Monday, December 15, 2025
Monday, December 15, 2025

R. Ashoka ಗುತ್ತಿಗೆದಾರರಿಗೆ ಹಣ ಪಾವತಿ ಪ್ರಕರಣ ವಿಚಾರಣಾ ಆಯೋಗ ರಚನೆ ಹಿನ್ನೆಲೆ, ಆಪಾದನೆಗಳು ಸರಿ ಇದ್ದಂತಿದೆ- ಆರ್.ಅಶೋಕ್

Date:

R. Ashoka ಗುತ್ತಿಗೆದಾರರಿಗೆ ಹಣ ಪಾವತಿ ಮಾಡುವುದರಿಂದ ಬಚಾವಾಗಲು ರಾಜ್ಯ ಸರ್ಕಾರ ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ ದಾಸ್ ಅವರ ನೇತೃತ್ವದ ಆಯೋಗ ರಚಿಸಿದೆ ಎಂಬ ಗುತ್ತಿಗೆದಾರರ ಆಪಾದನೆ ಸರಿ ಇದ್ದಂತಿದೆ” ಎಂದು ಮಾನ್ಯ ಹೈಕೋರ್ಟ್ ಕಾಂಗ್ರೆಸ್
ಸರ್ಕಾರಕ್ಕೆ ಛೀಮಾರಿ ಹಾಕಿದೆ ಎಂದು ವಿರೋಧ ಪಕ್ಷದ ನಾಯಕರಾದ ಆರ್. ಅಶೋಕ್ ಅವರು ಹೇಳಿದ್ದಾರೆ.

ಬಿಜೆಪಿ ಸರ್ಕಾರದ ಮೇಲೆ 40% ಕಮಿಷನ್ ಆಪಾದನೆ ಮಾಡಿ ಸುಳ್ಳು, ಅಪಪ್ರಚಾರದ ಮೂಲಕ ಅಧಿಕಾರಕ್ಕೆ ಬಂದ ಸಿ.ಎಂ. ಸಿದ್ದರಾಮಯ್ಯ
R. Ashoka ಸರ್ಕಾರ ಈಗ ಕಮಿಷನ್ ಕೊಟ್ಟವರಿಗೆ ಮಾತ್ರ ಬಿಲ್ ಕೊಟ್ಟು, ಕಮಿಷನ್ ಕೊಡದವರಿಗೆ ಹಣ ಬಿಡುಗಡೆ ಮಾಡದೆ ತನಿಖಾ ಆಯೋಗದ ಹೆಸರಿನಲ್ಲಿ ಬ್ಲ್ಯಾಕ್ ಮೇಲ್ ಮಾಡುತ್ತಿದೆ.ತಮ್ಮ ಮೊದಲ ಅವಧಿಯಲ್ಲಿ ಲೋಕಾಯುಕ್ತ ಸಂಸ್ಥೆಯನ್ನ ದುರ್ಬಲಗೊಳಿಸುವ ಮೂಲಕ ಭ್ರಷ್ಟರನ್ನು ರಕ್ಷಿಸಲು ಹೋಗಿ ಹೈಕೋರ್ಟ್ ನಿಂದ ಛೀಮಾರಿ ಹಾಕಿಸಿಕೊಂಡಿದ್ದ ಸಿಎಂ ಸಿದ್ದರಾಮಯ್ಯ
ಈಗ ಮತ್ತೊಮ್ಮೆ ರಂಗೋಲಿ ಕೆಳಗೆ ತೂರಲು ಹೋಗಿ ನ್ಯಾಯಾಲಯದಿಂದ ಛೀಮಾರಿ ಹಾಕಿಸಿಕೊಂಡಿದ್ದಾರೆ.
ಸಿದ್ದರಾಮಯ್ಯನವರೇ, ತಮಗೆ ಕಿಂಚಿತ್ತಾದರೂ ನಾಚಿಕೆ, ಮಾನ, ಮರ್ಯಾದೆ ಇದ್ದರೆ ತಮ್ಮ ಸರ್ಕಾರದಲ್ಲಿ ನಡೆಯುತ್ತಿರುವ ಭ್ರಷ್ಟಾಚಾರಕ್ಕೆ ನೈತಿಕ ಹೊಣೆ ಹೊತ್ತು ಈ ಕೂಡಲೇ ರಾಜೀನಾಮೆ ನೀಡಿ ರಾಜ್ಯದ ಜನತೆಯ ಕ್ಷಮೆ ಕೇಳಿ. ಸ್ವತಃ ರಾಜ್ಯದ ಉಚ್ಛ ನ್ಯಾಯಾಲಯವೇ ತಮ್ಮ ಸರ್ಕಾರದ ಮೇಲೆ ಆಪಾದನೆ ಮಾಡುತ್ತಿರುವಾಗ ಸಿಎಂ ಸ್ಥಾನದಲ್ಲಿ ಒಂದು ಕ್ಷಣವೂ ಮುಂದುವರೆಯಲು ತಮಗೆ ಅರ್ಹತೆ ಇಲ್ಲ ಎಂದು ಹೇಳಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...