Thursday, October 3, 2024
Thursday, October 3, 2024

Shimoga District Tourism Development ಪ್ರವಾಸಿಕ್ಷೇತ್ರಗಳ ಅಭಿವೃದ್ಧಿಗೆ ಸರ್ಕಾರ ಪೂರಕ ವ್ಯವಸ್ಥೆ ಕಲ್ಪಿಸಬೇಕು- ಡಿ.ಎಂ.ಶಂಕರಪ್ಪ

Date:

Shimoga District Tourism Development ಒಂದು ದೇಶದ ಆರ್ಥಿಕ ಶಕ್ತಿ ಸದೃಢ ಆಗಿರಬೇಕಾದರೆ ಪ್ರವಾಸೋದ್ಯಮ ಕ್ಷೇತ್ರ ಅಭಿವೃದ್ಧಿಗೊಳ್ಳಬೇಕು. ಪ್ರವಾಸೋದ್ಯಮ ಸ್ಥಳಗಳಿಗೆ ಸರ್ಕಾರ ಪೂರಕವಾದ ಅಗತ್ಯವಾದ ವ್ಯವಸ್ಥೆಗಳನ್ನು ಕಲ್ಪಿಸಲು ಸರ್ಕಾರ ಸೂಕ್ತ ವ್ಯವಸ್ಥೆ ಮಾಡಬೇಕು ಎಂದು ಶಿವಮೊಗ್ಗ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ವೇದಿಕೆ ಅಧ್ಯಕ್ಷ ಡಿ.ಎಂ.ಶಂಕರಪ್ಪ ಹೇಳಿದರು.

ಶಿವಮೊಗ್ಗ ಮಥುರಾ ಪಾರಾಡೈಸ್ ಸಭಾಂಗಣದಲ್ಲಿ ಶಿವಮೊಗ್ಗ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ವೇದಿಕೆ ವತಿಯಿಂದ ಅಂಡಮಾನ್ ಪ್ರವಾಸ ಚಾರಣಕ್ಕೆ ಹೊರಟಿರುವ 50 ಜನರ ತಂಡವನ್ನು ಬಿಳ್ಕೋಡುಗೆ ನೀಡಿ ಮಾತನಾಡಿದರು.

ಈಗಾಗಲೇ ಪ್ರವಾಸೋದ್ಯಮ ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ವಿವಿಧ ರಾಜ್ಯಗಳ ಪ್ರವಾಸವನ್ನು ಅತ್ಯಂತ ಕಡಿಮೆ ವೆಚ್ಚದಲ್ಲಿ ಉತ್ತಮ ವ್ಯವಸ್ಥೆಯೊಂದಿಗೆ ಚಾರಣದ ಜತೆ ಹಮ್ಮಿಕೊಳ್ಳುತ್ತ ಬಂದಿದ್ದೇವೆ. ಪ್ರವಾಸದಿಂದ ನಮ್ಮಲ್ಲಿ ಹೊಸ ಚೈತನ್ಯದ ಜತೆಯಲ್ಲಿ ವಿಶೇಷ ಸ್ಥಳಗಳ ಪರಿಚಯ ಆಗುತ್ತದೆ ಎಂದು ತಿಳಿಸಿದರು.

ಇದೇ ಸಂದರ್ಭದಲ್ಲಿ ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷ ಎನ್.ಗೋಪಿನಾಥ್ ಮಾತನಾಡಿ, ಅಭಿವೃದ್ಧಿ ವೇದಿಕೆಯಿಂದ ಆಯೋಜಿಸುತ್ತಿರುವ ಪ್ರವಾಸವು ಸುರಕ್ಷತೆ ಹಾಗೂ ಸೂಕ್ತ ವ್ಯವಸ್ಥೆಗಳನ್ನು ಒಳಗೊಂಡಿದ್ದು, ಪ್ರವಾಸ ಚಾರಣ ನಡೆಸಲಾಗುತ್ತಿದೆ ಎಂದು ಹೇಳಿದರು.

ಕೇಂದ್ರ ಸರ್ಕಾರವು ಪ್ರವಾಸೋದ್ಯಮಕ್ಕೆ ಪ್ರಸ್ತಕ ಸಾಲಿನ ಬಜೆಟ್‌ನಲ್ಲಿ ಸಾವಿರಾರು ಕೋಟಿ ರೂ. ಹಣ ಮೀಸಲಿಟ್ಟು, ಅಭಿವೃದ್ಧಿಗೆ ಹೆಚ್ಚು ಗಮನ ಹರಿಸಿರುವುದು ಸ್ವಾಗತಾರ್ಹ. ಪ್ರವಾಸಿಗರು ಪ್ಲಾಸ್ಟಿಕ್ ಬಳಕೆ ಮಾಡಬಾರದು. ಪ್ರವಾಸಿ ಸ್ಥಳಗಳ ಸ್ವಚ್ಛತೆಗೆ ಆದ್ಯತೆ ನೀಡಬೇಕು. ಪ್ರವಾಸಿ ಸ್ಥಳಗಳ ಸಂರಕ್ಷಣೆ ಮಾಡಿದಾಗ ವಿದೇಶಿ ಪ್ರವಾಸಿಗರು ನಮ್ಮ ಸ್ಥಳಗಳಿಗೆ ಹೆಚ್ಚಾಗಿ ಬರುತ್ತಾರೆ. ಸ್ಥಳೀಯ ಪ್ರವಾಸೋದ್ಯಮ ಅಭಿವೃದ್ಧಿಗೆ ಈಗಾಗಲೇ ಗೋವಾ, ಅಂಡಮಾನ್ ಸಂಸದರ ಭೇಟಿ ಮಾಡಿ ಚರ್ಚಿಸಲಾಗಿದೆ ಎಂದು ತಿಳಿಸಿದರು.

ಅಭಿವೃದ್ಧಿ ವೇದಿಕೆಯ ಅ.ನಾ.ವಿಜಯೇಂದ್ರ ಮಾತನಾಡಿ, ಚಾರಣ ಪ್ರವಾಸ ಮನುಷ್ಯನ ಅವಿಭಾಜ್ಯ ಅಂಗವಾಗಬೇಕು ಎಂದು ಅಭಿಪ್ರಾಯಪಟ್ಟರು.

Shimoga District Tourism Development ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಸಹ ಕಾರ್ಯದರ್ಶಿ ಜಿ.ವಿಜಯಕುಮಾರ್, ಡಾ. ನಾಗಭೂಷಣ, ಅ.ಮ.ಪ್ರಕಾಶ್, ಆರತಿ ಹಾಗೂ ಚಾರಣಿಗರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Rotary Shivamogga ಹೆಣ್ಣುಮಕ್ಕಳಿಗೆ ಪಾಠ ಪ್ರವಚನ ಕಲ್ಪಿಸಿರುವ ಸರ್ಕಾರ ದ ಮಹತ್ವ ಯೋಜನೆ- ಭಾರದ್ವಾಜ್

Rotary Shivamogga ದೇಶದ ಏಳಿಗೆಗಾಗಿ ಉತ್ತಮ ಪ್ರಜೆಗಳನ್ನು ನಿರ್ಮಿಸುವ ಮಹತ್ವದ ಕಾರ್ಯ...

Gandhi Jayanthi ಗಾಂಧೀಜಿ ಅವರಲ್ಲದೇ ಅನೇಕರ ಹೋರಾಟದ ಫಲ, ಸ್ವಾತಂತ್ರ್ಯ. ಅದನ್ನ ಉಳಿಸಿಕೊಳ್ಳಬೇಕು- ಮಧು ಬಂಗಾರಪ್ಪ

Gandhi Jayanthi ಗಾಂಧೀಜಿ ಸೇರಿದಂತೆ ಅನೇಕ ಹೋರಾಟಗಾರರ ಹೋರಾಟದ ಫಲದಿಂದ ನಮಗೆ...

Shivamogga Dasara ಶಿವಮೊಗ್ಗ ದಸರಾ ಉತ್ಸವಕ್ಕೆ ಕ್ಷಣಗಣನೆ

Shivamogga Dasara ರಾಜ್ಯದ ಎರಡನೇ ಅತಿ ದೊಡ್ಡ ದಸರಾ ಮಹೋತ್ಸವ ‘ಶಿವಮೊಗ್ಗ...

Chaudeshwari Temple ಶಿವಮೊಗ್ಗ ಚಾಲುಕ್ಯನಗರದ ಶ್ರೀಚೌಡೇಶ್ವರಿ ದೇಗುಲದಲ್ಲಿ ನವರಾತ್ರಿ ಉತ್ಸವ

Chaudeshwari Temple ಚಾಲುಕ್ಯನಗರದಲ್ಲಿರುವ ಶ್ರೀ ಚೌಡೇಶ್ವರಿ ಅಮ್ಮನವರ ದೇವಸ್ಥಾನ ನವರಾತ್ರಿಯ...