Thursday, March 19, 2026
Thursday, March 19, 2026

Good Luck Care Center ಟಿಪಿ ಸತ್ಯನಾರಾಯಣ ಸ್ಮರಣಾರ್ಥ ಗುಡ್ ಲಕ್ ಆರೈಕೆ ಕೇಂದ್ರದ ನೂತನ ಕಟ್ಟಡ ನಿರ್ಮಾಣಕ್ಕೆ 1 ಲಕ್ಷ ರೂ ದೇಣಿಗೆ

Date:

Good Luck Care Center ಮನುಕುಲದ ಸೇವೆಯನ್ನು ಮಾಡುತ್ತಿರುವ ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಶಿವಮೊಗ್ಗ ನಗರದ ಲಕ್ಷ್ಮಿ ಫೈನಾನ್ಸ್ ನ ದಿವಂಗತ ಟಿಪಿ ಸತ್ಯನಾರಾಯಣ ಅವರ ಸ್ಮರಣಾರ್ಥ ಇಂದು ಗಜಾನನ ಬಡಾವಣೆಯಲ್ಲಿ ನಿರ್ಮಾಣವಾಗುತ್ತಿರುವ ಗುಡ್ ಲಕ್ ಆರೈಕೆ ಕೇಂದ್ರದ ಕಟ್ಟಡಕ್ಕೆ ಅವರ ಧರ್ಮಪತ್ನಿ ಲಕ್ಷ್ಮಿ ಸತ್ಯನಾರಾಯಣ, . ಟಿ ಎಸ್ ಬದರೀನಾಥ್. ಸೊಸೆ ಸ್ವಪ್ನ ಬದ್ರಿನಾಥ್ ಅವರು ರೂ.1 ಲಕ್ಷ ದೇಣಿಗೆಯನ್ನು ಕೇಂದ್ರದ ಅಧ್ಯಕ್ಷರಾದ ಯು. ರವೀಂದ್ರನಾಥ್ ಐತಾಳ್ ಅವರಿಗೆ ಹಸ್ತಾಂತರ ಮಾಡಿದರು.

ಇದೇ ಸಂದರ್ಭದಲ್ಲಿ ಬದರಿನಾಥ್ ಅವರು ಮಾತನಾಡುತ್ತ. ನಾವು ಮಾಡುವ ಸೇವೆ ಸಾರ್ಥಕಗೊಳ್ಳಬೇಕಾದರೆ. ಮನುಕುಲದಲ್ಲಿ ನಿಜವಾದ ಸೇವೆ ಮಾಡುತ್ತಿರುವ ಸಂಘ ಸಂಸ್ಥೆಗಳನ್ನು ಗುರುತಿಸಿ ಅವರ ಅವಶ್ಯಕತೆಗೆ ಸ್ಪಂದಿಸಿದರೆ ಅರ್ಥಪೂರ್ಣ. ನಮ್ಮ ಪೂಜ್ಯ ತಂದೆಯವರಾದ ಟಿಪಿ ಸತ್ಯನಾರಾಯಣ ಅವರು ಸಹ ಫ್ರೆಂಡ್ಸ್ ಸೆಂಟರ್
ರೋಟರಿ. ಹಾಗೂ ಹಲವಾರು ಸಮಾಜಮುಖಿ ಸೇವಾ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸುತ್ತಿದ್ದರು.

Good Luck Care Center ಅವರ ಆಶಯದಂತೆ ಪ್ರತಿ ವರ್ಷ ಇಂತಹ ಮನುಕುಲದ ಸೇವೆ ಸಲ್ಲಿಸುತ್ತಿರುವ ಸಂಸ್ಥೆಗಳನ್ನು ಗುರುತಿಸಿ ನಮ್ಮ ಕೈಲಾದ ಸಹಾಯವನ್ನು ಮಾಡುತ್ತಿದ್ದೇವೆ ಎಂದು ನುಡಿದರು.

ನಾವು ನೀಡಿದ ದೇಣಿಗೆ ಸದ್ಬಳಕೆಯಾಗಲಿ ಎಂದು ಕೇಳಿಕೊಂಡರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಯು. ರವೀಂದ್ರನಾಥ ಅವರು ಮಾತನಾಡುತ್ತಾ ಆಶ್ರಮವಾಸಿಗಳಿಗಾಗಿ ನಿರ್ಮಾಣಗೊಳ್ಳುತ್ತಿರುವ ಗುಡ್ ಲಕ್ ಅರೈಕೆ ಕೇಂದ್ರದ ಕಟ್ಟಡಕ್ಕೆ ಹಣದ ಅವಶ್ಯಕತೆ ತುಂಬಾ ಇದ್ದು ಇಂತಹ ದಾನಿಗಳಿಂದ ಅದು ನಿರ್ಮಾಣವಾಗುತ್ತಿದೆ ಎಂದ ಅವರು ಸೇವೆ ಮಾಡಿದ ಕೈಗಳು ಎಂದೂ ಸೋಲುವುದಿಲ್ಲ ಬರುವ ದಿನಗಳಲ್ಲಿ ಇನ್ನೂ ಹೆಚ್ಚು ಹೆಚ್ಚು ಸೇವೆ ಮಾಡುವ ಶಕ್ತಿ ದೇವರು ಬರಿಸಲಿ ಎಂದು ನುಡಿದರು.

ನಿರ್ದೇಶಕರಾದ ಜಿ ವಿಜಯಕುಮಾರ್ ಅವರು ಮಾತನಾಡುತ್ತಾ ನಮ್ಮ ಆರೈಕೆ ಕೇಂದ್ರದಲ್ಲಿ ಹುಟ್ಟುಹಬ್ಬ ವಿವಾಹ ವಾರ್ಷಿಕೋತ್ಸವ ಹಾಗೂ ವಿಶೇಷ ಸಂದರ್ಭಗಳಲ್ಲಿ ನಮ್ಮ ಆರೈಕೆ ಕೇಂದ್ರಗಳಲ್ಲಿ ಆಚರಣೆ ಮಾಡುವುದರ ಮುಖಾಂತರ ಸೇವೆ ಸಲ್ಲಿಸಬಹುದಾಗಿದೆ ಎಂದು ನುಡಿದರು ಹಾಗೂ ನಿತ್ಯ ಅನ್ನಪೂರ್ಣ ಪ್ರಸಾದ ಯೋಜನೆಯು ಸಹ ಜಾರಿಯಲ್ಲಿದೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಮೊಮ್ಮಕ್ಕಳಾದ ಶ್ರೇಯಾ. ದಿಯಾ. ಹಾಗೂ ಗುಡ್ ಲಕ್ ಅರೈಕೆ ಕೇಂದ್ರದ ಉಪಾಧ್ಯಕ್ಷ ಶಿವಪ್ಪ ಗೌಡ. ನಿರ್ದೇಶಕರಾದ ಶ್ರೀನಿವಾಸ ಮತ್ತು ಕಾರ್ಯದರ್ಶಿ ಪಂಚಾಕ್ಷರಿ ಹಿರೇಮಠ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa “ಸಹ್ಯಾದ್ರಿ ಉತ್ಸವ” ಕ್ಕೆ ಸರ್ಕಾರವು ಮತ್ತೆ ಚಾಲನೆ ನೀಡಲು ಒತ್ತಾಯಿಸುತ್ತೇನೆ- ಶಾಸಕ ಎಸ್.ಎನ್. ಚನ್ನಬಸಪ್ಪ

S.N. Channabasappa ಶಿವಮೊಗ್ಗ ಜಿಲ್ಲೆಯ ಸಮೃದ್ಧ ಸಾಂಸ್ಕೃತಿಕ ಮತ್ತು ಐತಿಹಾಸಿಕ ಪರಂಪರೆಯನ್ನು...

Madhu Bangarappa ಎಸ್ಎಸ್ಎಲ್ ಸಿ ಪರೀಕ್ಷಾರ್ಥಿಗಳಿಗೆ ಶುಭ ಹಾರೈಸಿದ ಸಚಿವ ಮಧು ಬಂಗಾರಪ್ಪ

Madhu Bangarappa ರಾಜ್ಯಾದ್ಯಂತ ಇಂದಿನಿಂದ 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1...

Jawahar Navodaya Vidyalaya ಕುಂದಗಸವಿಯ ಎಂ.ಎನ್.ಅಪೂರ್ವ ನವೋದಯ ವಿದ್ಯಾಲಯಕ್ಕೆ ಆಯ್ಕೆ

Jawahar Navodaya Vidyalaya ಜವಾಹರ ನವೋದಯ ವಿದ್ಯಾಲಯ ನಡೆಸುವ ಪ್ರಸಕ್ತ ಸಾಲಿನ...