಮಯ್ಯ

CM Siddharamaih ಮೈಸೂರಿನ ಮುಡಾ ಭೂಸ್ವಾಧೀನ ನಡೆಸದೆ ವಶಕ್ಕೆ ಪಡೆದಿದ್ದ...

R. Ashok ಸಿದ್ಧರಾಮಯ್ಯನವರಿಗೆ ತಮ್ಮ ತಪ್ಪಿನ ಅರಿವಾಯಿತಲ್ಲ”-ಆರ್ .ಅಶೋಕ್ ಪ್ರತಿಕ್ರಿಯೆ

R. Ashok ಮೂಡಾ ಹಗರಣದಲ್ಲಿ ಕಾನೂನಿನ ಕುಣಿಕೆ ಬಿಗಿಯಾಗುತ್ತಿದ್ದಂತೆ ಸಿಎಂ ಸಿದ್ಧರಾಮಯ್ಯ...

Shivamogga-Bhadravathi Urban Development Authority ಊರಗಡೂರು ನಿವೇಶನ ಪಡೆಯಲು ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ಮುಂದೂಡಿಕೆ

Shivamogga-Bhadravathi Urban Development Authority ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರವು ಶಿವಮೊಗ್ಗ ನಗರದ...