Muzrai Department ರಾಜ್ಯದ ಪ್ರಮುಖ ದೇವಸ್ಥಾನಗಳಲ್ಲಿ ಸೇವೆಯನ್ನು ಕಾಯ್ದಿರಿಸಲು ಪ್ರತ್ಯೇಕ ಆ್ಯಪ್ ತಯಾರಿಸಲಾಗುತ್ತಿದ್ದು, ಆರಂಭಿಕವಾಗಿ ಬನಶಂಕರಿಯಲ್ಲಿರುವ ಬನಶಂಕರಿ ಅಮ್ಮನವರ ದೇವಾಲಯಕ್ಕೆ ಸಂಬಂಧಿಸಿದ ಆ್ಯಪ್ ಬಿಡುಗಡೆ ಮಾಡಲಾಗಿದೆ.
Muzrai Department ಭಕ್ತರ ಅನುಕೂಲಕ್ಕಾಗಿ ರಾಜ್ಯದ ಪ್ರಮುಖ ದೇವಾಲಯಗಳಲ್ಲಿನ ಸೇವೆಗಳನ್ನು ಆನ್ಲೈನ್ ಮೂಲಕ ಹಾಗೂ ಮೊಬೈಲ್ ಮೂಲಕ ಕಾಯ್ದಿರಿಸಲು ಪೋರ್ಟಲ್ ಹಾಗೂ ಮೊಬೈಲ್ ಆ್ಯಪ್ಅನ್ನು ಅಭಿವೃದ್ಧಿಪಡಿಸಲು ಉದ್ದೇಶಿಸಲಾಗಿದೆ. ಪ್ರತಿ ದೇವಸ್ಥಾನಕ್ಕೆ ಪ್ರತ್ಯೇಕ ಆ್ಯಪ್ ಇರಲಿದೆ. ಬನಶಂಕರಿ ದೇವಸ್ಥಾನದಲ್ಲಿ ಇದೀಗ ಆರಂಭವಾಗಿದ್ದು, ವಿವಿಧ ದೇವಸ್ಥಾನಗಳಿಗೆ ವಿಸ್ತರಿಸಲಾಗುವುದು ಎಂದು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.