Thursday, August 13, 2026
Thursday, August 13, 2026

Shivamogga Deputy Commissioner ನೂತನ ಜಿಲ್ಲಾಧಿಕಾರಿಗಳಿಗೆ ಅದ್ದೂರಿ ಸ್ವಾಗತ

Date:

Shivamogga Deputy Commissioner ಶಿವಮೊಗ್ಗ ಜಿಲ್ಲೆಗೆ ವರ್ಗಾವಣೆಯಾಗಿ ನೂತನವಾಗಿ ಆಗಮಿಸಿರುವ ಶ್ರಿಯುತ ಮಾನ್ಯ ಗುರುದತ್ ಹೆಗಡೆ ಐ.ಎ.ಸ್, ಮಾನ್ಯ ಜಿಲ್ಲಾಧಿಕಾರಿಯವರಿಗೆ ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ವತಿಯಿಂದ ಜಿಲ್ಲಾಧಿಕಾರಿಯವರ ಕಚೇರಿಯಲ್ಲಿ ಆತ್ಮೀಯವಾಗಿ ಸ್ವಾಗತಿಸಲಾಯಿತು. ಸಂಘದ ಅಧ್ಯಕ್ಷರಾದ ಎನ್. ಗೋಪಿನಾಥ್ ಪುಷ್ಪಗುಚ್ಚ ನೀಡಿ ಗೌರವ ಸಮರ್ಪಣೆ ಮಾಡಿ ಶುಭ ಹಾರೈಸಿದರು.

Shivamogga Deputy Commissioner ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘವು ಸಾರ್ವಜನಿಕರ ಅಭಿವೃದ್ಧಿ ಪರ ಮತ್ತು ಸೇವಾ ಮನೋಭಾವನೆಯೊಂದಿಗೆ ಸರ್ಕಾರದ ಮದ್ಯೆ ಸೇತುವೆಯಾಗಿ ಕಾರ್ಯನಿರ್ವಹಿಸುತ್ತಿರುವುದಾಗಿ ತಿಳಿಸುತ್ತಾ ಜಿಲ್ಲೆಯ ಪ್ರವಾಸಿ ತಾಣಗಳ ಮೂಲಸೌಕರ್ಯಗಳ ಅಭಿವೃದ್ಧಿಯ ಮೂಲಕ ಪ್ರವಾಸೋದ್ಯಮ ಅಭಿವೃದ್ಧಿ ಮತ್ತು ಕೈಗಾರಿಕಾಭಿವೃದ್ದಿಗೆ ಹೆಚ್ಚಿನ ಆದ್ಯತೆ ನೀಡಬೇಕಾಗಿದೆ ಎಂದು ಮಾಹಿತಿ ನೀಡಿದರು. ಹಾಗೂ ಶಿವಮೊಗ್ಗ ಜಿಲ್ಲೆಯಲ್ಲಿ ತಮ್ಮ ಅಧಿಕಾರಾವಧಿಯಲ್ಲಿ ಸಾರ್ವಜನಿಕ ವಲಯದಲ್ಲಿ ಉತ್ತಮ ಆಡಳಿತಾತ್ಮಕ ಸುವ್ಯವಸ್ಥೆಯನ್ನು ನಿರ್ವಹಿಸುವ ಆಶಾಭಾವನೆಯನ್ನು ಹೊಂದಿರುವುದಾಗಿ ಅಧ್ಯಕ್ಷರು ತಿಳಿಸಿದರು.

ಮಾನ್ಯ ಜಿಲ್ಲಾಧಿಕಾರಿಗಳು ಸಂಘದ ವತಿಯಿಂದ ಆತ್ಮೀಯ ಗೌರವ ಸ್ವೀಕರಿಸಿ ಮಾತನಾಡಿ ಜಿಲ್ಲೆಯ ಅಭಿವೃದ್ಧಿಯ ನೆಲೆಯಲ್ಲಿ ಶಿವಮೊಗ್ಗ ಜನತೆ ಮತ್ತು ತಮ್ಮಗಳ ಸಲಹೆ-ಸಹಕಾರದೊಂದಿಗೆ ಜಿಲ್ಲೆಯಲ್ಲಿ ಉತ್ತಮ ಕಾರ್ಯನಿರ್ವಹಿಸಲು ಪ್ರ‍್ರಾಮಾಣಿಕ ಪ್ರಯತ್ನ ಮಾಡುವುದಾಗಿ ತಿಳಿಸಿದರು.

ಈ ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷ ಬಿ. ಗೋಪಿನಾಥ್, ಕಾರ್ಯದರ್ಶಿ ವಸಂತ್ ಹೊಬಳೀದಾರ್, ಸಹಕಾರ್ಯದರ್ಶಿ ಜಿ. ವಿಜಯಕುಮಾರ್, ನಿಕಟಪೂರ್ವ ಅಧ್ಯಕ್ಷರಾದ ಜೆ. ಆರ್ ವಾಸುದೇವ, ನಿರ್ದೇಶಕರುಗಳಾದ ಕೆ.ಎಸ್ ಸುಕುಮಾರ್, ಪರಮೇಶ್ವರ ಈ, ಪ್ರದೀಪ್ ವಿ.ಯಲಿ, ಜಗದೀಶ್ ಮಾತನವರ್, ಗಣೇಶ್ ಎಂ. ಅಂಗಡಿ, ಮಾಜಿ ಅಧ್ಯಕರುಗಳಾದ ಡಿ.ಎಂ. ಶಂಕರಪ್ಪ ಹಾಗೂ ಇನ್ನಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive special Article ಆಧ್ಯಾತ್ಮದ ಆನಂದ ಹಂಚಿದ ದಾವಣಗೆರೆಯ ಶ್ರೀಶಿವಾನಂದ ತೀರ್ಥರು ...

"ಅಧ್ಯಾತ್ಮಾನಂದ ನೀಡುತ್ತಿದ್ದ ದಾವಣಗೆರೆಯ ಶ್ರೀ ಶಿವಾನಂದ ತೀರ್ಥರು" ( ಅವರ ಜಯಂತ್ಯೋತ್ಸವ ತನ್ನಿಮಿತ್ತಈವಿಶೇಷಲೇಖನ) -Klive...

Kuvempu University ಆಗಸ್ಟ್ 13 & 14. ರಂದು ಕುವೆಂಪು ವಿವಿಯ ಸ್ನಾತಕೋತ್ತರ ಪದವಿಗಳಿಗೆ ಪ್ರವೇಶಾತಿ

2026-27ನೇ ಸಾಲಿಗೆ ಕುವೆಂಪು ವಿಶ್ವವಿದ್ಯಾಲಯದ ಜ್ಞಾನ ಸಹ್ಯಾದ್ರಿ ಕ್ಯಾಂಪಸ್, ಮತ್ತು ವಿವಿ...